ಲೋಕೇಶ್ ಅವರಿಗೆ ಇತ್ತೀಚೆಗೆ ಅಪಘಾತವಾಗಿತ್ತು. ಹಾಗಾಗಿ, ಪ್ರತಿ ತಿಂಗಳು ದೈಹಿಕ ದೃಢತೆ ಪ್ರಮಾಣಪತ್ರ ಸಲ್ಲಿಸಲು ಅಧಿಕಾರಿಗಳು ಸೂಚಿಸಿದ್ದರು. ಮುಖ್ಯ ಶಿಕ್ಷಕಿ ದಾಕ್ಷಾಯಿಣಿ ಅವರು ಪ್ರಮಾಣ ಪತ್ರವನ್ನು ಕೇಳಿದ್ದರು ಎಂದು ಮೂಲಗಳು ತಿಳಿಸಿವೆ. ಇದರಿಂದ ಕೋಪಗೊಂಡ ಲೋಕೇಶ್, ವಿದ್ಯಾರ್ಥಿಗಳ ಎದುರಿನಲ್ಲೇ ದಾಕ್ಷಾಯಿಣಿ ಅವರಿಗೆ ಬೆದರಿಕೆ ಹಾಕಿ ಕೂಗಾಡಿದ್ದಾರೆ. ಭಯಗೊಂಡ ಮುಖ್ಯ ಶಿಕ್ಷಕಿ ಹೊರಕ್ಕೆ ಓಡಿಬಂದಿದ್ದಾರೆ. ಅವರನ್ನೇ ಹಿಂಬಾಲಿಸಿದ ಲೋಕೇಶ್ ಅವರು, ಗೇಟ್ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.