ಬುಧವಾರ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಸಿದರು. ಅವರ ಪರವಾಗಿ ರೋಡ್ ಶೋ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಬರುತ್ತಿದ್ದುದನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಮಂಗಳವಾರ ರಾತ್ರಿ ಭುವನೇಶ್ವರಿ ವೃತ್ತ, ಕೊಳ್ಳೇಗಾಲ ರಸ್ತೆ, ನಂಜನಗೂಡು ರಸ್ತೆಯ ಅಲ್ಲಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದರು.