<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಕಮರಹಳ್ಳಿ ಗ್ರಾಮದಲ್ಲಿ ಗಾಳಿ, ಮಳೆಗೆ ಬಾಳೆ ಫಸಲು ಮತ್ತು ತೆಂಗಿನ ಸಸಿ ನಾಶವಾಗಿದೆ.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ರೈತ ಮನೋಜ್ ಕುಮಾರ್ ಎಂಬವರಿಗೆ ಸೇರಿದ ಕಮರಹಳ್ಳಿ ಗ್ರಾಮದ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ 2 ಸಾವಿರಕ್ಕೂ ಅಧಿಕ ಬಾಳೆ ಗಿಡ ಮತ್ತು 25ಕ್ಕೂ ಅಧಿಕ ತೆಂಗಿನ ಸಸಿ ಶುಕ್ರವಾರ ತಡರಾತ್ರಿ ಬೀಸಿದ ಗಾಳಿಗೆ ನೆಲಕಚ್ಚಿದೆ. ಇದರಿಂದ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ದೂರಿದ್ದಾರೆ.</p>.<p>ಅಧಿಕಾರಿಗಳ ಭೇಟಿ: ಹಾನಿಗೊಳಗಾದ ಜಮೀನಿಗೆ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ರಮೇಶ್ ಮತ್ತು ಗ್ರಾಮ ಆಡಳಿತ ಅಧಿಕಾರಿ ರಂಜನಾ ಭೇಟಿ ನೀಡಿ, ಮಹಜರು ನಡೆಸಿ, ಪರಹಾರದ ಭರವಸೆ ನೀಡಿದರು.</p>.<p>ಪರಿಹಾರಕ್ಕೆ ಒತ್ತಾಯ: ಗೊನೆ ಬಿಡುವ ಹಂತಕ್ಕೆ ಬಂದಿದ್ದ ಬಾಳೆ ನೆಲಕಚ್ಚಿರುವುದರಿಂದ ಲಕ್ಷಾಂತರ ಮೊತ್ತದ ನಷ್ಟ ಉಂಟಾಗಿದೆ. ಕೃಷಿಕರು ಸಾಲದ ಸುಳಿಗೆ ಸಿಲುಕುವಂತಾಗಿದೆ. ಇಲಾಖೆಯವರು ಶೀಘ್ರ ಸೂಕ್ತ ಪರಿಹಾರ ನೀಡಬೇಕು ಎಂದು ಮಾಲೀಕ ಮನೋಜ್ ಕುಮಾರ್ ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-2016045013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಕಮರಹಳ್ಳಿ ಗ್ರಾಮದಲ್ಲಿ ಗಾಳಿ, ಮಳೆಗೆ ಬಾಳೆ ಫಸಲು ಮತ್ತು ತೆಂಗಿನ ಸಸಿ ನಾಶವಾಗಿದೆ.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ರೈತ ಮನೋಜ್ ಕುಮಾರ್ ಎಂಬವರಿಗೆ ಸೇರಿದ ಕಮರಹಳ್ಳಿ ಗ್ರಾಮದ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ 2 ಸಾವಿರಕ್ಕೂ ಅಧಿಕ ಬಾಳೆ ಗಿಡ ಮತ್ತು 25ಕ್ಕೂ ಅಧಿಕ ತೆಂಗಿನ ಸಸಿ ಶುಕ್ರವಾರ ತಡರಾತ್ರಿ ಬೀಸಿದ ಗಾಳಿಗೆ ನೆಲಕಚ್ಚಿದೆ. ಇದರಿಂದ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ದೂರಿದ್ದಾರೆ.</p>.<p>ಅಧಿಕಾರಿಗಳ ಭೇಟಿ: ಹಾನಿಗೊಳಗಾದ ಜಮೀನಿಗೆ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ರಮೇಶ್ ಮತ್ತು ಗ್ರಾಮ ಆಡಳಿತ ಅಧಿಕಾರಿ ರಂಜನಾ ಭೇಟಿ ನೀಡಿ, ಮಹಜರು ನಡೆಸಿ, ಪರಹಾರದ ಭರವಸೆ ನೀಡಿದರು.</p>.<p>ಪರಿಹಾರಕ್ಕೆ ಒತ್ತಾಯ: ಗೊನೆ ಬಿಡುವ ಹಂತಕ್ಕೆ ಬಂದಿದ್ದ ಬಾಳೆ ನೆಲಕಚ್ಚಿರುವುದರಿಂದ ಲಕ್ಷಾಂತರ ಮೊತ್ತದ ನಷ್ಟ ಉಂಟಾಗಿದೆ. ಕೃಷಿಕರು ಸಾಲದ ಸುಳಿಗೆ ಸಿಲುಕುವಂತಾಗಿದೆ. ಇಲಾಖೆಯವರು ಶೀಘ್ರ ಸೂಕ್ತ ಪರಿಹಾರ ನೀಡಬೇಕು ಎಂದು ಮಾಲೀಕ ಮನೋಜ್ ಕುಮಾರ್ ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-2016045013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>