<p><strong>ಗುಂಡ್ಲುಪೇಟೆ:</strong> ಪಟ್ಟಣದ ಸ್ಮಾರ್ಟ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸುಗ್ಗಿ ಹಬ್ಬ ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಸ್ಮಾರ್ಟ್ ಶಾಲೆ ಅಧ್ಯಕ್ಷ ಗೋಪಿಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಸುಗ್ಗಿ ಹಬ್ಬ ಆಚರಣೆ ಮಾಡುತ್ತಿರುವ ಖುಷಿಯ ವಿಚಾರವಾಗಿದ್ದು, ಎಳ್ಳು-ಬೆಲ್ಲ ತಿಂದು ಒಳ್ಳೆಯದು ಮಾತನಾಡಿ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರು ಸಂಕ್ರಾಂತಿ ಹಬ್ಬದ ಮಹತ್ವ ವಿವರಿಸಿದರು. ನಂತರ ವಿದ್ಯಾರ್ಥಿಗಳು ಹಬ್ಬದ ಕುರಿತು ಭಾಷಣ ಮಾಡಿದರು. ಕವನ ವಾಚನ ಹಾಗೂ ನಾಟಕ ಪ್ರದರ್ಶನ ನಡೆಯಿತು. ಜೊತೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಕನ್ನಡ ಸಂಸ್ಕೃತಿಯನ್ನು ಬಿಂಬಿಸಿದರು.</p>.<p>ಶಾಲಾ ಆವರಣದಲ್ಲಿ ಬಣ್ಣಬಣ್ಣದ ರಂಗೋಲಿ ಹಾಕಲಾಗಿತ್ತು. ಎಳ್ಳು-ಬೆಲ್ಲ ಹಂಚುವ ಕಾರ್ಯಕ್ರಮವೂ ನಡೆಯಿತು. ಕೆಲ ವಿದ್ಯಾರ್ಥಿಗಳು ಸಂಕ್ರಾಂತಿ ಹಬ್ಬಕ್ಕೆ ಸಂಬಂಧಿಸಿದ ಜನಪದ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು.</p>.<p>ಈ ಸಂದರ್ಭದಲ್ಲಿ ಶಾಲೆ ಅಧ್ಯಕ್ಷ ರಾಜೇಶ್, ಉಪಾಧ್ಯಕ್ಷ ಶ್ರೀಕಾಂತ, ಕಾರ್ಯದರ್ಶಿ ಶಿವಾನಂದ ಸ್ವಾಮಿ ಸೇರಿದಂತೆ ಶಿಕ್ಷಕರು, ಮಕ್ಕಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪಟ್ಟಣದ ಸ್ಮಾರ್ಟ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸುಗ್ಗಿ ಹಬ್ಬ ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಸ್ಮಾರ್ಟ್ ಶಾಲೆ ಅಧ್ಯಕ್ಷ ಗೋಪಿಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಸುಗ್ಗಿ ಹಬ್ಬ ಆಚರಣೆ ಮಾಡುತ್ತಿರುವ ಖುಷಿಯ ವಿಚಾರವಾಗಿದ್ದು, ಎಳ್ಳು-ಬೆಲ್ಲ ತಿಂದು ಒಳ್ಳೆಯದು ಮಾತನಾಡಿ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರು ಸಂಕ್ರಾಂತಿ ಹಬ್ಬದ ಮಹತ್ವ ವಿವರಿಸಿದರು. ನಂತರ ವಿದ್ಯಾರ್ಥಿಗಳು ಹಬ್ಬದ ಕುರಿತು ಭಾಷಣ ಮಾಡಿದರು. ಕವನ ವಾಚನ ಹಾಗೂ ನಾಟಕ ಪ್ರದರ್ಶನ ನಡೆಯಿತು. ಜೊತೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಕನ್ನಡ ಸಂಸ್ಕೃತಿಯನ್ನು ಬಿಂಬಿಸಿದರು.</p>.<p>ಶಾಲಾ ಆವರಣದಲ್ಲಿ ಬಣ್ಣಬಣ್ಣದ ರಂಗೋಲಿ ಹಾಕಲಾಗಿತ್ತು. ಎಳ್ಳು-ಬೆಲ್ಲ ಹಂಚುವ ಕಾರ್ಯಕ್ರಮವೂ ನಡೆಯಿತು. ಕೆಲ ವಿದ್ಯಾರ್ಥಿಗಳು ಸಂಕ್ರಾಂತಿ ಹಬ್ಬಕ್ಕೆ ಸಂಬಂಧಿಸಿದ ಜನಪದ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು.</p>.<p>ಈ ಸಂದರ್ಭದಲ್ಲಿ ಶಾಲೆ ಅಧ್ಯಕ್ಷ ರಾಜೇಶ್, ಉಪಾಧ್ಯಕ್ಷ ಶ್ರೀಕಾಂತ, ಕಾರ್ಯದರ್ಶಿ ಶಿವಾನಂದ ಸ್ವಾಮಿ ಸೇರಿದಂತೆ ಶಿಕ್ಷಕರು, ಮಕ್ಕಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>