ಶಾಶ್ವತ ಕಟ್ಟಡ: ‘ನೆರೆ ಬಂದ ಸಂದರ್ಭದಲ್ಲಿ ಸಂತ್ರಸ್ತರಾದವರನ್ನು ಸದ್ಯ ಶಾಲೆಗಳಲ್ಲಿ, ಸಮುದಾಯ ಭವನಗಳಲ್ಲಿ ತಾತ್ಕಾಲಿಕವಾಗಿ ಆಶ್ರಯ ನೀಡುತ್ತಿದ್ದೇವೆ. ಅಲ್ಲಿ ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅದಕ್ಕಾಗಿ, ಕೊಡಗು, ಬೆಳಗಾವಿ, ಕರಾವಳಿ ಪ್ರದೇಶಗಳು ಸೇರಿದಂತೆ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲು ಎಲ್ಲ ಸೌಕರ್ಯಗಳುಳ್ಳ ಶಾಶ್ವತ ಕಟ್ಟಡಗಳನ್ನು ಕಟ್ಟಲು ಚಿಂತಿಸಲಾಗುತ್ತಿದೆ. ಅಲ್ಲದೇ ತುರ್ತು ಪರಿಹಾರಕ್ಕೆ ನೆರವಾಗುವುದಕ್ಕಾಗಿ ಅಗ್ನಿ ಶಾಮಕ ದಳಕ್ಕೆ ಆಧುನಿಕ ಉಪಕರಣಗಳನ್ನು ಖರೀದಿಸಲು ಇಲಾಖೆಯಿಂದ ನೆರವು ನೀಡಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.