<p><strong>ಚಾಮರಾಜನಗರ:</strong> ಕೋವಿಡ್–19 ಹರಡುವುದನ್ನು ತಡೆಯುವ ಭಾಗವಾಗಿ ರಾಜ್ಯದಾದ್ಯಂತ ಜಾರಿ ಮಾಡಲಾಗಿರುವ ಭಾನುವಾರದ ಲಾಕ್ಡೌನ್ನಿಗೆ ಜಿಲ್ಲೆಯಲ್ಲಿ ಮೂರನೇ ವಾರವೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ನಗರ, ಪಟ್ಟಣ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಮಾರಾಟ ಬಿಟ್ಟು, ಉಳಿದ ವಹಿವಾಟು ಸ್ತಬ್ಧಗೊಂಡಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಚಟುವಟಿಕೆಗಳು ಎಂದಿನಂತೆ ಇದ್ದವು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲಿಲ್ಲ.</p>.<p>ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಆಸ್ಪತ್ರೆ, ಔಷಧ ಅಂಗಡಿ, ಹಾಲಿನ ಕೇಂದ್ರಗಳು, ಹಣ್ಣು, ತರಕಾರಿ ಮಾಂಸದ ಅಂಗಡಿಗಳು ತೆರೆದಿದ್ದವು. ಕೆಲವು ಹೋಟೆಲ್ಗಳು ಕೂಡ ಕಾರ್ಯನಿರ್ವಹಿಸಿದವು. ಆದರೆ, ಪಾರ್ಸೆಲ್ ನೀಡುವುದಕ್ಕೆ ಅವಕಾಶ ಇತ್ತು.</p>.<p class="Subhead">ವಾಹನ ಸಂಚಾರ ವಿರಳ: ನಗರ, ಪಟ್ಟಣ, ಹೋಬಳಿ ಕೇಂದ್ರಗಳಲ್ಲಿ ವಾಹನಗಳ, ಜನರ ಸಂಚಾರ ವಿರಳವಾಗಿತ್ತು. ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಆಟೊ, ಕ್ಯಾಬ್ ಟಾಕ್ಸಿಗಳೂ ಸಂಚರಿಸಲಿಲ್ಲ.</p>.<p class="Subhead">ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರನ್ನು ತಡೆದ ಪೊಲೀಸರು ಅವರ ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೋವಿಡ್–19 ಹರಡುವುದನ್ನು ತಡೆಯುವ ಭಾಗವಾಗಿ ರಾಜ್ಯದಾದ್ಯಂತ ಜಾರಿ ಮಾಡಲಾಗಿರುವ ಭಾನುವಾರದ ಲಾಕ್ಡೌನ್ನಿಗೆ ಜಿಲ್ಲೆಯಲ್ಲಿ ಮೂರನೇ ವಾರವೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ನಗರ, ಪಟ್ಟಣ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಮಾರಾಟ ಬಿಟ್ಟು, ಉಳಿದ ವಹಿವಾಟು ಸ್ತಬ್ಧಗೊಂಡಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಚಟುವಟಿಕೆಗಳು ಎಂದಿನಂತೆ ಇದ್ದವು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲಿಲ್ಲ.</p>.<p>ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಆಸ್ಪತ್ರೆ, ಔಷಧ ಅಂಗಡಿ, ಹಾಲಿನ ಕೇಂದ್ರಗಳು, ಹಣ್ಣು, ತರಕಾರಿ ಮಾಂಸದ ಅಂಗಡಿಗಳು ತೆರೆದಿದ್ದವು. ಕೆಲವು ಹೋಟೆಲ್ಗಳು ಕೂಡ ಕಾರ್ಯನಿರ್ವಹಿಸಿದವು. ಆದರೆ, ಪಾರ್ಸೆಲ್ ನೀಡುವುದಕ್ಕೆ ಅವಕಾಶ ಇತ್ತು.</p>.<p class="Subhead">ವಾಹನ ಸಂಚಾರ ವಿರಳ: ನಗರ, ಪಟ್ಟಣ, ಹೋಬಳಿ ಕೇಂದ್ರಗಳಲ್ಲಿ ವಾಹನಗಳ, ಜನರ ಸಂಚಾರ ವಿರಳವಾಗಿತ್ತು. ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಆಟೊ, ಕ್ಯಾಬ್ ಟಾಕ್ಸಿಗಳೂ ಸಂಚರಿಸಲಿಲ್ಲ.</p>.<p class="Subhead">ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರನ್ನು ತಡೆದ ಪೊಲೀಸರು ಅವರ ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>