<p><strong>ಹನೂರು:</strong> ಸಮೀಪದ ಗುಂಡಾಲ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಹನೂರು ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಜಂಟಿಯಾಗಿ ಶನಿವಾರ ಬಾಗಿನ ಅರ್ಪಿಸಿದರು.</p>.<p>ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಡಲ್ ಜಲಾಶಯದ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ, ಕೊಳ್ಳೇಗಾಲ ತಾಲ್ಲೂಕಿನ ಕನ್ನೆಗಾಲ ಪಿಕಪ್ ಸೇರಿದಂತೆ ಕೆರೆಕಟ್ಟೆಗಳು ನಾಲೆಗಳ ಅಭಿವೃದ್ಧಿಗಾಗಿ ₹70 ಕೋಟಿ ಅನುದಾನ ಸೇರಿ ಒಟ್ಟು ₹120 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ ಇನ್ನೂ ಕೂಡ ಕಬಿನಿ ನಾಲಾ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮತ್ತು ಜಲಾಶಯಗಳ ಸೇರಿದಂತೆ ಗುಂಡ್ಲುಪೇಟೆ ಎಚ್.ಡಿ. ಕೋಟೆ, ಕೊಳ್ಳೇಗಾಲ ಚಾಮರಾಜನಗರ, ಹನೂರು, ಕಬಿನಿ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ ₹505 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ’ ಎಂದರು.</p>.<p>ಶಾಸಕ ಎಂ. ಆರ್ ಮಂಜುನಾಥ್ ಮಾತನಾಡಿ, ‘ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯ ಅಭಿವೃದ್ಧಿಗೆ ಕಬಿನಿ ನಾಲಾ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಹೆಚ್ಚುವರಿಯಾಗಿ ₹950 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>ಮೈಸೂರು ಕಬಿನಿ ವೃತ್ತ ಅಧೀಕ್ಷಕ ಮಹೇಶ್ ಮಾತನಾಡಿ, ‘ಜಲಾಶಯ ಸೇರಿದಂತೆ ಕಾಲುವೆಗಳಲ್ಲಿ ಹೂಳು ತುಂಬಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸಹ ಬೆಳಗೆ ತಕ್ಕಂತೆ ನೀರಾವರಿಗೆ ತಕ್ಕಂತೆ ತಮ್ಮ ಬೆಳೆಗಳನ್ನು ಬೆಳೆಯಲು ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಮಾನಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ದತ್ತೆಶ್ ಕುಮಾರ್ ಹಾಗೂ ಕಾವೇರಿ ನೀರಾವರಿ ನಿಗಮದ ಎಇಇ ಎಂಜಿನಿಯರ್ ಕರುಣಾಮಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ಸಮೀಪದ ಗುಂಡಾಲ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಹನೂರು ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಜಂಟಿಯಾಗಿ ಶನಿವಾರ ಬಾಗಿನ ಅರ್ಪಿಸಿದರು.</p>.<p>ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಡಲ್ ಜಲಾಶಯದ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ, ಕೊಳ್ಳೇಗಾಲ ತಾಲ್ಲೂಕಿನ ಕನ್ನೆಗಾಲ ಪಿಕಪ್ ಸೇರಿದಂತೆ ಕೆರೆಕಟ್ಟೆಗಳು ನಾಲೆಗಳ ಅಭಿವೃದ್ಧಿಗಾಗಿ ₹70 ಕೋಟಿ ಅನುದಾನ ಸೇರಿ ಒಟ್ಟು ₹120 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ ಇನ್ನೂ ಕೂಡ ಕಬಿನಿ ನಾಲಾ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮತ್ತು ಜಲಾಶಯಗಳ ಸೇರಿದಂತೆ ಗುಂಡ್ಲುಪೇಟೆ ಎಚ್.ಡಿ. ಕೋಟೆ, ಕೊಳ್ಳೇಗಾಲ ಚಾಮರಾಜನಗರ, ಹನೂರು, ಕಬಿನಿ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ ₹505 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ’ ಎಂದರು.</p>.<p>ಶಾಸಕ ಎಂ. ಆರ್ ಮಂಜುನಾಥ್ ಮಾತನಾಡಿ, ‘ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯ ಅಭಿವೃದ್ಧಿಗೆ ಕಬಿನಿ ನಾಲಾ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಹೆಚ್ಚುವರಿಯಾಗಿ ₹950 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.</p>.<p>ಮೈಸೂರು ಕಬಿನಿ ವೃತ್ತ ಅಧೀಕ್ಷಕ ಮಹೇಶ್ ಮಾತನಾಡಿ, ‘ಜಲಾಶಯ ಸೇರಿದಂತೆ ಕಾಲುವೆಗಳಲ್ಲಿ ಹೂಳು ತುಂಬಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸಹ ಬೆಳಗೆ ತಕ್ಕಂತೆ ನೀರಾವರಿಗೆ ತಕ್ಕಂತೆ ತಮ್ಮ ಬೆಳೆಗಳನ್ನು ಬೆಳೆಯಲು ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಮಾನಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ದತ್ತೆಶ್ ಕುಮಾರ್ ಹಾಗೂ ಕಾವೇರಿ ನೀರಾವರಿ ನಿಗಮದ ಎಇಇ ಎಂಜಿನಿಯರ್ ಕರುಣಾಮಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>