<p>ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಎರಡು ದಿನದ ಮಳೆಗೆ ಬಾಳೆ ಫಸಲಿಗೆ ಅಪಾರ ಹಾನಿಯಾಗಿದ್ದು, ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಬೊಮ್ಮಲಾಪುರ, ಶಿವಪುರ ಮತ್ತಿತ್ತರ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊನ್ನೂರು ಪ್ರಕಾಶ್, ರೈತನಿಗೆ ಈ ಬಾರಿ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ರೈತನಿಗೆ ಸಮರ್ಪಕವಾದ ಪರಿಹಾರ ನೀಡಬೇಕು. ಸೂಕ್ತ ಪರಿಹಾರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ರೈತರು ಹಾಗೂ ರೈತ ಸಂಘಟನೆ ಮುಖಂಡರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-37-782060098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಎರಡು ದಿನದ ಮಳೆಗೆ ಬಾಳೆ ಫಸಲಿಗೆ ಅಪಾರ ಹಾನಿಯಾಗಿದ್ದು, ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಬೊಮ್ಮಲಾಪುರ, ಶಿವಪುರ ಮತ್ತಿತ್ತರ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊನ್ನೂರು ಪ್ರಕಾಶ್, ರೈತನಿಗೆ ಈ ಬಾರಿ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ರೈತನಿಗೆ ಸಮರ್ಪಕವಾದ ಪರಿಹಾರ ನೀಡಬೇಕು. ಸೂಕ್ತ ಪರಿಹಾರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ರೈತರು ಹಾಗೂ ರೈತ ಸಂಘಟನೆ ಮುಖಂಡರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-37-782060098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>