<p><strong>ಗುಂಡ್ಲುಪೇಟೆ</strong>: ಪಟ್ಟಣದ ಹೊರವಲಯದಲ್ಲಿರುವ ಮಡಹಳ್ಳಿ ಹಾಗೂ ಕೂತನೂರು ಗುಡ್ಡದಲ್ಲಿ ನಿಯಮಬಾಹಿರವಾಗಿ ಸುರಕ್ಷತಾ ಕ್ರಮಗಳಿಲ್ಲದೆ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.</p>.<p>ಪಟ್ಟಣದ ಹೊರವಲಯದಲ್ಲಿರುವ ಎರಡು ಗುಡ್ಡಗಳಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಗಣಿಗಾರಿಕೆ ನಡೆಸಲಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದರೂ ಕ್ರಮ ವಹಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಕೂತನೂರು ಹಾಗೂ ಮಡಹಳ್ಳಿ ಗ್ರಾಮದ ಸರ್ವೆ ನಂಬರ್ಗಳಲ್ಲಿ ಹತ್ತಕ್ಕೂ ಹೆಚ್ಚಿನ ಕಡೆ ಸುರಕ್ಷತಾ ಕ್ರಮಗಳನ್ನು ಅನುಸರಿದೆ ಗಣಿಗಾರಿಕೆ ನಡೆಯುತ್ತಿದ್ದು ಸುತ್ತಮುತ್ತಲಿನ ರೈತರಿಗೆ ತೊಂದರೆಯಾಗಿದೆ. ಗಣಿಗಾರಿಕೆ ಮಾಡುವಾಗ ಸಿಡಿಯುವ ಕಲ್ಲುಗಳು ಜಮೀನುಗಳಿಗೆ ಬಂದು ಬೀಳುತ್ತಿದ್ದು ನಿರ್ಭೀತಿಯಿಂದ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಉಳುಮೆ ಮಾಡುವಾಗ, ನೀರು ಹಾಯಿಸುವಾಗ ಮೈಮೇಲೆ ಕಲ್ಲುಗಳು ಬೀಳುವ ಆತಂಕ ಸದಾ ಕಾಡುತ್ತದೆ.</p>.<p>ಜಮೀನಿನಲ್ಲಿ ಜಾನುವಾರು ಮೇಯಿಸುವಾಗಲು ಹಲವು ಬಾರಿ ಕಲ್ಲುಗಳು ಸಿಡಿದು ಜಾನುವಾರುಗಳಿಗೆ ಬಿದ್ದಿದ್ದು ಪ್ರಾಣಹಾನಿ ಭೀತಿ ಎದುರಾಗಿದೆ. ರಾಸುಗಳನ್ನು ಜಮೀನಿನಲ್ಲಿ ಮೇಯಲು ಬಿಡಲು ಭಯವಾಗುತ್ತಿದೆ. ಗಣಿಗಾರಿಕೆ ಜಾಗದೊಳಗೆ ಆಕಸ್ಮಿಕವಾಗಿ ಜಾನುವಾರುಗಳು ಹೋದರೆ ಮರಳಿ ಕರೆತರಲು ಭಯವಾಗುತ್ತದೆ. ನೂರಾರು ಅಡಿಗಳಷ್ಟು ಆಳವಿರುವ ಕಂದಕಗಳು, ದೈತ್ಯ ಕಲ್ಲುಗಳು ಭಯ ಹುಟ್ಟಿಸುತ್ತಿವೆ.</p>.<p>ದೂರಿನ ಕುರಿತು ಪರಿಶೀಲಿಸಲು ಗಣಿ ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳಭೇಟಿ ಮಾಡಿ ತೆರಳುತ್ತಿದ್ದಾರೆ. ನಿಯಮ ಉಲ್ಲಂಘನೆ ಸಂಬಂಧ ಕಠಿಣ ಕ್ರಮ ಜರುಗಿಸಿದ ಉದಾಹರಣೆಗಳು ಇಲ್ಲ, ಸರ್ಕಾರಿ ಜಾಗದಲ್ಲೂ ಗಣಿಗಾರಿಕೆ ನಡೆಯುತ್ತಿರುವ ಅನುಮಾನಗಳಿದ್ದು ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಮಾಜಿ ಪುರಸಭಾ ಸದಸ್ಯ ಎಚ್.ಆರ್.ರಾಜಗೋಪಾಲ್ ಒತ್ತಾಯಿಸಿದ್ದಾರೆ.</p>.<p>ಗ್ರಾಮಸ್ಥರು ಹಾಗೂ ರೈತರಿಂದ ದೂರುಗಳು ಬಂದಾಗ ಅಧಿಕಾರಿಗಳು ನೆಪಮಾತ್ರಕ್ಕೆ ಪರಿಶೀಲಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಕಂದಾಯ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಡಿಗುರುತು ಮಾಡಿ ಸರ್ಕಾರಿ ಜಾಗ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜಗೋಪಾಲ್ ಆಗ್ರಹಿಸಿದ್ದಾರೆ.</p>.<p>ಹಿಂದೆ ಮಡಹಳ್ಳಿ ಗುಡ್ಡದ ಬಳಿ ನಡೆಯುತ್ತಿದ್ದ ಗಣಿಗಾಣಿಕೆ ವೇಳೆ ಗುಡ್ಡ ಕುಸಿದು ನಾಲ್ವರು ಜೀವಂತವಾಗಿ ಸಮಾಧಿಯಾಗಿದ್ದರು. ಇಂತಹ ದುರ್ಘಟನೆ ಸಂಭವಿಸಿದ್ದರೂ ಎಚ್ಚೆತ್ತುಕೊಳ್ಳದಿರುವುದು ಬೇಸರದ ಸಂಗತಿ, ಎರಡು ಗುಡ್ಡಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಪರಿಕರಗಳು ಇಲ್ಲವಾಗಿದೆ.</p>.<p>ಗಣಿಗಾರಿಕೆ ನಡೆಸುವ ಸ್ಥಳದ ಸುತ್ತಲೂ ಬೇಲಿ ಹಾಕಿಲ್ಲ, ಪರಿಣಾಮ ಆಳವಾದ ಕಂದಕಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಈಜಾಡಲು ಹೋಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವು ತಿಂಗಳ ಹಿಂದಷ್ಟೆ ಹಿರಿಕಾಟಿಯಲ್ಲಿ ಗಣಿಗಾರಿಕೆಯ ಗುಡ್ಡದ ಮೇಲಿಂದ ಬಿದ್ದು ಚಾಲಕ ಮೃತಪಟ್ಟಿದ್ದ ಎಂದು ರೈತ ಸಂಘಟನೆಯ ಮುಖಂಡ ಮಾಧು ಅಸಮಾಧಾನ ವ್ಯಕ್ತಪಡಿಸಿದರು.</p>.<div><blockquote>ಗೋಮಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪರಿಶೀಲಿಸುವಂತೆ ಹಾಗೂ ಗಣಿಗಾರಿಕೆ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಬಗ್ಗೆ ಗಣಿ ಇಲಾಖೆಗೆ ಪತ್ರ ಬರೆಯಲಾಗಿದೆ. </blockquote><span class="attribution">-ತನ್ಮಯ್, ತಹಶೀಲ್ದಾರ್</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-37-78395279</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಪಟ್ಟಣದ ಹೊರವಲಯದಲ್ಲಿರುವ ಮಡಹಳ್ಳಿ ಹಾಗೂ ಕೂತನೂರು ಗುಡ್ಡದಲ್ಲಿ ನಿಯಮಬಾಹಿರವಾಗಿ ಸುರಕ್ಷತಾ ಕ್ರಮಗಳಿಲ್ಲದೆ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.</p>.<p>ಪಟ್ಟಣದ ಹೊರವಲಯದಲ್ಲಿರುವ ಎರಡು ಗುಡ್ಡಗಳಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಗಣಿಗಾರಿಕೆ ನಡೆಸಲಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದರೂ ಕ್ರಮ ವಹಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.</p>.<p>ಕೂತನೂರು ಹಾಗೂ ಮಡಹಳ್ಳಿ ಗ್ರಾಮದ ಸರ್ವೆ ನಂಬರ್ಗಳಲ್ಲಿ ಹತ್ತಕ್ಕೂ ಹೆಚ್ಚಿನ ಕಡೆ ಸುರಕ್ಷತಾ ಕ್ರಮಗಳನ್ನು ಅನುಸರಿದೆ ಗಣಿಗಾರಿಕೆ ನಡೆಯುತ್ತಿದ್ದು ಸುತ್ತಮುತ್ತಲಿನ ರೈತರಿಗೆ ತೊಂದರೆಯಾಗಿದೆ. ಗಣಿಗಾರಿಕೆ ಮಾಡುವಾಗ ಸಿಡಿಯುವ ಕಲ್ಲುಗಳು ಜಮೀನುಗಳಿಗೆ ಬಂದು ಬೀಳುತ್ತಿದ್ದು ನಿರ್ಭೀತಿಯಿಂದ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಉಳುಮೆ ಮಾಡುವಾಗ, ನೀರು ಹಾಯಿಸುವಾಗ ಮೈಮೇಲೆ ಕಲ್ಲುಗಳು ಬೀಳುವ ಆತಂಕ ಸದಾ ಕಾಡುತ್ತದೆ.</p>.<p>ಜಮೀನಿನಲ್ಲಿ ಜಾನುವಾರು ಮೇಯಿಸುವಾಗಲು ಹಲವು ಬಾರಿ ಕಲ್ಲುಗಳು ಸಿಡಿದು ಜಾನುವಾರುಗಳಿಗೆ ಬಿದ್ದಿದ್ದು ಪ್ರಾಣಹಾನಿ ಭೀತಿ ಎದುರಾಗಿದೆ. ರಾಸುಗಳನ್ನು ಜಮೀನಿನಲ್ಲಿ ಮೇಯಲು ಬಿಡಲು ಭಯವಾಗುತ್ತಿದೆ. ಗಣಿಗಾರಿಕೆ ಜಾಗದೊಳಗೆ ಆಕಸ್ಮಿಕವಾಗಿ ಜಾನುವಾರುಗಳು ಹೋದರೆ ಮರಳಿ ಕರೆತರಲು ಭಯವಾಗುತ್ತದೆ. ನೂರಾರು ಅಡಿಗಳಷ್ಟು ಆಳವಿರುವ ಕಂದಕಗಳು, ದೈತ್ಯ ಕಲ್ಲುಗಳು ಭಯ ಹುಟ್ಟಿಸುತ್ತಿವೆ.</p>.<p>ದೂರಿನ ಕುರಿತು ಪರಿಶೀಲಿಸಲು ಗಣಿ ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳಭೇಟಿ ಮಾಡಿ ತೆರಳುತ್ತಿದ್ದಾರೆ. ನಿಯಮ ಉಲ್ಲಂಘನೆ ಸಂಬಂಧ ಕಠಿಣ ಕ್ರಮ ಜರುಗಿಸಿದ ಉದಾಹರಣೆಗಳು ಇಲ್ಲ, ಸರ್ಕಾರಿ ಜಾಗದಲ್ಲೂ ಗಣಿಗಾರಿಕೆ ನಡೆಯುತ್ತಿರುವ ಅನುಮಾನಗಳಿದ್ದು ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಮಾಜಿ ಪುರಸಭಾ ಸದಸ್ಯ ಎಚ್.ಆರ್.ರಾಜಗೋಪಾಲ್ ಒತ್ತಾಯಿಸಿದ್ದಾರೆ.</p>.<p>ಗ್ರಾಮಸ್ಥರು ಹಾಗೂ ರೈತರಿಂದ ದೂರುಗಳು ಬಂದಾಗ ಅಧಿಕಾರಿಗಳು ನೆಪಮಾತ್ರಕ್ಕೆ ಪರಿಶೀಲಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಕಂದಾಯ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಡಿಗುರುತು ಮಾಡಿ ಸರ್ಕಾರಿ ಜಾಗ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜಗೋಪಾಲ್ ಆಗ್ರಹಿಸಿದ್ದಾರೆ.</p>.<p>ಹಿಂದೆ ಮಡಹಳ್ಳಿ ಗುಡ್ಡದ ಬಳಿ ನಡೆಯುತ್ತಿದ್ದ ಗಣಿಗಾಣಿಕೆ ವೇಳೆ ಗುಡ್ಡ ಕುಸಿದು ನಾಲ್ವರು ಜೀವಂತವಾಗಿ ಸಮಾಧಿಯಾಗಿದ್ದರು. ಇಂತಹ ದುರ್ಘಟನೆ ಸಂಭವಿಸಿದ್ದರೂ ಎಚ್ಚೆತ್ತುಕೊಳ್ಳದಿರುವುದು ಬೇಸರದ ಸಂಗತಿ, ಎರಡು ಗುಡ್ಡಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಪರಿಕರಗಳು ಇಲ್ಲವಾಗಿದೆ.</p>.<p>ಗಣಿಗಾರಿಕೆ ನಡೆಸುವ ಸ್ಥಳದ ಸುತ್ತಲೂ ಬೇಲಿ ಹಾಕಿಲ್ಲ, ಪರಿಣಾಮ ಆಳವಾದ ಕಂದಕಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಈಜಾಡಲು ಹೋಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವು ತಿಂಗಳ ಹಿಂದಷ್ಟೆ ಹಿರಿಕಾಟಿಯಲ್ಲಿ ಗಣಿಗಾರಿಕೆಯ ಗುಡ್ಡದ ಮೇಲಿಂದ ಬಿದ್ದು ಚಾಲಕ ಮೃತಪಟ್ಟಿದ್ದ ಎಂದು ರೈತ ಸಂಘಟನೆಯ ಮುಖಂಡ ಮಾಧು ಅಸಮಾಧಾನ ವ್ಯಕ್ತಪಡಿಸಿದರು.</p>.<div><blockquote>ಗೋಮಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪರಿಶೀಲಿಸುವಂತೆ ಹಾಗೂ ಗಣಿಗಾರಿಕೆ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಬಗ್ಗೆ ಗಣಿ ಇಲಾಖೆಗೆ ಪತ್ರ ಬರೆಯಲಾಗಿದೆ. </blockquote><span class="attribution">-ತನ್ಮಯ್, ತಹಶೀಲ್ದಾರ್</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-37-78395279</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>