<p>ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಭಾನುವಾರ ತಡರಾತ್ರಿ ದಾಂಧಲೆ ನಡೆಸಿ ತೆಂಗಿನ ಸಸಿ ಮತ್ತು ಟೊಮೆಟೊ ನಾಶಪಡಿಸಿದೆ.</p>.<p>ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡಸಿ ಟಮೋಟೊ ಮತ್ತು ಬಾಳೆ ಬೆಳೆ ನಾಶ ಪಡಿಸಿದ ಘಟನೆ ನಡೆದಿತ್ತು. ಇದೀಗ ಮಂಚಹಳ್ಳಿಯ ರೈತ ಮಹದೇವೆಗೌಡ ಎಂಬುವವರಿಗೆ ಸೇರಿದ ಸರ್ವೇ ನಂ- 138ರ ಜಮೀನಿಗೆ ದಾಳಿಯಿಟ್ಟು ಬೆಳೆ ನಾಶಪಡಿಸಿದೆ.</p>.<p>ಕಳೆದ ಮೂರು ತಿಂಗಳಲ್ಲಿ ಸುಮಾರು 16 ಬಾರಿ ದಾಳಿ ನಡೆಸಿವೆ. ದಾಳಿಗೆ ಟೊಮೆಟೊ, ಬಾಳೆ ಹಾಗೂ ಸೋಲಾರ್ ತಂತಿ ನಾಶಪಡಿಸಿದ್ದರಿಂದ ರೈತರಿಗೆ ಲಕ್ಷಾಂತರ ಹಣ ನಷ್ಟ ಉಂಟಾಗಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ರೈಲ್ವೆ ಬ್ಯಾರಿಕೇಡ್ ದಾಟಿ ಬಂದು ದಾಂಧಲೆ ನಡೆಸುತ್ತಿರುವ ಕಾಡಾನೆ ಹಿಂಡಿನ ದಾಳಿಗೆ ಅನ್ನದಾತ ರೈತರು ರೋಸಿ ಹೋಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ನಿಯಂತ್ರಿಸಲು ಸೂಕ್ತ ಕ್ರಮವಹಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ಅರಣ್ಯ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-37-114381044</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಭಾನುವಾರ ತಡರಾತ್ರಿ ದಾಂಧಲೆ ನಡೆಸಿ ತೆಂಗಿನ ಸಸಿ ಮತ್ತು ಟೊಮೆಟೊ ನಾಶಪಡಿಸಿದೆ.</p>.<p>ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡಸಿ ಟಮೋಟೊ ಮತ್ತು ಬಾಳೆ ಬೆಳೆ ನಾಶ ಪಡಿಸಿದ ಘಟನೆ ನಡೆದಿತ್ತು. ಇದೀಗ ಮಂಚಹಳ್ಳಿಯ ರೈತ ಮಹದೇವೆಗೌಡ ಎಂಬುವವರಿಗೆ ಸೇರಿದ ಸರ್ವೇ ನಂ- 138ರ ಜಮೀನಿಗೆ ದಾಳಿಯಿಟ್ಟು ಬೆಳೆ ನಾಶಪಡಿಸಿದೆ.</p>.<p>ಕಳೆದ ಮೂರು ತಿಂಗಳಲ್ಲಿ ಸುಮಾರು 16 ಬಾರಿ ದಾಳಿ ನಡೆಸಿವೆ. ದಾಳಿಗೆ ಟೊಮೆಟೊ, ಬಾಳೆ ಹಾಗೂ ಸೋಲಾರ್ ತಂತಿ ನಾಶಪಡಿಸಿದ್ದರಿಂದ ರೈತರಿಗೆ ಲಕ್ಷಾಂತರ ಹಣ ನಷ್ಟ ಉಂಟಾಗಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ರೈಲ್ವೆ ಬ್ಯಾರಿಕೇಡ್ ದಾಟಿ ಬಂದು ದಾಂಧಲೆ ನಡೆಸುತ್ತಿರುವ ಕಾಡಾನೆ ಹಿಂಡಿನ ದಾಳಿಗೆ ಅನ್ನದಾತ ರೈತರು ರೋಸಿ ಹೋಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ನಿಯಂತ್ರಿಸಲು ಸೂಕ್ತ ಕ್ರಮವಹಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ಅರಣ್ಯ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-37-114381044</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>