ಬುಧವಾರ ಸಂಜೆ 6ಕ್ಕೆ ಆರಂಭವಾದ ಮಳೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಬಿರುಸಿನ ಮಳೆಯಾಯಿತು. ಕಾಡಂಚಿನ ಗ್ರಾಮಗಳಾದ ಹಂಗಳ, ಗೋಪಾಲಪುರ, ದೇವರಹಳ್ಳಿ, ಬೇರಾಂಬಾಡಿ , ಕಲ್ಲಿಗೌಡನಹಳ್ಳಿ ಮೊದಲಾದ ಗ್ರಾಮಗಳಿಗೆ ಉತ್ತಮ ಮಳೆಯಾಗಿದೆ. ಟೊಮೆಟೋ, ಈರುಳ್ಳಿ, ಅರಿಸಿನ ಮೊದಲಾದ ಬೆಳೆಗಾಗಿ ಭೂಮಿಯನ್ನು ಹದಮಾಡಿಕೊಂಡ ರೈತರು ಮಳೆ ಕಂಡು ಹರ್ಷಗೊಂಡಿದ್ದಾರೆ.