<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಪರಮಾಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು.</p>.<p>ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗ ಬೆಳ್ಳಿ ಪಲ್ಲಕ್ಕಿಯಲ್ಲಿ ಬಸವೇಶ್ವರ ಪುತ್ಥಳಿಯನ್ನು ಇಟ್ಟು ಪೂಜಿಸುವ ಮೂಲಕ ಬಸವ ಜಯಂತಿ ಮೆರವಣಿಗೆಗೆ ಗ್ರಾಮದ ಮುಖಂಡರು ಚಾಲನೆ ನೀಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ವೀರಗಾಸೆಯವರ ಕುಣಿತ ಮತ್ತು ಡಿ.ಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದರು. ಮೆರವಣಿಗೆ ವೇಳೆ ಮಹಿಳೆಯರು ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಸವ ಜಯಂತಿ ನಿಮಿತ್ತ ಗ್ರಾಮವನ್ನು ವಿದ್ಯುತ್ ಮತ್ತು ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ಗ್ರಾಮದ ಹಿರಿಯ ಮುಖಂಡರಾದ ಗೌಡಿಕೆ ಗುರುಮಲ್ಲಪ್ಪ, ಶಿವಪ್ಪ, ಎಂಪಿಸಿಎಸ್ ಅಧ್ಯಕ್ಷ ರೇವಣ್ಣ, ಶಿವನಂಜಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗಭೂಷಣ್, ಗುರುಶಾಂತಪ್ಪ, ಪರಶಿವಪ್ಪ, ಕುಮಾರ, ಮಧು ಕಬ್ಬಳ್ಳಿ ಬಸಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-37-1272116727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ಪರಮಾಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು.</p>.<p>ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗ ಬೆಳ್ಳಿ ಪಲ್ಲಕ್ಕಿಯಲ್ಲಿ ಬಸವೇಶ್ವರ ಪುತ್ಥಳಿಯನ್ನು ಇಟ್ಟು ಪೂಜಿಸುವ ಮೂಲಕ ಬಸವ ಜಯಂತಿ ಮೆರವಣಿಗೆಗೆ ಗ್ರಾಮದ ಮುಖಂಡರು ಚಾಲನೆ ನೀಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p>ವೀರಗಾಸೆಯವರ ಕುಣಿತ ಮತ್ತು ಡಿ.ಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದರು. ಮೆರವಣಿಗೆ ವೇಳೆ ಮಹಿಳೆಯರು ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಸವ ಜಯಂತಿ ನಿಮಿತ್ತ ಗ್ರಾಮವನ್ನು ವಿದ್ಯುತ್ ಮತ್ತು ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>ಗ್ರಾಮದ ಹಿರಿಯ ಮುಖಂಡರಾದ ಗೌಡಿಕೆ ಗುರುಮಲ್ಲಪ್ಪ, ಶಿವಪ್ಪ, ಎಂಪಿಸಿಎಸ್ ಅಧ್ಯಕ್ಷ ರೇವಣ್ಣ, ಶಿವನಂಜಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗಭೂಷಣ್, ಗುರುಶಾಂತಪ್ಪ, ಪರಶಿವಪ್ಪ, ಕುಮಾರ, ಮಧು ಕಬ್ಬಳ್ಳಿ ಬಸಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-37-1272116727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>