ಪ್ರಸ್ತಾವನೆಯಲ್ಲಿ ಏನಿದೆ?: ‘ಟ್ರಸ್ಟ್ನ ಸದಸ್ಯರುಗಳ ವೈಯಕ್ತಿಕ ವೈಮನಸ್ಸಿನಿಂದ ಮತ್ತು ದೇವಾಲಯದಲ್ಲಿನ ಹಣ ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕರ/ಭಕ್ತಾದಿಗಳ ಹಿತಾಸಕ್ತಿಗೆ ಧಕ್ಕೆಯುಂಟು ಮಾಡಿ ಪ್ರಾಣಹಾನಿಗೆ ಕಾರಣರಾಗಿದ್ದಾರೆ.ದೇವಾಲಯದ ಆಡಳಿತವನ್ನು ಸರಿಯಾಗಿ ನಿರ್ವಹಿಸದೆ ಇರುವುದರಿಂದ ಈ ಅವಘಡಕ್ಕೆ ಟ್ರಸ್ಟ್ನ ಪದಾಧಿಕಾರಿಗಳು ಹೊಣೆಗಾರರಾಗಿದ್ದಾರೆ. ಹಾಗಾಗಿ, 1997ರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಕಾಯ್ದೆಯ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದರು.