<p><strong>ಮಹದೇಶ್ವರ ಬೆಟ್ಟ:</strong> ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರಿಗೆ ಸರ್ಕಾರ ನೀಡಿರುವ ಕಾರನ್ನು ಅಧಿಕಾರಿಯ ಕುಟುಂಬದವರು ಮಲೆ ಮಹದೇಶ್ವರ ದೇವಸ್ಥಾನ ಹಾಗೂ ಹೊಗೇನಕಲ್ ಜಲಪಾತ ವೀಕ್ಷಣೆಗೆ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ಸರ್ಕಾರಿ ರಜಾ ದಿನವಿದ್ದರೂ ಅಧಿಕಾರಿಯ ಕುಟುಂಬ ಸದಸ್ಯರು ಸರ್ಕಾರಿ ಕಾರನ್ನು ಬಳಸಿಕೊಂಡು ದೇವಸ್ಥಾನ ಹಾಗೂ ಜಲಪಾತ ವೀಕ್ಷಣೆಗೆ ಬಂದಿರುವುದು ಸರಿಯಲ್ಲ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಾಹನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದೆ. </p>.<p>ಅರಣ್ಯ ಇಲಾಖೆಗೆ ಸೇರಿದ ಕೆಎ 09–ಜಿ 0771 ಸಂಖ್ಯೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಾಹನದ ವಿಮೆಯ ಅವಧಿಯೂ ಮುಗಿದಿರುವುದು ಇ ದಾಖಲೆಗಳಿಂದ ತಿಳಿದು ಬಂದಿದೆ. ವಾಹನ ದುರ್ಬಳಕೆ ಮಾಡಿಕೊಂಡ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕರುನಾಡ ವಿಜಯಸೇನೆ ಉಪಾಧ್ಯಕ್ಷ ಚಂದ್ರಶೇಖರ್ ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯೆ ಪಡೆಯಲು ಮೈಸೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕರಿಗೆ ಕರೆ ಮಾಡಲಾಯಿತಾದರೂ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ:</strong> ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರಿಗೆ ಸರ್ಕಾರ ನೀಡಿರುವ ಕಾರನ್ನು ಅಧಿಕಾರಿಯ ಕುಟುಂಬದವರು ಮಲೆ ಮಹದೇಶ್ವರ ದೇವಸ್ಥಾನ ಹಾಗೂ ಹೊಗೇನಕಲ್ ಜಲಪಾತ ವೀಕ್ಷಣೆಗೆ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ಸರ್ಕಾರಿ ರಜಾ ದಿನವಿದ್ದರೂ ಅಧಿಕಾರಿಯ ಕುಟುಂಬ ಸದಸ್ಯರು ಸರ್ಕಾರಿ ಕಾರನ್ನು ಬಳಸಿಕೊಂಡು ದೇವಸ್ಥಾನ ಹಾಗೂ ಜಲಪಾತ ವೀಕ್ಷಣೆಗೆ ಬಂದಿರುವುದು ಸರಿಯಲ್ಲ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಾಹನ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದೆ. </p>.<p>ಅರಣ್ಯ ಇಲಾಖೆಗೆ ಸೇರಿದ ಕೆಎ 09–ಜಿ 0771 ಸಂಖ್ಯೆಯ ವಾಹನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಾಹನದ ವಿಮೆಯ ಅವಧಿಯೂ ಮುಗಿದಿರುವುದು ಇ ದಾಖಲೆಗಳಿಂದ ತಿಳಿದು ಬಂದಿದೆ. ವಾಹನ ದುರ್ಬಳಕೆ ಮಾಡಿಕೊಂಡ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕರುನಾಡ ವಿಜಯಸೇನೆ ಉಪಾಧ್ಯಕ್ಷ ಚಂದ್ರಶೇಖರ್ ಒತ್ತಾಯಿಸಿದರು. ಈ ಕುರಿತು ಪ್ರತಿಕ್ರಿಯೆ ಪಡೆಯಲು ಮೈಸೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಕರಿಗೆ ಕರೆ ಮಾಡಲಾಯಿತಾದರೂ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>