‘ಈ ಗಿಡಕ್ಕೆ ರಸಗೊಬ್ಬರವನ್ನು ಹಾಕಬೇಕು; ಇಲ್ಲವಾದರೆ ಗಿಡಗಳು ಸತ್ತು ಹೋಗುತ್ತವೆ ಮತ್ತು ಸೀಬೆ ಫಸಲು ಸರಿಯಾಗಿ ಬರುವುದಿಲ್ಲ ಎಂದು ಗಿಡ ಪೂರೈಸಿದವರು ಹೇಳಿದ್ದರು. ಆದರೆ, ನಾನು ಯಾವುದೇ ಕಾರಣಕ್ಕೂ ರಸಗೊಬ್ಬರ ಹಾಕುವುದಿಲ್ಲ ಎಂದು ನಿರ್ಧರಿಸಿ, ಹಸುವಿನ ಗೊಬ್ಬರ, ಗಂಜಲ, ಕುರಿ ಗೊಬ್ಬರ, ಒಣ ಎಲೆಗಳು ಮತ್ತು ಹಸಿರೆಲೆಗಳನ್ನು ಕೊಳೆಸಿ ಗೊಬ್ಬರ ಮಾಡಿ ಗಿಡಗಳಿಗೆ ಹಾಕುತ್ತಾ ಬಂದಿದ್ದೇನೆ. ಫಸಲು ಚೆನ್ನಾಗಿದೆ’ ಎಂದು ಎಂದು ಸೀಗನಾಯಕ ಹೇಳಿದರು.