<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಉತ್ತಮವಾಗಿ ಆಗಿದ್ದು, ಕೃಷಿಕರಿಗೆ ಉಪಯುಕ್ತವಾಗಿದೆ.</p>.<p>ಈ ವರ್ಷ ಶೇ 30ರಿಂದ 49ರಷ್ಟು ಮಳೆ ಹೆಚ್ಚಾಗಿದೆ. ಹಂಗಳ ಹೋಬಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ರೈತರು ಬಿತ್ತನೆ ಮಾಡಿದಕಡಲೆಕಾಯಿ, ಹುರುಳಿ ಹಾಗೂ ತರಕಾರಿ ಬೆಳೆಗಳಿಗೆ ಮಳೆಯಿಂದಾಗಿ ಪ್ರಯೋಜನವಾಗಿದೆ.</p>.<p>ಜನವರಿ 1ರಿಂದ ಸೆಪ್ಟೆಂಬರ್ 10ರ ಅವಧಿಯಲ್ಲಿ ತಾಲ್ಲೂಕಿನಲ್ಲಿ ಸಾಮಾನ್ಯವಾಗಿ 41.3 ಸೆಂ.ಮೀ ಮಳೆಯಾಗುತ್ತದೆ. ಈ ವರ್ಷ 61.3 ಸೆಂ.ಮೀ ಮಳೆ ಸುರಿದಿದೆ. ಮುಂಗಾರು ಅವಧಿಯಲ್ಲಿ ಜೂನ್ 1ರಿಂದ ಸೆ.10ರವರೆಗೆ ವಾಡಿಕೆಯಲ್ಲಿ 17.7 ಸೆಂ.ಮೀ ಮಳೆಯಾಗುತ್ತದೆ. ಈ ವರ್ಷ 34.6 ಸೆಂ.ಮೀ ಮಳೆಯಾಗಿದೆ. ಶೇ 96ರಷ್ಟು ಹೆಚ್ಚು ಮಳೆ ಬಿದ್ದಿದೆ.</p>.<p>ಹಂಗಳ ಹೋಬಳಿ ವ್ಯಾಪ್ತಿಯಲ್ಲಿ 44.8 ಸೆಂ.ಮೀಗೆ 68.5 ಸೆಂ.ಮೀ, ಕಸಬಾ ಹೋಬಳಿಯಲ್ಲಿ 41.3 ಸೆಂ.ಮೀಗೆ 56.2 ಸೆಂ.ಮೀ, ಬೇಗೂರು ವ್ಯಾಪ್ತಿಯಲ್ಲಿ 37.4 ಸೆಂ.ಮೀಗೆ 51.6 ಸೆಂ.ಮೀ ಹಾಗೂ ತೆರಕಣಾಂಬಿ ಹೋಬಳಿಯ ಭಾಗದಲ್ಲಿ 42.0 ಸೆಂ.ಮೀ ಬದಲಾಗಿ 54.4 ಸೆಂ.ಮೀಗಳಷ್ಟು ಮಳೆ ಬಿದ್ದಿದೆ.</p>.<p>ತಾಲ್ಲೂಕಿನಾದ್ಯಂತ ಹೆಚ್ಚು ರೈತರು ಮಳೆಯನ್ನೇ ಆಶ್ರಯಿಸಿ ಕೃಷಿ ಚಟುವಟಿಕೆ ಮಾಡುತ್ತಾರೆ. ಜೋಳ, ಹತ್ತಿ, ಚೆಂಡುಹೂ, ಹುರುಳಿ, ಕಡಲೆಕಾಯಿ, ಎಳ್ಳು, ಮುಸುಕಿನ ಜೋಳ ಮತ್ತು ತರಕಾರಿ, ಸೊಪ್ಪುಗಳು ಬೆಳೆಯುತ್ತಾರೆ. ಎರಡು ವಾರಗಳಿಂದ ಸತತ ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ನಗು ಮೂಡಿದೆ.</p>.<p>ಕೇರಳದ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಗಡಿ ಭಾಗದಲ್ಲಿ ಇರುವ ಕೆರೆಗಳಿಗೆ ನೀರು ಬಂದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೆರೆಗಳೂ ತುಂಬಿವೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದರು.</p>.<p class="Briefhead"><strong>ತುಂಬದ ಕೆರೆಗಳು</strong></p>.<p>ಗ್ರಾಮೀಣ ಭಾಗಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ, ಕೆಲವು ಕೆರೆಗಳಿಗೆ ನೀರು ಹರಿದು ಬಂದಿಲ್ಲ. ಉದಾಹರಣೆಗೆ ಹಂಗಳದಲ್ಲಿ ಹೆಚ್ಚು ಮಳೆಯಾಗಿದ್ದರೂ, ಅಲ್ಲಿನ ಕೆರೆಯಲ್ಲಿ ಹೆಚ್ಚು ನೀರು ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆರೆಗಳು ತುಂಬಲಿವೆ ಎಂಬ ವಿಶ್ವಾಸದಲ್ಲಿ ರೈತರು ಇದ್ದಾರೆ.</p>.<p>‘ಮಳೆಯಾಗುತ್ತಿರುವುದರಿಂದ ಬೆಳೆಗಳಿಗೆ ಯಾವ ತೊಂದರೆ ಇಲ್ಲ. ಕೆರೆ ಕಟ್ಟೆ ತುಂಬುವಂತಹ ಮಳೆ ಇನ್ನೂ ಬಂದಿಲ್ಲ. ರೈತರಿಗೆ ಅನುಕೂಲವಷ್ಟು ಉತ್ತಮ ಮಳೆಯಾಗುತ್ತಿದೆ’ ಎಂದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರು ಹರಿದು ತಮಿಳುನಾಡಿನ ಕಡೆಗೆ ಹೋಗುತ್ತಿದೆ. ಈ ಸಮಯದಲ್ಲಿ ತಾಲ್ಲೂಕಿನ ಕೆರೆಗಳನ್ನು ತುಂಬಿಸಿದರೆ ಮುಂದಿನ ಬೇಸಿಗೆಯಲ್ಲಿ ಉಪಯೋಗ ಆಗುತ್ತದೆ’ ಎಂದು ರೈತ ಹಂಗಳ ಮಹದೇವಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ತಾಲ್ಲೂಕಿನ ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಉತ್ತಮವಾಗಿ ಆಗಿದ್ದು, ಕೃಷಿಕರಿಗೆ ಉಪಯುಕ್ತವಾಗಿದೆ.</p>.<p>ಈ ವರ್ಷ ಶೇ 30ರಿಂದ 49ರಷ್ಟು ಮಳೆ ಹೆಚ್ಚಾಗಿದೆ. ಹಂಗಳ ಹೋಬಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ರೈತರು ಬಿತ್ತನೆ ಮಾಡಿದಕಡಲೆಕಾಯಿ, ಹುರುಳಿ ಹಾಗೂ ತರಕಾರಿ ಬೆಳೆಗಳಿಗೆ ಮಳೆಯಿಂದಾಗಿ ಪ್ರಯೋಜನವಾಗಿದೆ.</p>.<p>ಜನವರಿ 1ರಿಂದ ಸೆಪ್ಟೆಂಬರ್ 10ರ ಅವಧಿಯಲ್ಲಿ ತಾಲ್ಲೂಕಿನಲ್ಲಿ ಸಾಮಾನ್ಯವಾಗಿ 41.3 ಸೆಂ.ಮೀ ಮಳೆಯಾಗುತ್ತದೆ. ಈ ವರ್ಷ 61.3 ಸೆಂ.ಮೀ ಮಳೆ ಸುರಿದಿದೆ. ಮುಂಗಾರು ಅವಧಿಯಲ್ಲಿ ಜೂನ್ 1ರಿಂದ ಸೆ.10ರವರೆಗೆ ವಾಡಿಕೆಯಲ್ಲಿ 17.7 ಸೆಂ.ಮೀ ಮಳೆಯಾಗುತ್ತದೆ. ಈ ವರ್ಷ 34.6 ಸೆಂ.ಮೀ ಮಳೆಯಾಗಿದೆ. ಶೇ 96ರಷ್ಟು ಹೆಚ್ಚು ಮಳೆ ಬಿದ್ದಿದೆ.</p>.<p>ಹಂಗಳ ಹೋಬಳಿ ವ್ಯಾಪ್ತಿಯಲ್ಲಿ 44.8 ಸೆಂ.ಮೀಗೆ 68.5 ಸೆಂ.ಮೀ, ಕಸಬಾ ಹೋಬಳಿಯಲ್ಲಿ 41.3 ಸೆಂ.ಮೀಗೆ 56.2 ಸೆಂ.ಮೀ, ಬೇಗೂರು ವ್ಯಾಪ್ತಿಯಲ್ಲಿ 37.4 ಸೆಂ.ಮೀಗೆ 51.6 ಸೆಂ.ಮೀ ಹಾಗೂ ತೆರಕಣಾಂಬಿ ಹೋಬಳಿಯ ಭಾಗದಲ್ಲಿ 42.0 ಸೆಂ.ಮೀ ಬದಲಾಗಿ 54.4 ಸೆಂ.ಮೀಗಳಷ್ಟು ಮಳೆ ಬಿದ್ದಿದೆ.</p>.<p>ತಾಲ್ಲೂಕಿನಾದ್ಯಂತ ಹೆಚ್ಚು ರೈತರು ಮಳೆಯನ್ನೇ ಆಶ್ರಯಿಸಿ ಕೃಷಿ ಚಟುವಟಿಕೆ ಮಾಡುತ್ತಾರೆ. ಜೋಳ, ಹತ್ತಿ, ಚೆಂಡುಹೂ, ಹುರುಳಿ, ಕಡಲೆಕಾಯಿ, ಎಳ್ಳು, ಮುಸುಕಿನ ಜೋಳ ಮತ್ತು ತರಕಾರಿ, ಸೊಪ್ಪುಗಳು ಬೆಳೆಯುತ್ತಾರೆ. ಎರಡು ವಾರಗಳಿಂದ ಸತತ ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ನಗು ಮೂಡಿದೆ.</p>.<p>ಕೇರಳದ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಗಡಿ ಭಾಗದಲ್ಲಿ ಇರುವ ಕೆರೆಗಳಿಗೆ ನೀರು ಬಂದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೆರೆಗಳೂ ತುಂಬಿವೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದರು.</p>.<p class="Briefhead"><strong>ತುಂಬದ ಕೆರೆಗಳು</strong></p>.<p>ಗ್ರಾಮೀಣ ಭಾಗಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ, ಕೆಲವು ಕೆರೆಗಳಿಗೆ ನೀರು ಹರಿದು ಬಂದಿಲ್ಲ. ಉದಾಹರಣೆಗೆ ಹಂಗಳದಲ್ಲಿ ಹೆಚ್ಚು ಮಳೆಯಾಗಿದ್ದರೂ, ಅಲ್ಲಿನ ಕೆರೆಯಲ್ಲಿ ಹೆಚ್ಚು ನೀರು ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆರೆಗಳು ತುಂಬಲಿವೆ ಎಂಬ ವಿಶ್ವಾಸದಲ್ಲಿ ರೈತರು ಇದ್ದಾರೆ.</p>.<p>‘ಮಳೆಯಾಗುತ್ತಿರುವುದರಿಂದ ಬೆಳೆಗಳಿಗೆ ಯಾವ ತೊಂದರೆ ಇಲ್ಲ. ಕೆರೆ ಕಟ್ಟೆ ತುಂಬುವಂತಹ ಮಳೆ ಇನ್ನೂ ಬಂದಿಲ್ಲ. ರೈತರಿಗೆ ಅನುಕೂಲವಷ್ಟು ಉತ್ತಮ ಮಳೆಯಾಗುತ್ತಿದೆ’ ಎಂದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರು ಹರಿದು ತಮಿಳುನಾಡಿನ ಕಡೆಗೆ ಹೋಗುತ್ತಿದೆ. ಈ ಸಮಯದಲ್ಲಿ ತಾಲ್ಲೂಕಿನ ಕೆರೆಗಳನ್ನು ತುಂಬಿಸಿದರೆ ಮುಂದಿನ ಬೇಸಿಗೆಯಲ್ಲಿ ಉಪಯೋಗ ಆಗುತ್ತದೆ’ ಎಂದು ರೈತ ಹಂಗಳ ಮಹದೇವಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>