<p>ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿಯಲ್ಲಿ ಕುಂಬಾರ ಸಮುದಾಯದಿಂದ ರಾಮೋತ್ಸವ ಆಚರಿಸಲಾಯಿತು.</p>.<p>ರಾಮೋತ್ಸವದ ಹಿನ್ನೆಲೆಯಲ್ಲಿ ಸಮುದಾಯದ ರಾಮಮಂದಿರವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶನಿವಾರ ಬೆಳಿಗ್ಗೆಯಿಂದಲೇ ರಾಮಮಂದಿರದಲ್ಲಿ ವಿಶೇಷ ಪೂಜೆ ಜರುಗಿತು.</p>.<p>ನಂತರ ಗ್ರಾಮದ ಲಕ್ಷ್ಮೀ ವರದರಾಜಸ್ವಾಮಿ ದೇವಾಲಯದಲ್ಲಿ ಶ್ರೀರಾಮ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು. ದೇವಾಲಯದ ಹೊರಗೆ ಸಿದ್ಧಗೊಳಿಸಿದ್ದ ಅಲಂಕೃತ ಅಡ್ಡಪಲ್ಲಕ್ಕಿಯಲ್ಲಿ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮದೇವರ ಮೂರ್ತಿಯ ಮೆರವಣಿಗೆ ನಡೆಯಿತು. ಮಂಗಳವಾದ್ಯ ಇತರೆ ಕಲಾತಂಡಗಳು ಮೆರವಣಿಗೆಗೆ ರಂಗು ತಂದವು. ಮೂಲಸ್ಥಾನದಲ್ಲಿ ಮೆರವಣಿಗೆ ಕೊನೆಗೊಂಡಿತು. ನಂತರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.</p>.<p>ಟಿ.ಎಸ್.ಸಂಪತ್ತು, ಶಿವಕುಮಾರ್, ಮಹದೇವಶೆಟ್ಟಿ, ಸಿದ್ದಶೆಟ್ಟಿ, ಸೋಮ ಶೇಖರ್, ರಾಮು, ಮಂಜು ನಾಥ್ ಬಾಚಹಳ್ಳಿ, ಮಾದಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-37-1633788857</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿಯಲ್ಲಿ ಕುಂಬಾರ ಸಮುದಾಯದಿಂದ ರಾಮೋತ್ಸವ ಆಚರಿಸಲಾಯಿತು.</p>.<p>ರಾಮೋತ್ಸವದ ಹಿನ್ನೆಲೆಯಲ್ಲಿ ಸಮುದಾಯದ ರಾಮಮಂದಿರವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶನಿವಾರ ಬೆಳಿಗ್ಗೆಯಿಂದಲೇ ರಾಮಮಂದಿರದಲ್ಲಿ ವಿಶೇಷ ಪೂಜೆ ಜರುಗಿತು.</p>.<p>ನಂತರ ಗ್ರಾಮದ ಲಕ್ಷ್ಮೀ ವರದರಾಜಸ್ವಾಮಿ ದೇವಾಲಯದಲ್ಲಿ ಶ್ರೀರಾಮ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು. ದೇವಾಲಯದ ಹೊರಗೆ ಸಿದ್ಧಗೊಳಿಸಿದ್ದ ಅಲಂಕೃತ ಅಡ್ಡಪಲ್ಲಕ್ಕಿಯಲ್ಲಿ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮದೇವರ ಮೂರ್ತಿಯ ಮೆರವಣಿಗೆ ನಡೆಯಿತು. ಮಂಗಳವಾದ್ಯ ಇತರೆ ಕಲಾತಂಡಗಳು ಮೆರವಣಿಗೆಗೆ ರಂಗು ತಂದವು. ಮೂಲಸ್ಥಾನದಲ್ಲಿ ಮೆರವಣಿಗೆ ಕೊನೆಗೊಂಡಿತು. ನಂತರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.</p>.<p>ಟಿ.ಎಸ್.ಸಂಪತ್ತು, ಶಿವಕುಮಾರ್, ಮಹದೇವಶೆಟ್ಟಿ, ಸಿದ್ದಶೆಟ್ಟಿ, ಸೋಮ ಶೇಖರ್, ರಾಮು, ಮಂಜು ನಾಥ್ ಬಾಚಹಳ್ಳಿ, ಮಾದಪ್ಪ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-37-1633788857</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>