<p><strong>ಯಳಂದೂರು:</strong> ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಗಿರಿಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು.ಮೇಕೆಗಳು ನಡೆದಾಡುವ ಏಟಿಎಂ ಆಗಿದ್ದು, ಸಂಪತ್ತಿನ ಜಾನುವಾರು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಮುರುಟಿಪಾಳ್ಯ ಗ್ರಾಮದಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿರಿವಾಸಿಗಳಿಗೆ ಮೇಕೆಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಸೋಲಿಗರಿಗೆ ಮೈಕ್ರೊ ಕ್ರೆಡಿಟ್ ಪ್ರೇರಣ ಯೋಜನೆಯಡಿ ಒಂದು ಕುಟುಂಬಕ್ಕೆ ₹25 ಸಾವಿರ ವೆಚ್ಚದಲ್ಲಿ ಮೇಕೆಗಳನ್ನು ನೀಡಲಾಗುತ್ತದೆ. 10 ಕುಟುಂಬಕ್ಕೆ ₹2.50 ಲಕ್ಷ ಮೌಲ್ಯದ ಆಡುಗಳನ್ನು ಹಂಚಿಕೆ ಮಾಡಲಾಗಿದೆ. ಇವುಗಳನ್ನು ಸಾಕಣೆ ಮಾಡುವ ಜೊತೆಯಲ್ಲಿ ಉಪ ಕಸುಬುಗಳನ್ನು ಕಲಿತು ಆದಾಯ ಹೆಚ್ಚಿಸಿಕೊಳ್ಳಬೇಕು. ಸೋಲಿಗರನ್ನು ಅಲೆಮಾರಿ ಕುಟುಂಬಗಳ ಸಾಲಿಗೆ ಸೇರಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಪಶು ಇಲಾಖೆಯ ಅಧಿಕಾರಿ ನವೀನ್, ಆರ್ಎಫ್ಒ ಸತೀಶ್, ರೇವಣ್ಣ, ಗ್ರಾ.ಪಂ. ಸದಸ್ಯರು ಹಾಗೂ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಗಿರಿಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು.ಮೇಕೆಗಳು ನಡೆದಾಡುವ ಏಟಿಎಂ ಆಗಿದ್ದು, ಸಂಪತ್ತಿನ ಜಾನುವಾರು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಮುರುಟಿಪಾಳ್ಯ ಗ್ರಾಮದಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿರಿವಾಸಿಗಳಿಗೆ ಮೇಕೆಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಸೋಲಿಗರಿಗೆ ಮೈಕ್ರೊ ಕ್ರೆಡಿಟ್ ಪ್ರೇರಣ ಯೋಜನೆಯಡಿ ಒಂದು ಕುಟುಂಬಕ್ಕೆ ₹25 ಸಾವಿರ ವೆಚ್ಚದಲ್ಲಿ ಮೇಕೆಗಳನ್ನು ನೀಡಲಾಗುತ್ತದೆ. 10 ಕುಟುಂಬಕ್ಕೆ ₹2.50 ಲಕ್ಷ ಮೌಲ್ಯದ ಆಡುಗಳನ್ನು ಹಂಚಿಕೆ ಮಾಡಲಾಗಿದೆ. ಇವುಗಳನ್ನು ಸಾಕಣೆ ಮಾಡುವ ಜೊತೆಯಲ್ಲಿ ಉಪ ಕಸುಬುಗಳನ್ನು ಕಲಿತು ಆದಾಯ ಹೆಚ್ಚಿಸಿಕೊಳ್ಳಬೇಕು. ಸೋಲಿಗರನ್ನು ಅಲೆಮಾರಿ ಕುಟುಂಬಗಳ ಸಾಲಿಗೆ ಸೇರಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಪಶು ಇಲಾಖೆಯ ಅಧಿಕಾರಿ ನವೀನ್, ಆರ್ಎಫ್ಒ ಸತೀಶ್, ರೇವಣ್ಣ, ಗ್ರಾ.ಪಂ. ಸದಸ್ಯರು ಹಾಗೂ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>