<p><strong>ಗುಂಡ್ಲುಪೇಟೆ</strong>: ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ಜೋರು ಮಳೆಯಾಗಿದ್ದು, ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿರುವ ಕೆಲವು ಕಾಲುವೆ, ತೊರೆ, ಹಳ್ಳಗಳಲ್ಲಿ ನೀರು ಹರಿಯುವ ಜೊತೆಗೆ ಜಮೀನುಗಳಿಗೂ ನುಗ್ಗಿದೆ.</p>.<p>ಹಿಮವದ್ ಗೋಪಾಲಸ್ವಾಮಿ ಬೆಟ್ಟ ತಪ್ಪಲು, ಬಂಡೀಪುರ ಕಾಡಂಚಿನ ಹೊನ್ನೇಗೌಡನಹಳ್ಳಿ, ಗೋಪಾಲಪುರ, ದೇವರಹಳ್ಳಿ, ಹೊಂಗಹಳ್ಳಿ, ಬರಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಜೋರು ಮಳೆಯಾಗಿದೆ.</p>.<p>ಹೊನ್ನೇಗೌಡನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೊ, ಬೀನ್ಸ್, ಸೂರ್ಯಕಾಂತಿ, ಹಲಸಂದೆ ಸೇರಿದಂತೆ ವಿವಿಧ ಫಸಲುಗಳಿದ್ದ ಜಮೀನಿಗೆ ನೀರು ನುಗ್ಗಿದ್ದು, ಬೆಳೆಗಳು ಕೊಚ್ಚಿ ಹೋಗಿದೆ.</p>.<p>ಭೀಮನಬೀಡು ಗ್ರಾಮದಲ್ಲಿ ಇದೀಗ ತಾನೇ ನಾಟಿ ಮಾಡಿದ್ದ ಮಹದೇವ್ ಎಂಬುವವರ ಒಂದೂವರೆ ಎಕರೆ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಇದರಿಂದ ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಜೋರು ಮಳೆಯಿಂದ ರೈತರಿಗೆ ಲಕ್ಷಾಂತರ ಹಣ ನಷ್ಟವಾಗಿದೆ.</p>.<p>ಬಂಡೀಪುರ ಕಾಡಂಚಿನ ಬೇರಂಬಾಡಿಯ ಕೆಂಪು ಸಾಗರ ಕೆರೆ, ಹಂಗಳ ಹಿರಿಕೆರೆ, ಬರಗಿ ಕೆರೆ ಸೇರಿದಂತೆ ವಿವಿಧ ಕೆರೆಗಳಿಗೆ ನೀರು ಹರಿದು ಬರುತ್ತಿದೆ. ಹಲವು ಕೆರೆಗಳು ತುಂಬಿದೆ.</p>.<p>ಮಳೆ ಸುರಿದಿರುವುದರಿಂದ ಬಿಸಿಲಿನಿಂದ ತತ್ತರಿಸಿದ್ದ ಜನರ ಮೊಗದಲ್ಲಿ ಮಂದಹಾಸವು ಸಹ ಮೂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-605374619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ಜೋರು ಮಳೆಯಾಗಿದ್ದು, ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿರುವ ಕೆಲವು ಕಾಲುವೆ, ತೊರೆ, ಹಳ್ಳಗಳಲ್ಲಿ ನೀರು ಹರಿಯುವ ಜೊತೆಗೆ ಜಮೀನುಗಳಿಗೂ ನುಗ್ಗಿದೆ.</p>.<p>ಹಿಮವದ್ ಗೋಪಾಲಸ್ವಾಮಿ ಬೆಟ್ಟ ತಪ್ಪಲು, ಬಂಡೀಪುರ ಕಾಡಂಚಿನ ಹೊನ್ನೇಗೌಡನಹಳ್ಳಿ, ಗೋಪಾಲಪುರ, ದೇವರಹಳ್ಳಿ, ಹೊಂಗಹಳ್ಳಿ, ಬರಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಜೋರು ಮಳೆಯಾಗಿದೆ.</p>.<p>ಹೊನ್ನೇಗೌಡನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೊ, ಬೀನ್ಸ್, ಸೂರ್ಯಕಾಂತಿ, ಹಲಸಂದೆ ಸೇರಿದಂತೆ ವಿವಿಧ ಫಸಲುಗಳಿದ್ದ ಜಮೀನಿಗೆ ನೀರು ನುಗ್ಗಿದ್ದು, ಬೆಳೆಗಳು ಕೊಚ್ಚಿ ಹೋಗಿದೆ.</p>.<p>ಭೀಮನಬೀಡು ಗ್ರಾಮದಲ್ಲಿ ಇದೀಗ ತಾನೇ ನಾಟಿ ಮಾಡಿದ್ದ ಮಹದೇವ್ ಎಂಬುವವರ ಒಂದೂವರೆ ಎಕರೆ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಇದರಿಂದ ರೈತ ಮಹಿಳೆ ಕಣ್ಣೀರು ಹಾಕಿದ್ದಾರೆ. ಜೋರು ಮಳೆಯಿಂದ ರೈತರಿಗೆ ಲಕ್ಷಾಂತರ ಹಣ ನಷ್ಟವಾಗಿದೆ.</p>.<p>ಬಂಡೀಪುರ ಕಾಡಂಚಿನ ಬೇರಂಬಾಡಿಯ ಕೆಂಪು ಸಾಗರ ಕೆರೆ, ಹಂಗಳ ಹಿರಿಕೆರೆ, ಬರಗಿ ಕೆರೆ ಸೇರಿದಂತೆ ವಿವಿಧ ಕೆರೆಗಳಿಗೆ ನೀರು ಹರಿದು ಬರುತ್ತಿದೆ. ಹಲವು ಕೆರೆಗಳು ತುಂಬಿದೆ.</p>.<p>ಮಳೆ ಸುರಿದಿರುವುದರಿಂದ ಬಿಸಿಲಿನಿಂದ ತತ್ತರಿಸಿದ್ದ ಜನರ ಮೊಗದಲ್ಲಿ ಮಂದಹಾಸವು ಸಹ ಮೂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-37-605374619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>