<p><strong>ಚಾಮರಾಜನಗರ:</strong>ಅದ್ಧೂರಿ ಗಣೇಶೋತ್ಸವಕ್ಕೆ ಹೆಸರಾದ ಚಾಮರಾಜನಗರದ ಶ್ರೀ ವಿದ್ಯಾಗಣಪತಿ ಮಂಡಳಿ ಕೂಡ ಈ ವರ್ಷ ಸರಳವಾಗಿ ಗಣೇಶೋತ್ಸವ ಆಯೋಜಿಸಿದ್ದು, ಎರಡೂವರೆ ಅಡಿಯ ಗಣಪತಿ ವಿಗ್ರಹವನ್ನು ಪ್ರತಿಷ್ಠಾನೆ ಮಾಡಿದೆ. ಈ ಬಾರಿಯದ್ದು, 58ನೇ ವರ್ಷದ ಗಣೇಶೋತ್ಸವ.</p>.<p>ಮಂಡಳಿಯು ಪ್ರತಿ ವರ್ಷ 30 ದಿನಗಳಿಗಿಂತಲೂ ಹೆಚ್ಚು ಕಾಲ ಗಣೇಶನನ್ನು ಪೂಜಿಸಿ, ನಂತರ ವಿಸರ್ಜನೆ ಮಾಡುತ್ತಿತ್ತು. ದಿನಪೂರ್ತಿ ನಡೆಯುತ್ತಿದ್ದ ವಿಸರ್ಜನೆ ಮೆರವಣಿಗೆ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಆದರೆ, ಕೊರೊನಾ ವೈರಸ್ ಕಾರಣದಿಂದ ಈ ವರ್ಷದ ಗಣೇಶೋತ್ಸವವನ್ನು ಮೂರು ದಿನಕ್ಕೆ ಮಿತಿಗೊಳಿಸಿದೆ.</p>.<p>ಶನಿವಾರ ಬೆಳಿಗ್ಗೆ 11.30ಕ್ಕೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮಂಗಳವಾರ ಲೋಕಕಲ್ಯಾಣಾರ್ಥವಾಗಿ ಗಣಪತಿ ಹವನ ನೆರವೇರಿತು. ಸೋಮವಾರ ಸಂಜೆ ಸೂರ್ಯಾಸ್ತದ ನಂತರ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.</p>.<p>‘ಸರ್ಕಾರದ ಮಾರ್ಗಸೂಚಿಗೆ ಅನುಸಾರವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ವರ್ಷ ಮೂರು ದಿನ ಮಾತ್ರ ಪೂಜಿಸುತ್ತಿದ್ದೇವೆ. ಸೋಮವಾರ ಸಂಜೆ ವಿಗ್ರಹ ವಿಸರ್ಜನೆ ನಡೆಯಲಿದೆ. ಪ್ರತಿಷ್ಠಾಪನೆ ಮಾಡಿದ ಸ್ಥಳದ ಸಮೀಪವೇ ಡ್ರಮ್ಗೆ ನೀರು ತುಂಬಿಸಿ, ಅದರಲ್ಲಿ ವಿಸರ್ಜನೆ ಮಾಡುತ್ತೇವೆ’ ಎಂದು ಮಂಡಳಿಯ ಗೌರವ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong>ಅದ್ಧೂರಿ ಗಣೇಶೋತ್ಸವಕ್ಕೆ ಹೆಸರಾದ ಚಾಮರಾಜನಗರದ ಶ್ರೀ ವಿದ್ಯಾಗಣಪತಿ ಮಂಡಳಿ ಕೂಡ ಈ ವರ್ಷ ಸರಳವಾಗಿ ಗಣೇಶೋತ್ಸವ ಆಯೋಜಿಸಿದ್ದು, ಎರಡೂವರೆ ಅಡಿಯ ಗಣಪತಿ ವಿಗ್ರಹವನ್ನು ಪ್ರತಿಷ್ಠಾನೆ ಮಾಡಿದೆ. ಈ ಬಾರಿಯದ್ದು, 58ನೇ ವರ್ಷದ ಗಣೇಶೋತ್ಸವ.</p>.<p>ಮಂಡಳಿಯು ಪ್ರತಿ ವರ್ಷ 30 ದಿನಗಳಿಗಿಂತಲೂ ಹೆಚ್ಚು ಕಾಲ ಗಣೇಶನನ್ನು ಪೂಜಿಸಿ, ನಂತರ ವಿಸರ್ಜನೆ ಮಾಡುತ್ತಿತ್ತು. ದಿನಪೂರ್ತಿ ನಡೆಯುತ್ತಿದ್ದ ವಿಸರ್ಜನೆ ಮೆರವಣಿಗೆ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಆದರೆ, ಕೊರೊನಾ ವೈರಸ್ ಕಾರಣದಿಂದ ಈ ವರ್ಷದ ಗಣೇಶೋತ್ಸವವನ್ನು ಮೂರು ದಿನಕ್ಕೆ ಮಿತಿಗೊಳಿಸಿದೆ.</p>.<p>ಶನಿವಾರ ಬೆಳಿಗ್ಗೆ 11.30ಕ್ಕೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಮಂಗಳವಾರ ಲೋಕಕಲ್ಯಾಣಾರ್ಥವಾಗಿ ಗಣಪತಿ ಹವನ ನೆರವೇರಿತು. ಸೋಮವಾರ ಸಂಜೆ ಸೂರ್ಯಾಸ್ತದ ನಂತರ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.</p>.<p>‘ಸರ್ಕಾರದ ಮಾರ್ಗಸೂಚಿಗೆ ಅನುಸಾರವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ವರ್ಷ ಮೂರು ದಿನ ಮಾತ್ರ ಪೂಜಿಸುತ್ತಿದ್ದೇವೆ. ಸೋಮವಾರ ಸಂಜೆ ವಿಗ್ರಹ ವಿಸರ್ಜನೆ ನಡೆಯಲಿದೆ. ಪ್ರತಿಷ್ಠಾಪನೆ ಮಾಡಿದ ಸ್ಥಳದ ಸಮೀಪವೇ ಡ್ರಮ್ಗೆ ನೀರು ತುಂಬಿಸಿ, ಅದರಲ್ಲಿ ವಿಸರ್ಜನೆ ಮಾಡುತ್ತೇವೆ’ ಎಂದು ಮಂಡಳಿಯ ಗೌರವ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>