<p>ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಉದ್ಯೋಗಾವಕಾಶಕ್ಕೆ ನೆರವಾಗುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿ ನೀಡುತ್ತಿದ್ದು, ಜಿಲ್ಲೆಯ ಯುವಜನರಿಗೆ ವರದಾನವಾಗಿ ಪರಿಣಮಿಸಿದೆ.</p>.<p>ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದಲ್ಲಿ 2007ರಲ್ಲಿ ಆರಂಭವಾದ ಈ ಸಂಸ್ಥೆಯು ಜಿಲ್ಲೆಯ ಏಕೈಕಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ.</p>.<p>ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ದೀರ್ಘಾವಧಿ ಕೋರ್ಸು ಅಧ್ಯಯನಕ್ಕೆ ಇಲ್ಲಿ ಅವಕಾಶ ನೀಡಿದ್ದು, ಪ್ರತಿ ವರ್ಷ 40ರಿಂದ 50 ವಿದ್ಯಾರ್ಥಿ<br />ಗಳು ಪ್ರವೇಶ ಪಡೆಯುತ್ತಿದ್ದಾರೆ. ಇದುವರೆಗೆ 208 ವಿದ್ಯಾರ್ಥಿಗಳು ತರಬೇತಿ ಪಡೆದು ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಇಲ್ಲಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ನೌಕರಿ ಲಭಿಸಿರುವುದು ಈ ಕೇಂದ್ರದ ಹೆಗ್ಗಳಿಕೆ.</p>.<p>ಎಸ್ಸೆಸ್ಸೆಲ್ಸಿ, ಪಿಯುಸಿ ಮಾಡಿರುವ ವಿದ್ಯಾರ್ಥಿಗಳು ಇಲ್ಲಿಗೆ ಸೇರ್ಪಡೆ ಯಾಗಬಹುದು.ಈ ಕೋರ್ಸ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವಿದೇಶದಲ್ಲೂ ಹೆಚ್ಚಿನ ಅವಕಾಶವಿದೆ. ತರಬೇತಿ ಕೇಂದ್ರದಲ್ಲಿ ಇತರ ಪ್ರಮಾಣಪತ್ರದ ಕೋರ್ಸ್ ಗಳೂ ಇವೆ. ಟೂಲ್ ರೂಂ ಮೆಷಿನಿಸ್ಟ್, ಟೂಲ್ ಅಂಡ್ ಡೈ ಟೆಕ್ನೀಶಿಯನ್ ಕೋರ್ಸುಗಳಲ್ಲಿ ತರಬೇತಿ ನೀಡಲಾಗುತ್ತಿದೆ.</p>.<p>ತರಬೇತಿ ಕೇಂದ್ರವು ಕೌಶಲಾಭಿವೃದ್ಧಿ ಇಲಾಖೆ ಪ್ರಾಯೋಜನೆಯಡಿ ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಯೋಜನೆ, ವಿಶೇಷಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಟೂಲ್ ರೂಂ ಮೆಷಿನಿಸ್ಟ್, ಸಿಎನ್ಸಿ ಟೆಕ್ನಾಲಜಿಸ್ಟ್ ಕ್ಯಾಡ್/ಕ್ಯಾಮ್ ಸ್ಪೆಷಲಿಸ್ಟ್, ಟರ್ನರ್, ಮಿಲ್ಲರ್ ವಿಷಯದಲ್ಲಿ ಅಲ್ಪಾವಧಿಯ ತರಬೇತಿಯನ್ನು ನೀಡುತ್ತಿದೆ.</p>.<p class="Subhead">ಕೌಶಲ ಅಭಿವೃದ್ಧಿಯ ಉದ್ದೇಶ: ಯುವಜನರಲ್ಲಿ ಕೌಶಲ ಅಭಿವೃದ್ಧಿಯನ್ನು ಹೆಚ್ಚಿಸುವ ಧ್ಯೇಯವನ್ನು ಹೊಂದಿರುವ ಈ ಸಂಸ್ಥೆಯು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಅಭ್ಯರ್ಥಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯನ್ನು ಹೊಂದಿದೆ.</p>.<p>ಕೈಗಾರಿಕೆಗಳಲ್ಲಿ ಗರಿಷ್ಠ ಉತ್ಪಾದನೆಗೆ ಪೂರಕವಾಗುವಂತೆ ತರಬೇತಿ ಹಾಗೂ ಆವಿಷ್ಕಾರ ಕೌಶಲಗಳನ್ನು ಅಭ್ಯರ್ಥಿ<br />ಗಳಿಗೆ ತಿಳಿಸಿಕೊಡಲು ಇಲ್ಲಿ ಹೊಸಹೊಸ ತಂತ್ರ, ವಿಧಾನಗಳನ್ನು ಬಳಸಲಾಗುತ್ತಿದೆ.</p>.<p class="Briefhead">ಅರ್ಜಿ ಸಲ್ಲಿಸಲು 31ರವರೆಗೆ ಅವಕಾಶ</p>.<p>ಈ ಸಾಲಿನ ವಿವಿಧ ಕೋರ್ಸ್ಗಳ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್, ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಇದೇ 31 ಕೊನೆಯ ದಿನ</p>.<p>ಮಾಹಿತಿಗಾಗಿ ತರಬೇತಿ ಕೇಂದ್ರದ ಕಚೇರಿ ಅಥವಾ ದೂ.ಸಂ. 08229-222344, ಮೊಬೈಲ್ ಸಂಖ್ಯೆ 9844290405, 9964601660, 8861412626 ಸಂಪರ್ಕಿಸಬಹುದು.</p>.<p>ಇಲ್ಲಿ ಕಲಿತವರಿಗೆ ಉದ್ಯೋಗಾವಕಾಶ ಸಾಕಷ್ಟು ಲಭ್ಯವಿದ್ದು, ಇದರ ಪ್ರಯೋಜನ ಪಡೆಯಲು ಅಭ್ಯರ್ಥಿಗಳು ಮುಂದೆ ಬರಬೇಕು’ ಎಂದು ಕೇಂದ್ರದ ಪ್ರಾಂಶುಪಾಲ ರಾಧಾಕೃಷ್ಣ ಎಚ್.ಎಂ. ಅವರು ಹೇಳಿದರು.</p>.<p>–––––</p>.<p>ಜಿಟಿಟಿಸಿಯಲ್ಲಿ ತರಬೇತಿ ಪಡೆದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ತರಬೇತಿ ಪಡೆದರೆ ದೇಶ–ವಿದೇಶದಲ್ಲಿ ಉತ್ತಮ ಅವಕಾಶಗಳಿವೆ<br />ರಾಜೇಂದ್ರ, ಜಿಟಿಟಿಸಿ ಹಳೆ ವಿದ್ಯಾರ್ಥಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಉದ್ಯೋಗಾವಕಾಶಕ್ಕೆ ನೆರವಾಗುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿ ನೀಡುತ್ತಿದ್ದು, ಜಿಲ್ಲೆಯ ಯುವಜನರಿಗೆ ವರದಾನವಾಗಿ ಪರಿಣಮಿಸಿದೆ.</p>.<p>ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದಲ್ಲಿ 2007ರಲ್ಲಿ ಆರಂಭವಾದ ಈ ಸಂಸ್ಥೆಯು ಜಿಲ್ಲೆಯ ಏಕೈಕಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ.</p>.<p>ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ದೀರ್ಘಾವಧಿ ಕೋರ್ಸು ಅಧ್ಯಯನಕ್ಕೆ ಇಲ್ಲಿ ಅವಕಾಶ ನೀಡಿದ್ದು, ಪ್ರತಿ ವರ್ಷ 40ರಿಂದ 50 ವಿದ್ಯಾರ್ಥಿ<br />ಗಳು ಪ್ರವೇಶ ಪಡೆಯುತ್ತಿದ್ದಾರೆ. ಇದುವರೆಗೆ 208 ವಿದ್ಯಾರ್ಥಿಗಳು ತರಬೇತಿ ಪಡೆದು ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಇಲ್ಲಿ ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ನೌಕರಿ ಲಭಿಸಿರುವುದು ಈ ಕೇಂದ್ರದ ಹೆಗ್ಗಳಿಕೆ.</p>.<p>ಎಸ್ಸೆಸ್ಸೆಲ್ಸಿ, ಪಿಯುಸಿ ಮಾಡಿರುವ ವಿದ್ಯಾರ್ಥಿಗಳು ಇಲ್ಲಿಗೆ ಸೇರ್ಪಡೆ ಯಾಗಬಹುದು.ಈ ಕೋರ್ಸ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವಿದೇಶದಲ್ಲೂ ಹೆಚ್ಚಿನ ಅವಕಾಶವಿದೆ. ತರಬೇತಿ ಕೇಂದ್ರದಲ್ಲಿ ಇತರ ಪ್ರಮಾಣಪತ್ರದ ಕೋರ್ಸ್ ಗಳೂ ಇವೆ. ಟೂಲ್ ರೂಂ ಮೆಷಿನಿಸ್ಟ್, ಟೂಲ್ ಅಂಡ್ ಡೈ ಟೆಕ್ನೀಶಿಯನ್ ಕೋರ್ಸುಗಳಲ್ಲಿ ತರಬೇತಿ ನೀಡಲಾಗುತ್ತಿದೆ.</p>.<p>ತರಬೇತಿ ಕೇಂದ್ರವು ಕೌಶಲಾಭಿವೃದ್ಧಿ ಇಲಾಖೆ ಪ್ರಾಯೋಜನೆಯಡಿ ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಯೋಜನೆ, ವಿಶೇಷಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಟೂಲ್ ರೂಂ ಮೆಷಿನಿಸ್ಟ್, ಸಿಎನ್ಸಿ ಟೆಕ್ನಾಲಜಿಸ್ಟ್ ಕ್ಯಾಡ್/ಕ್ಯಾಮ್ ಸ್ಪೆಷಲಿಸ್ಟ್, ಟರ್ನರ್, ಮಿಲ್ಲರ್ ವಿಷಯದಲ್ಲಿ ಅಲ್ಪಾವಧಿಯ ತರಬೇತಿಯನ್ನು ನೀಡುತ್ತಿದೆ.</p>.<p class="Subhead">ಕೌಶಲ ಅಭಿವೃದ್ಧಿಯ ಉದ್ದೇಶ: ಯುವಜನರಲ್ಲಿ ಕೌಶಲ ಅಭಿವೃದ್ಧಿಯನ್ನು ಹೆಚ್ಚಿಸುವ ಧ್ಯೇಯವನ್ನು ಹೊಂದಿರುವ ಈ ಸಂಸ್ಥೆಯು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಅಭ್ಯರ್ಥಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯನ್ನು ಹೊಂದಿದೆ.</p>.<p>ಕೈಗಾರಿಕೆಗಳಲ್ಲಿ ಗರಿಷ್ಠ ಉತ್ಪಾದನೆಗೆ ಪೂರಕವಾಗುವಂತೆ ತರಬೇತಿ ಹಾಗೂ ಆವಿಷ್ಕಾರ ಕೌಶಲಗಳನ್ನು ಅಭ್ಯರ್ಥಿ<br />ಗಳಿಗೆ ತಿಳಿಸಿಕೊಡಲು ಇಲ್ಲಿ ಹೊಸಹೊಸ ತಂತ್ರ, ವಿಧಾನಗಳನ್ನು ಬಳಸಲಾಗುತ್ತಿದೆ.</p>.<p class="Briefhead">ಅರ್ಜಿ ಸಲ್ಲಿಸಲು 31ರವರೆಗೆ ಅವಕಾಶ</p>.<p>ಈ ಸಾಲಿನ ವಿವಿಧ ಕೋರ್ಸ್ಗಳ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್, ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಇದೇ 31 ಕೊನೆಯ ದಿನ</p>.<p>ಮಾಹಿತಿಗಾಗಿ ತರಬೇತಿ ಕೇಂದ್ರದ ಕಚೇರಿ ಅಥವಾ ದೂ.ಸಂ. 08229-222344, ಮೊಬೈಲ್ ಸಂಖ್ಯೆ 9844290405, 9964601660, 8861412626 ಸಂಪರ್ಕಿಸಬಹುದು.</p>.<p>ಇಲ್ಲಿ ಕಲಿತವರಿಗೆ ಉದ್ಯೋಗಾವಕಾಶ ಸಾಕಷ್ಟು ಲಭ್ಯವಿದ್ದು, ಇದರ ಪ್ರಯೋಜನ ಪಡೆಯಲು ಅಭ್ಯರ್ಥಿಗಳು ಮುಂದೆ ಬರಬೇಕು’ ಎಂದು ಕೇಂದ್ರದ ಪ್ರಾಂಶುಪಾಲ ರಾಧಾಕೃಷ್ಣ ಎಚ್.ಎಂ. ಅವರು ಹೇಳಿದರು.</p>.<p>–––––</p>.<p>ಜಿಟಿಟಿಸಿಯಲ್ಲಿ ತರಬೇತಿ ಪಡೆದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ತರಬೇತಿ ಪಡೆದರೆ ದೇಶ–ವಿದೇಶದಲ್ಲಿ ಉತ್ತಮ ಅವಕಾಶಗಳಿವೆ<br />ರಾಜೇಂದ್ರ, ಜಿಟಿಟಿಸಿ ಹಳೆ ವಿದ್ಯಾರ್ಥಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>