ದಂತಕ್ಕಾಗಿ ಸಾಕಷ್ಟು ಆನೆಗಳುನ್ನು ಕೊಂದಿದ್ದ ವೀರಪ್ಪನ್, ತನ್ನ ವಿರುದ್ಧ ಕಾರ್ಯಾಚರಣೆಯಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಕಾರಿಗಳು, ಸಿಬ್ಬಂದಿಯನ್ನು ಕೂಡ ಹತ್ಯೆ ಮಾಡಿದ್ದ. 2004ರ ಅಕ್ಟೋಬರ್ 18ರಂದು ರಾಜ್ಯದ ಗಡಿ ಭಾಗವಾದ ಪಾಪರುಪತ್ತಿ ಎಂಬಲ್ಲಿ ಯೋಧರ ಗುಂಡಿಗೆ ಬಲಿಯಾಗಿದ್ದ. ರಾಜ್ಯದ 120ಕ್ಕೂ ಹೆಚ್ಚು ಮಂದಿಯನ್ನು ಕೊಂದಿದ್ದ ನರಹಂತಕ ವೀರಪ್ಪನ್ ಮಲೆಮಹದೇಶ್ವರ ಬೆಟ್ಟದ ತಪ್ಪಲು ಮತ್ತು ಗೋಪಿನಾಥಂ, ಆಲಂಬಾಡಿ ಜನರು ಭಯದಿಂದ ಬದುಕುವ ಸ್ಥಿತಿಯನ್ನು ಉಂಟುಮಾಡಿದ್ದ.