<p><strong>ಚಾಮರಾಜನಗರ/ಯಳಂದೂರು:</strong> ಜಿಲ್ಲೆಯ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ.</p>.<p>ಕೆಲವು ದಿನಗಳಿಂದ ಮಳೆಯಾಗದೆ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆಗೆ ಹಿನ್ನಡೆಯಾಗಿತ್ತು. ರೈತರು ಮಳೆಯ ನಿರೀಕ್ಷೆಯಲ್ಲಿದ್ದರು. ಭಾನುವಾರ ಸುರಿದ ಮಳೆಯು ಅವರಲ್ಲಿ ಖುಷಿಯನ್ನುಂಟು ಮಾಡಿದೆ.</p>.<p>ಯಳಂದೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6.5 ಸೆಂ.ಮೀ, ಗುಂಬಳ್ಳಿಯಲ್ಲಿ 6.6 ಸೆಂ.ಮೀ ಮಳೆ ಬಿದ್ದಿದೆ. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗಿದೆ.</p>.<p>ಸಂಜೆ 5 ಗಂಟೆಗೆ ನಿಧಾನವಾಗಿ ಆರಂಭವಾದ ಮಳೆ ನಂತರ ಸ್ವಲ್ಪ ಹೊತ್ತು ಬಿಟ್ಟು, ಬಿರುಸು ಪಡೆಯಿತು. ರಾತ್ರಿ 9 ಗಂಟೆಯವರೆಗೂ ಸುರಿಯುತ್ತಿತ್ತು . ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚು ಬಿರುಸಿನ ವರ್ಷಧಾರೆಯಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಗುಡುಗು ಮಿಂಚು ಸಹಿತ ರಾತ್ರಿ ಮಳೆ ಆರಂಭವಾಯಿತು.</p>.<p>'ಬಿತ್ತನೆಗೆ ಭೂಮಿ ಸಿದ್ಧತೆಯಲ್ಲಿತೊಡಗಿದ್ದ ಕೃಷಿಕರು ಮಳೆಗಾಗಿ ಕಾಯುತ್ತಿದ್ದರು. ಆರ್ದ್ರಾ ಮಳೆ ಕೊನೆ ದಿನ ಉತ್ತಮವಾಗಿ ಸುರಿಯಿತು. ಇದರಿಂದ ಬೇಸಯಗಾರರ ಮುಖದಲ್ಲಿ ಸಂತಸ ಮೂಡಿದೆ' ಎಂದು ಕೃಷಿಕ ಮಾಂಬಳ್ಳಿ ಬಸಪ್ಪ ಹೇಳಿದರು.</p>.<p>ಹನೂರು, ಗುಂಡಡ್ಲುಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p class="Briefhead"><strong>ಮನೆಗೆ ನುಗ್ಗಿದ ನೀರು</strong></p>.<p>ಕೊಳ್ಳೇಗಾಲ: ತಾಲ್ಲೂಕಿನಾದ್ಯಂತ ಭಾನುವಾರ ಉತ್ತಮ ಮಳೆಯಾಗಿದ್ದು, ತಾಲ್ಲೂಕಿನ ಎಡಮೋಳೆ ಗ್ರಾಮದಲ್ಲಿ ಮಳೆ ನೀರು ಮನೆಗೆ ನುಗ್ಗಿದೆ.</p>.<p>ಮನೆಯ ಎದುರಿನ ಚರಂಡಿ ಕಟ್ಟಿಕೊಂಡಿತ್ತು. ಹೀಗಾಗಿ ನೀರು ಸರಾಗವಾಗಿ ಹರಿಯುತ್ತಿರಲಿಲ್ಲ. ಹೀಗಾಗಿ, ಚರಂಡಿ ನೀರಿನೊಂದಿಗೆ ಬೆರೆತ ಮಳೆ ನೀರು ಮನೆಗೆ ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ/ಯಳಂದೂರು:</strong> ಜಿಲ್ಲೆಯ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕುಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ.</p>.<p>ಕೆಲವು ದಿನಗಳಿಂದ ಮಳೆಯಾಗದೆ ಜಿಲ್ಲೆಯ ಹಲವು ಭಾಗಗಳಲ್ಲಿ ಬಿತ್ತನೆಗೆ ಹಿನ್ನಡೆಯಾಗಿತ್ತು. ರೈತರು ಮಳೆಯ ನಿರೀಕ್ಷೆಯಲ್ಲಿದ್ದರು. ಭಾನುವಾರ ಸುರಿದ ಮಳೆಯು ಅವರಲ್ಲಿ ಖುಷಿಯನ್ನುಂಟು ಮಾಡಿದೆ.</p>.<p>ಯಳಂದೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6.5 ಸೆಂ.ಮೀ, ಗುಂಬಳ್ಳಿಯಲ್ಲಿ 6.6 ಸೆಂ.ಮೀ ಮಳೆ ಬಿದ್ದಿದೆ. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲೂ ಸಾಧಾರಣದಿಂದ ಉತ್ತಮ ಮಳೆಯಾಗಿದೆ.</p>.<p>ಸಂಜೆ 5 ಗಂಟೆಗೆ ನಿಧಾನವಾಗಿ ಆರಂಭವಾದ ಮಳೆ ನಂತರ ಸ್ವಲ್ಪ ಹೊತ್ತು ಬಿಟ್ಟು, ಬಿರುಸು ಪಡೆಯಿತು. ರಾತ್ರಿ 9 ಗಂಟೆಯವರೆಗೂ ಸುರಿಯುತ್ತಿತ್ತು . ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚು ಬಿರುಸಿನ ವರ್ಷಧಾರೆಯಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಗುಡುಗು ಮಿಂಚು ಸಹಿತ ರಾತ್ರಿ ಮಳೆ ಆರಂಭವಾಯಿತು.</p>.<p>'ಬಿತ್ತನೆಗೆ ಭೂಮಿ ಸಿದ್ಧತೆಯಲ್ಲಿತೊಡಗಿದ್ದ ಕೃಷಿಕರು ಮಳೆಗಾಗಿ ಕಾಯುತ್ತಿದ್ದರು. ಆರ್ದ್ರಾ ಮಳೆ ಕೊನೆ ದಿನ ಉತ್ತಮವಾಗಿ ಸುರಿಯಿತು. ಇದರಿಂದ ಬೇಸಯಗಾರರ ಮುಖದಲ್ಲಿ ಸಂತಸ ಮೂಡಿದೆ' ಎಂದು ಕೃಷಿಕ ಮಾಂಬಳ್ಳಿ ಬಸಪ್ಪ ಹೇಳಿದರು.</p>.<p>ಹನೂರು, ಗುಂಡಡ್ಲುಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p class="Briefhead"><strong>ಮನೆಗೆ ನುಗ್ಗಿದ ನೀರು</strong></p>.<p>ಕೊಳ್ಳೇಗಾಲ: ತಾಲ್ಲೂಕಿನಾದ್ಯಂತ ಭಾನುವಾರ ಉತ್ತಮ ಮಳೆಯಾಗಿದ್ದು, ತಾಲ್ಲೂಕಿನ ಎಡಮೋಳೆ ಗ್ರಾಮದಲ್ಲಿ ಮಳೆ ನೀರು ಮನೆಗೆ ನುಗ್ಗಿದೆ.</p>.<p>ಮನೆಯ ಎದುರಿನ ಚರಂಡಿ ಕಟ್ಟಿಕೊಂಡಿತ್ತು. ಹೀಗಾಗಿ ನೀರು ಸರಾಗವಾಗಿ ಹರಿಯುತ್ತಿರಲಿಲ್ಲ. ಹೀಗಾಗಿ, ಚರಂಡಿ ನೀರಿನೊಂದಿಗೆ ಬೆರೆತ ಮಳೆ ನೀರು ಮನೆಗೆ ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>