<p>ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ-ಮೈಸೂರು ರಾಷ್ಟ್ರೀಯ ಹೆದ್ದಾರಿ-766ರ ಹಿರೀಕಾಟಿ ಗೇಟ್ ಸಮೀಪ ಈಚೆಗೆ ದರೋಡೆಕೋರರ ತಂಡವೊಂದು ಕೇರಳ ಮೂಲದ ವ್ಯಕ್ತಿಯೊಬ್ಬರ ಕಾರು ಅಡ್ಡಗಟ್ಡಿ ಅಪಹರಿಸಿ ಮೊಬೈಲ್ ಫೋನ್, ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ಗಳನ್ನು ಕಸಿದು ಪರಾರಿಯಾಗಿದ್ದಾರೆ.</p>.<p>ತಾಲ್ಲೂಕಿನ ಹಿರೀಕಾಟಿ ಗೇಟ್ ಸಮೀಪ ಮೇ 21ರ ಸಂಜೆ 7ರ ಸಮಯದಲ್ಲಿ ಕೇರಳದ ಸುಲ್ತಾನ್ ಬತ್ತೇರಿಯ ಅಬ್ರಿಕೊ ಟ್ರಾನ್ಸ್ ಪೋರ್ಟ್ ಕಂಪನಿಯ ಮ್ಯಾನೇಜರ್ ಆಸೀಫ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಕಾರಿನ ಸಮೇತ ಅವರನ್ನು ಅಪಹರಿಸಿದ್ದಾರೆ.</p>.<p>ನಂಜನಗೂಡು-ನರಸೀಪುರ ರಸ್ತೆಗೆ ಕಾರನ್ನು ಕೊಂಡೊಯ್ದು ಹಣಕ್ಕಾಗಿ ತಡಕಾಡಿದ್ದಾರೆ. ಹಣ ಸಿಗದ ಹಿನ್ನೆಲೆಯಲ್ಲಿ ಆಸೀಫ್ ಅವರ ಮೊಬೈಲ್, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳನ್ನು ಕಸಿದು ಮಾರ್ಗ ಮಧ್ಯೆಯೇ ಅವರನ್ನು ಕೆಳಗಿಳಿಸಿ ಪರಾರಿಯಾಗಿದ್ದಾರೆ. ಆಸೀಫ್ ಕಾರು ಆಲಂಬೂರು ಕಾಲುವೆ ಬಳಿ ಪತ್ತೆಯಾಗಿದೆ.</p>.<p>ಆಸೀಫ್ ಕೆಲಸದ ನಿಮಿತ್ತ ಮೈಸೂರಿನ ಬಂಡಿಪಾಳ್ಯದ ಕಚೇರಿ ಆಗಾಗ ಬಂದು ಹೋಗತ್ತಿದ್ದರು. ಇದನ್ನು ಗಮನಿಸಿದ್ದ ದುಷ್ಕರ್ಮಿಗಳು ಹಣ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ದರೋಡೆ ನಡೆದ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ,</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-37-570976357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ-ಮೈಸೂರು ರಾಷ್ಟ್ರೀಯ ಹೆದ್ದಾರಿ-766ರ ಹಿರೀಕಾಟಿ ಗೇಟ್ ಸಮೀಪ ಈಚೆಗೆ ದರೋಡೆಕೋರರ ತಂಡವೊಂದು ಕೇರಳ ಮೂಲದ ವ್ಯಕ್ತಿಯೊಬ್ಬರ ಕಾರು ಅಡ್ಡಗಟ್ಡಿ ಅಪಹರಿಸಿ ಮೊಬೈಲ್ ಫೋನ್, ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ಗಳನ್ನು ಕಸಿದು ಪರಾರಿಯಾಗಿದ್ದಾರೆ.</p>.<p>ತಾಲ್ಲೂಕಿನ ಹಿರೀಕಾಟಿ ಗೇಟ್ ಸಮೀಪ ಮೇ 21ರ ಸಂಜೆ 7ರ ಸಮಯದಲ್ಲಿ ಕೇರಳದ ಸುಲ್ತಾನ್ ಬತ್ತೇರಿಯ ಅಬ್ರಿಕೊ ಟ್ರಾನ್ಸ್ ಪೋರ್ಟ್ ಕಂಪನಿಯ ಮ್ಯಾನೇಜರ್ ಆಸೀಫ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಕಾರಿನ ಸಮೇತ ಅವರನ್ನು ಅಪಹರಿಸಿದ್ದಾರೆ.</p>.<p>ನಂಜನಗೂಡು-ನರಸೀಪುರ ರಸ್ತೆಗೆ ಕಾರನ್ನು ಕೊಂಡೊಯ್ದು ಹಣಕ್ಕಾಗಿ ತಡಕಾಡಿದ್ದಾರೆ. ಹಣ ಸಿಗದ ಹಿನ್ನೆಲೆಯಲ್ಲಿ ಆಸೀಫ್ ಅವರ ಮೊಬೈಲ್, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳನ್ನು ಕಸಿದು ಮಾರ್ಗ ಮಧ್ಯೆಯೇ ಅವರನ್ನು ಕೆಳಗಿಳಿಸಿ ಪರಾರಿಯಾಗಿದ್ದಾರೆ. ಆಸೀಫ್ ಕಾರು ಆಲಂಬೂರು ಕಾಲುವೆ ಬಳಿ ಪತ್ತೆಯಾಗಿದೆ.</p>.<p>ಆಸೀಫ್ ಕೆಲಸದ ನಿಮಿತ್ತ ಮೈಸೂರಿನ ಬಂಡಿಪಾಳ್ಯದ ಕಚೇರಿ ಆಗಾಗ ಬಂದು ಹೋಗತ್ತಿದ್ದರು. ಇದನ್ನು ಗಮನಿಸಿದ್ದ ದುಷ್ಕರ್ಮಿಗಳು ಹಣ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ದರೋಡೆ ನಡೆದ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ,</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-37-570976357</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>