<p><strong>ಚಾಮರಾಜನಗರ:</strong> ಗೌರಿ–ಗಣೇಶ ಹಬ್ಬದ ಅಂಗವಾಗಿ ಐದು ದಿನ ಸಾರ್ವಜನಿಕ ಗಣೇಶೋತ್ಸವ ನಡೆಸಲು ಸರ್ಕಾರ ಷರತ್ತುಬದ್ಧ ಅನುಮತಿ ನೀಡಿರುವುದರ ಬೆನ್ನಲ್ಲೇ; ಜಿಲ್ಲೆಯಲ್ಲಿ ಗಣೇಶ ವಿಗ್ರಹ ತಯಾರಕರು ಹಾಗೂ ವ್ಯಾಪಾರಿಗಳು ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಲು ಆರಂಭಿಸಿದ್ದಾರೆ.</p>.<p>ನಗರದಲ್ಲಿ ಎಂಟು ಅಂಗಡಿಗಳನ್ನು ಹಾಕಲಾಗಿದೆ. ವ್ಯಾಪಾರಿಗಳು ಗ್ರಾಹಕರ ನಿರೀಕ್ಷೆಯಲ್ಲಿದ್ದಾರೆ.</p>.<p>ಕಳೆದ ಬಾರಿ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಇರಲಿಲ್ಲ. ಹಾಗಾಗಿ ವಿಗ್ರಹ ತಯಾರಕರು ಹಾಗೂ ವ್ಯಾಪಾರಿಗಳು ನಷ್ಟ ಅನುಭವಿಸಿದ್ದರು. ಈ ಬಾರಿಯೂ ಗಣೇಶನ ಹಬ್ಬದ ಮೇಲೆ ಕೋವಿಡ್ ಕರಿಛಾಯೆ ಆವರಿಸಿತ್ತು. ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡದಿದ್ದರೆ ಈ ವರ್ಷವೂ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಆತಂಕದಲ್ಲಿ ವಿಗ್ರಹ ತಯಾರಿಕರಿದ್ದರು.</p>.<p>ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ, ರಾಜ್ಯ ಸರ್ಕಾರ ಹಲವು ಷರತ್ತುಗಳೊಂದಿಗೆ ಗಣೇಶೋತ್ಸವ ಆಯೋಜಿಸಲು ಒಪ್ಪಿಗೆ ನೀಡಿರುವುದು ಮೂರ್ತಿ ತಯಾರಕರು ಹಾಗೂ ವ್ಯಾಪಾರಿಗಳಲ್ಲಿ ಮಂದಹಾಸ ಮೂಡಿಸಿದೆ.</p>.<p>ಸರ್ಕಾರದ ಆದೇಶದ ಅನ್ವಯ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಲವು ಷರತ್ತುಗಳನ್ನು ಹಾಕಿ, ಕೋವಿಡ್ ನಿಯಮಗಳಿಗೆ ಒಳಪಟ್ಟು ಸರಳ ಸಾಂಪ್ರದಾಯಿಕ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದ್ದಾರೆ.</p>.<p>‘ಸರ್ಕಾರ ಹಾಗೂ ಜಿಲ್ಲಾಡಳಿತ ಗಣೇಶೋತ್ಸವಕ್ಕೆ ಅನುಮತಿ ನೀಡಿರುವು ದರಿಂದ ಮಳಿಗೆಗಳನ್ನು ಹಾಕಿದ್ದೇವೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಬುಧವಾರದಿಂದ ನೋಡಬೇಕು’ ಎಂದು ವ್ಯಾಪಾರಿ ಚಾಮರಾಜನಗರದ ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲವರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಐದು ಅಡಿಗಳಿಂದ ಹೆಚ್ಚು ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಬಾರದು ಎಂಬ ನಿಯಮ ಇರುವುದರಿಂದ ನಾಲ್ಕು ಅಡಿಗಳಿಗಿಂತ ಕಡಿಮೆ ಎತ್ತರದ ಮೂರ್ತಿಗಳನ್ನು ಮಾರಾಟಕ್ಕೆ ಇಟ್ಟಿದ್ದೇವೆ. ಚಿಕ್ಕ ಗಾತ್ರದಿಂದ ಮಧ್ಯಮ ಗಾತ್ರದವರೆಗಿನ ವಿಗ್ರಹಗಳಿವೆ’ ಎಂದು ಅವರು ಹೇಳಿದರು.</p>.<p class="Subhead"><strong>ಕಡಿಮೆ ದರಕ್ಕೆ ಒತ್ತಾಯ: </strong>ಈ ಮಧ್ಯೆ, ಗಣಪತಿ ಮೂರ್ತಿಗಳ ಖರೀದಿಗೆ ಬರುತ್ತಿರುವವರು ನಿಗದಿ ಪಡಿಸಿರುವ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಮೂರ್ತಿಗಳನ್ನು ಕೇಳುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದರು.</p>.<p>‘ಕೋವಿಡ್ ಕಾರಣದಿಂದ ಮೂರ್ತಿಗಳ ಬೆಲೆ ಹೆಚ್ಚಳ ಮಾಡಿಲ್ಲ. ₹ 50ರಿಂದ ಹಿಡಿದು ₹ 5000 ಬೆಲೆಯ ವಿಗ್ರಹಗಳನ್ನಿಟ್ಟಿದ್ದೇವೆ. ನಾವು ಹೇಳಿದ ದರಕ್ಕಿಂತಲೂ ಕಡಿಮೆ ಬೆಲೆಗೆ ಜನರು ಕೇಳುತ್ತಿದ್ದಾರೆ’ ಎಂದು ಮಂಜುನಾಥ್ ಮಾಹಿತಿ ನೀಡಿದರು.</p>.<p>‘ಸರ್ಕಾರ ಷರತ್ತುಬದ್ಧವಾಗಿಯಾದರೂ ಗಣೇಶೋತ್ಸವಕ್ಕೆ ಅವಕಾಶ ನೀಡಿರುವುದರಿಂದ ಸ್ವಲ್ಪ ಸಮಾಧಾನವಾಗಿದೆ. ಕೆಲವು ವಿಗ್ರಹಗಳಾದರೂ ಮಾರಾಟವಾಗುವ ನಿರೀಕ್ಷೆಯಲ್ಲಿದ್ದೇವೆ’ ಎಂದು ಅವರು ಹೇಳಿದರು.</p>.<p class="Briefhead"><strong>ಜಿಲ್ಲಾಡಳಿತ ಹಾಕಿರುವ ಷರತ್ತುಗಳು</strong></p>.<p>* ಸಾರ್ವಜನಿಕ ಸ್ಥಳಗಳಲ್ಲಿ ಗರಿಷ್ಠ ನಾಲ್ಕು ಅಡಿ, ಮನೆಗಳಲ್ಲಿ ಗರಿಷ್ಠ 2 ಅಡಿ ಎತ್ತರದ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ</p>.<p>* ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಒಂದು ವಾರ್ಡ್ಗೆ ಒಂದೇ ಗಣೇಶೋತ್ಸವ</p>.<p>* ಒಮ್ಮೆಗೆ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ</p>.<p>*ಆಯೋಜಕರು ಕೋವಿಡ್-19ರ ನೆಗೆಟಿವ್ ವರದಿ ಮತ್ತು ಲಸಿಕೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ</p>.<p>* ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ</p>.<p>* ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಡಿ.ಜೆ ಸಂಗೀತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ</p>.<p>* ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನ ನಿತ್ಯವೂ ಸ್ಯಾನಿಟೈಸ್ ಮಾಡಬೇಕು</p>.<p>* ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು</p>.<p>* ಗಣೇಶ ವಿಗ್ರಹಗಳನ್ನು ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆ ನಡೆಸುವಂತಿಲ್ಲ</p>.<p>* ಮನೆಗಳಲ್ಲಿ ಪ್ರತಿಷ್ಠಾಪಿಸಿದ ವಿಗ್ರಹ, ಮೂರ್ತಿಗಳನ್ನು ಮನೆಗಳಲ್ಲೇ ವಿಸರ್ಜಿಸಬೇಕು</p>.<p>* ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ವಿಗ್ರಹಗಳನ್ನು ಹೊಂಡ, ‘ಮೊಬೈಲ್ ಟ್ಯಾಂಕ್’ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು</p>.<p>* ಶಾಂತಿ ಮತ್ತು ಸೌಹಾರ್ದಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಉಂಟು ಮಾಡಬಾರದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಗೌರಿ–ಗಣೇಶ ಹಬ್ಬದ ಅಂಗವಾಗಿ ಐದು ದಿನ ಸಾರ್ವಜನಿಕ ಗಣೇಶೋತ್ಸವ ನಡೆಸಲು ಸರ್ಕಾರ ಷರತ್ತುಬದ್ಧ ಅನುಮತಿ ನೀಡಿರುವುದರ ಬೆನ್ನಲ್ಲೇ; ಜಿಲ್ಲೆಯಲ್ಲಿ ಗಣೇಶ ವಿಗ್ರಹ ತಯಾರಕರು ಹಾಗೂ ವ್ಯಾಪಾರಿಗಳು ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಲು ಆರಂಭಿಸಿದ್ದಾರೆ.</p>.<p>ನಗರದಲ್ಲಿ ಎಂಟು ಅಂಗಡಿಗಳನ್ನು ಹಾಕಲಾಗಿದೆ. ವ್ಯಾಪಾರಿಗಳು ಗ್ರಾಹಕರ ನಿರೀಕ್ಷೆಯಲ್ಲಿದ್ದಾರೆ.</p>.<p>ಕಳೆದ ಬಾರಿ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ಇರಲಿಲ್ಲ. ಹಾಗಾಗಿ ವಿಗ್ರಹ ತಯಾರಕರು ಹಾಗೂ ವ್ಯಾಪಾರಿಗಳು ನಷ್ಟ ಅನುಭವಿಸಿದ್ದರು. ಈ ಬಾರಿಯೂ ಗಣೇಶನ ಹಬ್ಬದ ಮೇಲೆ ಕೋವಿಡ್ ಕರಿಛಾಯೆ ಆವರಿಸಿತ್ತು. ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡದಿದ್ದರೆ ಈ ವರ್ಷವೂ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಆತಂಕದಲ್ಲಿ ವಿಗ್ರಹ ತಯಾರಿಕರಿದ್ದರು.</p>.<p>ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ, ರಾಜ್ಯ ಸರ್ಕಾರ ಹಲವು ಷರತ್ತುಗಳೊಂದಿಗೆ ಗಣೇಶೋತ್ಸವ ಆಯೋಜಿಸಲು ಒಪ್ಪಿಗೆ ನೀಡಿರುವುದು ಮೂರ್ತಿ ತಯಾರಕರು ಹಾಗೂ ವ್ಯಾಪಾರಿಗಳಲ್ಲಿ ಮಂದಹಾಸ ಮೂಡಿಸಿದೆ.</p>.<p>ಸರ್ಕಾರದ ಆದೇಶದ ಅನ್ವಯ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಲವು ಷರತ್ತುಗಳನ್ನು ಹಾಕಿ, ಕೋವಿಡ್ ನಿಯಮಗಳಿಗೆ ಒಳಪಟ್ಟು ಸರಳ ಸಾಂಪ್ರದಾಯಿಕ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದ್ದಾರೆ.</p>.<p>‘ಸರ್ಕಾರ ಹಾಗೂ ಜಿಲ್ಲಾಡಳಿತ ಗಣೇಶೋತ್ಸವಕ್ಕೆ ಅನುಮತಿ ನೀಡಿರುವು ದರಿಂದ ಮಳಿಗೆಗಳನ್ನು ಹಾಕಿದ್ದೇವೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ. ಬುಧವಾರದಿಂದ ನೋಡಬೇಕು’ ಎಂದು ವ್ಯಾಪಾರಿ ಚಾಮರಾಜನಗರದ ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲವರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಐದು ಅಡಿಗಳಿಂದ ಹೆಚ್ಚು ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಬಾರದು ಎಂಬ ನಿಯಮ ಇರುವುದರಿಂದ ನಾಲ್ಕು ಅಡಿಗಳಿಗಿಂತ ಕಡಿಮೆ ಎತ್ತರದ ಮೂರ್ತಿಗಳನ್ನು ಮಾರಾಟಕ್ಕೆ ಇಟ್ಟಿದ್ದೇವೆ. ಚಿಕ್ಕ ಗಾತ್ರದಿಂದ ಮಧ್ಯಮ ಗಾತ್ರದವರೆಗಿನ ವಿಗ್ರಹಗಳಿವೆ’ ಎಂದು ಅವರು ಹೇಳಿದರು.</p>.<p class="Subhead"><strong>ಕಡಿಮೆ ದರಕ್ಕೆ ಒತ್ತಾಯ: </strong>ಈ ಮಧ್ಯೆ, ಗಣಪತಿ ಮೂರ್ತಿಗಳ ಖರೀದಿಗೆ ಬರುತ್ತಿರುವವರು ನಿಗದಿ ಪಡಿಸಿರುವ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಮೂರ್ತಿಗಳನ್ನು ಕೇಳುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದರು.</p>.<p>‘ಕೋವಿಡ್ ಕಾರಣದಿಂದ ಮೂರ್ತಿಗಳ ಬೆಲೆ ಹೆಚ್ಚಳ ಮಾಡಿಲ್ಲ. ₹ 50ರಿಂದ ಹಿಡಿದು ₹ 5000 ಬೆಲೆಯ ವಿಗ್ರಹಗಳನ್ನಿಟ್ಟಿದ್ದೇವೆ. ನಾವು ಹೇಳಿದ ದರಕ್ಕಿಂತಲೂ ಕಡಿಮೆ ಬೆಲೆಗೆ ಜನರು ಕೇಳುತ್ತಿದ್ದಾರೆ’ ಎಂದು ಮಂಜುನಾಥ್ ಮಾಹಿತಿ ನೀಡಿದರು.</p>.<p>‘ಸರ್ಕಾರ ಷರತ್ತುಬದ್ಧವಾಗಿಯಾದರೂ ಗಣೇಶೋತ್ಸವಕ್ಕೆ ಅವಕಾಶ ನೀಡಿರುವುದರಿಂದ ಸ್ವಲ್ಪ ಸಮಾಧಾನವಾಗಿದೆ. ಕೆಲವು ವಿಗ್ರಹಗಳಾದರೂ ಮಾರಾಟವಾಗುವ ನಿರೀಕ್ಷೆಯಲ್ಲಿದ್ದೇವೆ’ ಎಂದು ಅವರು ಹೇಳಿದರು.</p>.<p class="Briefhead"><strong>ಜಿಲ್ಲಾಡಳಿತ ಹಾಕಿರುವ ಷರತ್ತುಗಳು</strong></p>.<p>* ಸಾರ್ವಜನಿಕ ಸ್ಥಳಗಳಲ್ಲಿ ಗರಿಷ್ಠ ನಾಲ್ಕು ಅಡಿ, ಮನೆಗಳಲ್ಲಿ ಗರಿಷ್ಠ 2 ಅಡಿ ಎತ್ತರದ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ</p>.<p>* ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಒಂದು ವಾರ್ಡ್ಗೆ ಒಂದೇ ಗಣೇಶೋತ್ಸವ</p>.<p>* ಒಮ್ಮೆಗೆ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ</p>.<p>*ಆಯೋಜಕರು ಕೋವಿಡ್-19ರ ನೆಗೆಟಿವ್ ವರದಿ ಮತ್ತು ಲಸಿಕೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ</p>.<p>* ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ</p>.<p>* ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಡಿ.ಜೆ ಸಂಗೀತ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ</p>.<p>* ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನ ನಿತ್ಯವೂ ಸ್ಯಾನಿಟೈಸ್ ಮಾಡಬೇಕು</p>.<p>* ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು</p>.<p>* ಗಣೇಶ ವಿಗ್ರಹಗಳನ್ನು ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆ ನಡೆಸುವಂತಿಲ್ಲ</p>.<p>* ಮನೆಗಳಲ್ಲಿ ಪ್ರತಿಷ್ಠಾಪಿಸಿದ ವಿಗ್ರಹ, ಮೂರ್ತಿಗಳನ್ನು ಮನೆಗಳಲ್ಲೇ ವಿಸರ್ಜಿಸಬೇಕು</p>.<p>* ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ವಿಗ್ರಹಗಳನ್ನು ಹೊಂಡ, ‘ಮೊಬೈಲ್ ಟ್ಯಾಂಕ್’ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು</p>.<p>* ಶಾಂತಿ ಮತ್ತು ಸೌಹಾರ್ದಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಉಂಟು ಮಾಡಬಾರದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>