ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​​​​​​​ಗುಂಡ್ಲುಪೇಟೆ| ಭಾರತ ಒಗ್ಗೂಡಿಸಿ ಯಾತ್ರೆ ಆರಂಭಕ್ಕೆ ಕ್ಷಣಗಣನೆ

Last Updated 30 ಸೆಪ್ಟೆಂಬರ್ 2022, 4:03 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ರಾಜ್ಯ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ರಾಹುಲ್ ಗಾಂಧಿ‌ ಮತ್ತು ಪಾದಯಾತ್ರಿಗಳ ತಂಡ ಗೂಡಲೂರಿಂದ ಗುಂಡ್ಲುಪೇಟೆಯತ್ತ ಬರುತ್ತಿದ್ದು, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸ್ವಾಗತಕ್ಕೆ ಸಿದ್ಧರಾಗಿದ್ದಾರೆ.

ಕೇರಳದ ಚಂಡೆ, ಗೊರವರ ಕುಣಿತ, ಡೊಳ್ಳು ಕುಣಿತ, ಬ್ಯಾಂಡ್, ಮಂಗಳವಾದ್ಯ ಸೇರಿದಂತೆ ಹಲವು ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿವೆ.

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಅವರು ಮಾತನಾಡಲಿದ್ದಾರೆ.

ಗುಂಡ್ಲುಪೇಟೆಯಲ್ಲಿ 21 ಕಿ.ಮೀ ಪಾದಯಾತ್ರೆ ನಡೆಯಲಿದೆ.

ಮಧ್ಯಾಹ್ನ ಭೋಜನದ ನಂತರ ರಾಹುಲ್ ಗಾಂಧಿ ಅವರು ಬುಡಕಟ್ಟು ಸಮುದಾಯದವರು ಹಾಗೂ ಆಮ್ಲಜನಕ ದುರಂತ ದಲ್ಲಿ ಮೃತಪಟ್ಟವರ‌ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT