ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಕಾಡಂಚಿನಲ್ಲಿ ಮಳೆ: ಹರ್ಷಗೊಂಡ ರೈತರು

Published 1 ಮೇ 2024, 14:37 IST
Last Updated 1 ಮೇ 2024, 14:37 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ಮತ್ತು ಗೋಪಾಲಸ್ವಾಮಿ ಬೆಟ್ಟ, ಮದ್ದೂರು ವಲಯದ ವ್ಯಾಪ್ತಿಯಲ್ಲಿ ಅರ್ಧ ಗಂಟೆಗಳ ಕಾಲ ಜೋರು ಮಳೆ ಸುರಿಯಿತು. ಬಿಸಿಲಿನ ಝಳಕ್ಕೆ ಕಂಗೆಟ್ಟಿದ ಜನ ಮಳೆಯನ್ನು ಕಂಡು ಹರ್ಷಗೊಂಡರು.

ಬುಧವಾರ ಸಂಜೆ 6ಕ್ಕೆ ಆರಂಭವಾದ ಮಳೆ ಗುಡುಗು, ಸಿಡಿಲು, ಮಿಂಚಿನೊಂದಿಗೆ ಬಿರುಸಿನ ಮಳೆಯಾಯಿತು. ಕಾಡಂಚಿನ ಗ್ರಾಮಗಳಾದ ಹಂಗಳ, ಗೋಪಾಲಪುರ, ದೇವರಹಳ್ಳಿ, ಬೇರಾಂಬಾಡಿ , ಕಲ್ಲಿಗೌಡನಹಳ್ಳಿ ಮೊದಲಾದ ಗ್ರಾಮಗಳಿಗೆ ಉತ್ತಮ ಮಳೆಯಾಗಿದೆ. ಟೊಮೆಟೋ, ಈರುಳ್ಳಿ, ಅರಿಸಿನ ಮೊದಲಾದ ಬೆಳೆಗಾಗಿ ಭೂಮಿಯನ್ನು ಹದಮಾಡಿಕೊಂಡ ರೈತರು ಮಳೆ ಕಂಡು ಹರ್ಷಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT