<p>ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಮೇ 2ರ ಶನಿವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.</p>.<p>ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಉದ್ಯಮಿ ಎಂ.ಸುಜೀಂದ್ರ ಹಾಗೂ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು.</p>.<p>ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅನುಗ್ರಹ ಸಂಸ್ಥೆಯ ಸಂಯೋಜಕ ಕೆ.ರಮೇಶ್ ತಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-37-763740939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಮೇ 2ರ ಶನಿವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.</p>.<p>ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಉದ್ಯಮಿ ಎಂ.ಸುಜೀಂದ್ರ ಹಾಗೂ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು.</p>.<p>ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅನುಗ್ರಹ ಸಂಸ್ಥೆಯ ಸಂಯೋಜಕ ಕೆ.ರಮೇಶ್ ತಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-37-763740939</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>