<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಲಕ್ಕಿಪುರ ಗ್ರಾಮದಲ್ಲಿಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಶನಿವಾರ ಹುಲಿಯೊಂದು ದಾಳಿ ಮಾಡಿದೆ. ರೈತನ ಬಲಗಣ್ಣಿನ ಭಾಗ ಹಾಗೂ ತಲೆಗೆ ತೀವ್ರ ಗಾಯವಾಗಿದೆ.</p>.<p>ಗೋಪಾಲಪುರ ಗ್ರಾಮದ ಗವಿಯಪ್ಪ (45) ಹುಲಿ ದಾಳಿಗೆ ತುತ್ತಾದ ರೈತ.</p>.<p>ಗವಿಯಪ್ಪ ಅವರು ಶನಿವಾರವೂ ಎಂದಿನಂತೆ ಜಮೀನಿಗೆ ತೆರಳಿ ಕೆಲಸ ಮಾಡುತ್ತಿದ್ದ ವೇಳೆ ದಾಳಿ ದಿಢೀರ್ ದಾಳಿ ಮಾಡಿದೆ. ಈ ವೇಳೆ ರೈತ ಕೂಗಿಕೊಂಡಿದ್ದರಿಂದ ಸುತ್ತಮುತ್ತಲ ಜಮೀನಿನ ರೈತರು ಚೀರಾಡಿಕೊಂಡು ಧಾವಿಸಿದಾಗ ಹುಲಿ ಓಡಿಹೋಗಿದೆ.</p>.<p>ಪಕ್ಕದ ಜಮೀನಿನ ಪೊದೆಯಲ್ಲಿ ಅದು ಅವಿತುಕುಳಿತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.</p>.<p>ಗವಿಯಪ್ಪ ಅವರ ಕಣ್ಣಿನ ಭಾಗ ಹಾಗೂ ತಲೆಗೆ ತೀವ್ರ ಗಾಯವಾಗಿದ್ದು, ಮೈ ಮೇಲೆ ಪರಚಿದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.</p>.<p>ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯಾಧಿಕಾರಿ ನವೀನ್ ಕುಮಾರ್ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p>ಹುಲಿ ದಾಳಿಯಿಂದ ಕೋಪಗೊಂಡಿರುವ ಗ್ರಾಮಸ್ಥರು ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಲಕ್ಕಿಪುರ ಗ್ರಾಮದಲ್ಲಿಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಶನಿವಾರ ಹುಲಿಯೊಂದು ದಾಳಿ ಮಾಡಿದೆ. ರೈತನ ಬಲಗಣ್ಣಿನ ಭಾಗ ಹಾಗೂ ತಲೆಗೆ ತೀವ್ರ ಗಾಯವಾಗಿದೆ.</p>.<p>ಗೋಪಾಲಪುರ ಗ್ರಾಮದ ಗವಿಯಪ್ಪ (45) ಹುಲಿ ದಾಳಿಗೆ ತುತ್ತಾದ ರೈತ.</p>.<p>ಗವಿಯಪ್ಪ ಅವರು ಶನಿವಾರವೂ ಎಂದಿನಂತೆ ಜಮೀನಿಗೆ ತೆರಳಿ ಕೆಲಸ ಮಾಡುತ್ತಿದ್ದ ವೇಳೆ ದಾಳಿ ದಿಢೀರ್ ದಾಳಿ ಮಾಡಿದೆ. ಈ ವೇಳೆ ರೈತ ಕೂಗಿಕೊಂಡಿದ್ದರಿಂದ ಸುತ್ತಮುತ್ತಲ ಜಮೀನಿನ ರೈತರು ಚೀರಾಡಿಕೊಂಡು ಧಾವಿಸಿದಾಗ ಹುಲಿ ಓಡಿಹೋಗಿದೆ.</p>.<p>ಪಕ್ಕದ ಜಮೀನಿನ ಪೊದೆಯಲ್ಲಿ ಅದು ಅವಿತುಕುಳಿತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.</p>.<p>ಗವಿಯಪ್ಪ ಅವರ ಕಣ್ಣಿನ ಭಾಗ ಹಾಗೂ ತಲೆಗೆ ತೀವ್ರ ಗಾಯವಾಗಿದ್ದು, ಮೈ ಮೇಲೆ ಪರಚಿದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.</p>.<p>ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯಾಧಿಕಾರಿ ನವೀನ್ ಕುಮಾರ್ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>.<p>ಹುಲಿ ದಾಳಿಯಿಂದ ಕೋಪಗೊಂಡಿರುವ ಗ್ರಾಮಸ್ಥರು ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>