‘ಮಳೆ ಇಲ್ಲದೆ ಜಿಲ್ಲೆಯ ರೈತರು ಸಂಕಷ್ಟ ಅನುಭವಿಸಿದ್ದರು. ಕಳೆದ ವಾರ ಉತ್ತಮ ಮಳೆಯಾಗಿರುವುದರಿಂದ ಅನುಕೂಲವಾಗಿದೆ. ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಭತ್ತ, ರಾಗಿ, ಜೋಳ ಬಿತ್ತನೆ ಆರಂಭಿಸಿದ್ದಾರೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದರು.