<p><strong>ಗುಂಡ್ಲುಪೇಟೆ</strong>: ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಕರು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.</p>.<p>ತಾಲ್ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಚಾಮುಲ್ ಸಹಯೋಗದೊಂದಿಗೆ ತಾಲ್ಲೂಕು ಮಟ್ಟದ ಹಾಲು ಕರೆಯುವ ಹಾಗೂ ಮಿಶ್ರತಳಿ ಕರು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದಸರಾ ಆಚರಣೆಯ ಸಮಯದಲ್ಲಿ ಮೈಸೂರಿನಲ್ಲಿ ದೊಡ್ಡಮಟ್ಟದಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯುತ್ತದೆ. ಅದರಂತೆಯೇ ಗ್ರಾಮೀಣ ಭಾಗದಲ್ಲಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಿದಾಗ ರೈತರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಮಿಶ್ರತಳಿ ಕರು ಪ್ರದರ್ಶನಗಳಿಂದ ಈ ಭಾಗದ ರೈತರಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿ ಎಂದು ಹಾರೈಸಿದರು.</p>.<p>ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರುಗಳ ಪ್ರದರ್ಶನದಲ್ಲಿ 13 ರಾಸುಗಳು ಪ್ರದರ್ಶನದಲ್ಲಿದ್ದವು. ಅಧಿಕ ಹಾಲು ಕರೆದ ರಾಸುಗಳಿಗೆ ₹10ಸಾವಿರ ಪ್ರಥಮ,₹7,500 ದ್ವಿತೀಯ ಮತ್ತು ₹5 ಸಾವಿರ ತೃತೀಯ ನಗದು ಬಹುಮಾನ ನೀಡಲಾಯಿತು.</p>.<p>ಮಿಶ್ರತಳಿ ಕರುಗಳ ಸ್ಪರ್ಧೆಯಲ್ಲಿ 21 ಜರ್ಸಿ ಮತ್ತು ಎಚ್ಎಫ್ ಕರುಗಳು ಪ್ರದರ್ಶಿಸಲಾಗಿತ್ತು. ಪ್ರದರ್ಶನದಲ್ಲಿದ್ದ ಎಲ್ಲ ರಾಸು ಮತ್ತು ಉತ್ತಮ ಕರುಗಳ ಮಾಲೀಕರಿಗೆ ಹಾಲಿನ ಕ್ಯಾನ್ ನೀಡಿ ಹೈನುಗಾರಿಕೆಯನ್ನು ಪ್ರೊತ್ಸಾಹಿಸಲಾಯಿತು.</p>.<p> ಚಾಮುಲ್ ನಿರ್ದೇಶಕ ಎಚ್.ಎಂ.ನಂಜುಂಡಪ್ರಸಾದ್, ಮುಖ್ಯ ಪಶುವೈದ್ಯಾಧಿಕಾರಿ ಡಾ.ಮಾದೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವನಾಗಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಮಧುಶಂಕರ್, ಡಾ.ನಾಗೇಂದ್ರಸ್ವಾಮಿ, ಗವಿಸ್ವಾಮಿ, ಕೃಷ್ಣ, ಚೇತನ್, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಕರು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.</p>.<p>ತಾಲ್ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಚಾಮುಲ್ ಸಹಯೋಗದೊಂದಿಗೆ ತಾಲ್ಲೂಕು ಮಟ್ಟದ ಹಾಲು ಕರೆಯುವ ಹಾಗೂ ಮಿಶ್ರತಳಿ ಕರು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದಸರಾ ಆಚರಣೆಯ ಸಮಯದಲ್ಲಿ ಮೈಸೂರಿನಲ್ಲಿ ದೊಡ್ಡಮಟ್ಟದಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯುತ್ತದೆ. ಅದರಂತೆಯೇ ಗ್ರಾಮೀಣ ಭಾಗದಲ್ಲಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಿದಾಗ ರೈತರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಮಿಶ್ರತಳಿ ಕರು ಪ್ರದರ್ಶನಗಳಿಂದ ಈ ಭಾಗದ ರೈತರಿಗೆ ಇನ್ನೂ ಹೆಚ್ಚಿನ ಅನುಕೂಲವಾಗಲಿ ಎಂದು ಹಾರೈಸಿದರು.</p>.<p>ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರುಗಳ ಪ್ರದರ್ಶನದಲ್ಲಿ 13 ರಾಸುಗಳು ಪ್ರದರ್ಶನದಲ್ಲಿದ್ದವು. ಅಧಿಕ ಹಾಲು ಕರೆದ ರಾಸುಗಳಿಗೆ ₹10ಸಾವಿರ ಪ್ರಥಮ,₹7,500 ದ್ವಿತೀಯ ಮತ್ತು ₹5 ಸಾವಿರ ತೃತೀಯ ನಗದು ಬಹುಮಾನ ನೀಡಲಾಯಿತು.</p>.<p>ಮಿಶ್ರತಳಿ ಕರುಗಳ ಸ್ಪರ್ಧೆಯಲ್ಲಿ 21 ಜರ್ಸಿ ಮತ್ತು ಎಚ್ಎಫ್ ಕರುಗಳು ಪ್ರದರ್ಶಿಸಲಾಗಿತ್ತು. ಪ್ರದರ್ಶನದಲ್ಲಿದ್ದ ಎಲ್ಲ ರಾಸು ಮತ್ತು ಉತ್ತಮ ಕರುಗಳ ಮಾಲೀಕರಿಗೆ ಹಾಲಿನ ಕ್ಯಾನ್ ನೀಡಿ ಹೈನುಗಾರಿಕೆಯನ್ನು ಪ್ರೊತ್ಸಾಹಿಸಲಾಯಿತು.</p>.<p> ಚಾಮುಲ್ ನಿರ್ದೇಶಕ ಎಚ್.ಎಂ.ನಂಜುಂಡಪ್ರಸಾದ್, ಮುಖ್ಯ ಪಶುವೈದ್ಯಾಧಿಕಾರಿ ಡಾ.ಮಾದೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವನಾಗಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಮಧುಶಂಕರ್, ಡಾ.ನಾಗೇಂದ್ರಸ್ವಾಮಿ, ಗವಿಸ್ವಾಮಿ, ಕೃಷ್ಣ, ಚೇತನ್, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>