<p><strong>ಗುಂಡ್ಲುಪೇಟೆ:</strong> ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅ.2ರ ಗಾಂಧಿ ಜಯಂತಿಯಂದು ನಿಷೇಧವಿದ್ದರೂ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲೀಕರಿಗೆ ಪುರಸಭೆ ಅಧಿಕಾರಿ ದಂಡ ವಿಧಿಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.</p>.<p>ಸರ್ಕಾರದ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಅ.2ರಂದು ಪ್ರಾಣಿ ವಧೆ ಮತ್ತು ಮಾರಾಟ ಮಾಡಬಾರದು ಎಂದು ಮಾಂಸದಂಗಡಿಗಳಿಗೆ ಸೂಚನೆ ನೀಡಲಾಗಿತ್ತು. ಪಟ್ಟಣದ ಇಸಾಕ್ ಪಾಷಾ ಎಂಬುವರು ಪುರಸಭೆಯ ಆದೇಶ ಉಲ್ಲಂಘಿಸಿ ಮಾರಾಟ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಅಧಿಕಾರಿಗಳು ಶುಕ್ರವಾರ ಅಂಗಡಿಗೆ ಭೇಟಿ ನೀಡಿ ₹1 ಸಾವಿರ ದಂಡ ವಿಧಿಸಿ, ಒಂದು ದಿನ ಅವಧಿಗೆ ಅಂಗಡಿಯನ್ನು ಮುಚ್ಚಿಸಿದ್ದಾರೆ. ಘಟನೆ ಮರಕಳಿಸಿದಂತೆ ಮುಚ್ಚಳಿಕೆ ಪತ್ರ ಪಡೆದಿದ್ದಾರೆ. ಕೃತ್ಯ ಪುನರಾವರೆ್ತಿಸಿದರೆ ಉದ್ಯಮ ಪರವಾನಗಿ ರದ್ದು ಪಡಿಸಲಾಗವುದು ಎಂದು ಪುರಸಭೆ ಮುಖ್ಯಾಧಿಕಾರಿ ಶರವಣ ಎಚ್ಚರಿಕೆ ನೀಡಿದ್ದಾರೆ.</p>.<p> ಪುರಸಭೆ ಅಧಿಕಾರಿಗಳಾದ ಪರಮೇಶ್ವರಪ್ಪ, ಮಹೇಶ್ , ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅ.2ರ ಗಾಂಧಿ ಜಯಂತಿಯಂದು ನಿಷೇಧವಿದ್ದರೂ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲೀಕರಿಗೆ ಪುರಸಭೆ ಅಧಿಕಾರಿ ದಂಡ ವಿಧಿಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.</p>.<p>ಸರ್ಕಾರದ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಅ.2ರಂದು ಪ್ರಾಣಿ ವಧೆ ಮತ್ತು ಮಾರಾಟ ಮಾಡಬಾರದು ಎಂದು ಮಾಂಸದಂಗಡಿಗಳಿಗೆ ಸೂಚನೆ ನೀಡಲಾಗಿತ್ತು. ಪಟ್ಟಣದ ಇಸಾಕ್ ಪಾಷಾ ಎಂಬುವರು ಪುರಸಭೆಯ ಆದೇಶ ಉಲ್ಲಂಘಿಸಿ ಮಾರಾಟ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಅಧಿಕಾರಿಗಳು ಶುಕ್ರವಾರ ಅಂಗಡಿಗೆ ಭೇಟಿ ನೀಡಿ ₹1 ಸಾವಿರ ದಂಡ ವಿಧಿಸಿ, ಒಂದು ದಿನ ಅವಧಿಗೆ ಅಂಗಡಿಯನ್ನು ಮುಚ್ಚಿಸಿದ್ದಾರೆ. ಘಟನೆ ಮರಕಳಿಸಿದಂತೆ ಮುಚ್ಚಳಿಕೆ ಪತ್ರ ಪಡೆದಿದ್ದಾರೆ. ಕೃತ್ಯ ಪುನರಾವರೆ್ತಿಸಿದರೆ ಉದ್ಯಮ ಪರವಾನಗಿ ರದ್ದು ಪಡಿಸಲಾಗವುದು ಎಂದು ಪುರಸಭೆ ಮುಖ್ಯಾಧಿಕಾರಿ ಶರವಣ ಎಚ್ಚರಿಕೆ ನೀಡಿದ್ದಾರೆ.</p>.<p> ಪುರಸಭೆ ಅಧಿಕಾರಿಗಳಾದ ಪರಮೇಶ್ವರಪ್ಪ, ಮಹೇಶ್ , ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>