<p><strong>ಚಾಮರಾಜನಗರ: </strong>ಗುಂಡ್ಲುಪೇಟೆ ಕಬ್ಬೆಕಟ್ಟೆಯ ಬೆತ್ತಲೆ ಮೆರವಣಿಗೆ ಪ್ರಕರಣದ ಆರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇದೇ 11ಕ್ಕೆ ಕಾಯ್ದಿರಿಸಿದೆ.</p>.<p>ಆರೋಪಿಗಳಾದಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವಮೂರ್ತಿ ಮತ್ತುಪುಟ್ಟಸ್ವಾಮಿ ಅವರ ನ್ಯಾಯಾಂಗ ಬಂಧನದ ಅವಧಿಯೂ ಅದೇ ದಿನ ಮುಕ್ತಾಯವಾಗಲಿದ್ದು, ಅಂದೇ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ನೀಡಲಿದೆ.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧಿಶ ಜಿ.ಬಸವರಾಜ ಅವರು ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು.</p>.<p>ಪಬ್ಲಿಕ್ ಪ್ರಾಸಿಕ್ಯೂಟರ್ ಲೋಲಾಕ್ಷಿ ಅವರು ಆರೋಪಿಗಳಿಗೆ ಜಾಮೀನು ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.</p>.<p>‘ದೇಹದ ಮಾನವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹಕ್ಕು. ಅಂತಹದ್ದರಲ್ಲಿ ನಗ್ನವಾಗಿ ಮೆರವಣಿಗೆ ಮಾಡಲಾಗಿದೆ. ಆರೋಪಿಗಳು ಸಂತ್ರಸ್ತನ ಕೈಯನ್ನು ಕಟ್ಟಿ ಹಾಕಿದ್ದರು. ಕನಿಷ್ಠ ಪಕ್ಷ ಬಟ್ಟೆಯನ್ನಾದರೂ ತೊಡಿಸಬಹುದಿತ್ತು’ ಎಂದು ವಾದಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೊ ಹೊಂದಿದ್ದ ಸಿ.ಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.</p>.<p>ಆರೋಪಿಗಳ ಪರ ವಾದ ಮಂಡಿಸಿದ ನಂಜನಗೂಡಿನ ವಕೀಲರಾದ ಶ್ರುತಿ ಅವರು, ‘ಉದ್ದೇಶಪೂರ್ವಕವಾಗಿ ಕೃತ್ಯ ನಡೆದಿಲ್ಲ. ಆರೋಪಿಗಳು ಈಗಾಗಲೇ 22 ದಿನಗಳಿಂದ ಜೈಲಿನಲ್ಲಿದ್ದಾರೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು’ ಎಂದು ವಾದಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರೊಬ್ಬರೊಂದಿಗೆ ಮಾತನಾಡಿದ ಆಡಿಯೊ ತುಣಕು ಇರುವ ಧ್ವನಿಮುದ್ರಿಕೆಯನ್ನು ಅವರು ನ್ಯಾಯಾಧೀಶರಿಗೆ ಸಲ್ಲಿಸಿದರು.</p>.<p>ಎರಡೂ ಮದ್ರಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದ ಬಿ.ಬಸವರಾಜ ಅವರು, ‘ಆರೋಪಿಗಳಿಗೆ ಯಾಕೆ ಜಾಮೀನು ನೀಡಬಾರದು’ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಪ್ರಶ್ನಿಸಿದರು.</p>.<p>‘ಆರು ಆರೋಪಿಗಳ ಪೈಕಿ ಐವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಗಾಗಿ ಜಾಮೀನು ನೀಡಬಾರದು’ ಎಂದು ಲೋಲಾಕ್ಷಿಯವರು ಹೇಳಿದರು.</p>.<p>ವಿಡಿಯೊ ವೈರಲ್ ಆಗಿರುವುದನ್ನು ಪ್ರಸ್ತಾಪಿಸಿದ ನ್ಯಾಯಾಧೀಶರು, ‘ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಯಾಕೆ ಪೊಲೀಸರು ಪ್ರಕರಣ ದಾಖಲಿಸಿಲ್ಲ’ ಎಂದು ಪ್ರಶ್ನಿಸಿದರು. ತನಿಖಾಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ ಎಂದು ಲೋಲಾಕ್ಷಿ ಹೇಳಿದರು.</p>.<p>ಎರಡು ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು 11ಕ್ಕೆ ಆದೇಶ ನೀಡುವುದಾಗಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಗುಂಡ್ಲುಪೇಟೆ ಕಬ್ಬೆಕಟ್ಟೆಯ ಬೆತ್ತಲೆ ಮೆರವಣಿಗೆ ಪ್ರಕರಣದ ಆರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇದೇ 11ಕ್ಕೆ ಕಾಯ್ದಿರಿಸಿದೆ.</p>.<p>ಆರೋಪಿಗಳಾದಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವಮೂರ್ತಿ ಮತ್ತುಪುಟ್ಟಸ್ವಾಮಿ ಅವರ ನ್ಯಾಯಾಂಗ ಬಂಧನದ ಅವಧಿಯೂ ಅದೇ ದಿನ ಮುಕ್ತಾಯವಾಗಲಿದ್ದು, ಅಂದೇ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ನೀಡಲಿದೆ.</p>.<p>ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧಿಶ ಜಿ.ಬಸವರಾಜ ಅವರು ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು.</p>.<p>ಪಬ್ಲಿಕ್ ಪ್ರಾಸಿಕ್ಯೂಟರ್ ಲೋಲಾಕ್ಷಿ ಅವರು ಆರೋಪಿಗಳಿಗೆ ಜಾಮೀನು ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.</p>.<p>‘ದೇಹದ ಮಾನವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹಕ್ಕು. ಅಂತಹದ್ದರಲ್ಲಿ ನಗ್ನವಾಗಿ ಮೆರವಣಿಗೆ ಮಾಡಲಾಗಿದೆ. ಆರೋಪಿಗಳು ಸಂತ್ರಸ್ತನ ಕೈಯನ್ನು ಕಟ್ಟಿ ಹಾಕಿದ್ದರು. ಕನಿಷ್ಠ ಪಕ್ಷ ಬಟ್ಟೆಯನ್ನಾದರೂ ತೊಡಿಸಬಹುದಿತ್ತು’ ಎಂದು ವಾದಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೊ ಹೊಂದಿದ್ದ ಸಿ.ಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.</p>.<p>ಆರೋಪಿಗಳ ಪರ ವಾದ ಮಂಡಿಸಿದ ನಂಜನಗೂಡಿನ ವಕೀಲರಾದ ಶ್ರುತಿ ಅವರು, ‘ಉದ್ದೇಶಪೂರ್ವಕವಾಗಿ ಕೃತ್ಯ ನಡೆದಿಲ್ಲ. ಆರೋಪಿಗಳು ಈಗಾಗಲೇ 22 ದಿನಗಳಿಂದ ಜೈಲಿನಲ್ಲಿದ್ದಾರೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು’ ಎಂದು ವಾದಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರೊಬ್ಬರೊಂದಿಗೆ ಮಾತನಾಡಿದ ಆಡಿಯೊ ತುಣಕು ಇರುವ ಧ್ವನಿಮುದ್ರಿಕೆಯನ್ನು ಅವರು ನ್ಯಾಯಾಧೀಶರಿಗೆ ಸಲ್ಲಿಸಿದರು.</p>.<p>ಎರಡೂ ಮದ್ರಿಕೆಗಳನ್ನು ಪರಿಶೀಲಿಸುವುದಾಗಿ ಹೇಳಿದ ಬಿ.ಬಸವರಾಜ ಅವರು, ‘ಆರೋಪಿಗಳಿಗೆ ಯಾಕೆ ಜಾಮೀನು ನೀಡಬಾರದು’ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಪ್ರಶ್ನಿಸಿದರು.</p>.<p>‘ಆರು ಆರೋಪಿಗಳ ಪೈಕಿ ಐವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಗಾಗಿ ಜಾಮೀನು ನೀಡಬಾರದು’ ಎಂದು ಲೋಲಾಕ್ಷಿಯವರು ಹೇಳಿದರು.</p>.<p>ವಿಡಿಯೊ ವೈರಲ್ ಆಗಿರುವುದನ್ನು ಪ್ರಸ್ತಾಪಿಸಿದ ನ್ಯಾಯಾಧೀಶರು, ‘ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಯಾಕೆ ಪೊಲೀಸರು ಪ್ರಕರಣ ದಾಖಲಿಸಿಲ್ಲ’ ಎಂದು ಪ್ರಶ್ನಿಸಿದರು. ತನಿಖಾಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ ಎಂದು ಲೋಲಾಕ್ಷಿ ಹೇಳಿದರು.</p>.<p>ಎರಡು ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು 11ಕ್ಕೆ ಆದೇಶ ನೀಡುವುದಾಗಿ ಪ್ರಕಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>