<p>ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ ಶೆಡ್ ಧ್ವಂಸಗೊಳಿಸಿದ್ದು ಅದರಲ್ಲಿದ್ದ ಕ್ವಿಂಟಲ್ ಗಟ್ಟಲೇ ಟೊಮೆಟೊವನ್ನು ತಿಂದು-ತುಳಿದು ನಾಶಪಡಿಸಿವೆ.</p>.<p>ಗ್ರಾಮದ ಮಹದೇವಮ್ಮ ಎಂಬುವವರ ಜಮೀನಿನಲ್ಲಿ ಒಂದೂವರೆ ಎಕರೆಯಲ್ಲಿ ಬೆಳೆದು ಕೊಯ್ದು ಪೇರಿಸಿಟ್ಟಿದ್ದ 60ಕ್ಕೂ ಅಧಿಕ ಬಾಕ್ಸ್ ಟೊಮೆಟೊವನ್ನು ತಿಂದು , ತುಳಿದು ನಾಶ ಪಡಿಸಿವೆ. ಮಾಲೀಕರಿಗೆ ಲಕ್ಷಾಂತರ ರೂಪಾಯಿ ಮೊತ್ತದ ನಷ್ಟ ಉಂಟಾಗಿದೆ. ಶೆಡ್ ಧ್ವಂಸ ವಾಗಿರುವ ಜೊತೆಗೆ ಕೃಷಿ ಪರಿಕರಗಳು ಕೂಡ ಹಾನಿಯಾಗಿದೆ.</p>.<p>ನೂರಾರು ಕೆ.ಜಿ. ಟೊಮೆಟೊ, ಶೆಡ್, ಕೃಷಿ ಸಲಕರಣೆಗಳನ್ನು ಕಾಡಾನೆ ನಾಶ ಪಡಿಸಿರುವುದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬಂಡೀಪುರ ಅರಣ್ಯಾಧಿಕಾರಿಗಳು ಶೀಘ್ರ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-37-1383362160</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ ಶೆಡ್ ಧ್ವಂಸಗೊಳಿಸಿದ್ದು ಅದರಲ್ಲಿದ್ದ ಕ್ವಿಂಟಲ್ ಗಟ್ಟಲೇ ಟೊಮೆಟೊವನ್ನು ತಿಂದು-ತುಳಿದು ನಾಶಪಡಿಸಿವೆ.</p>.<p>ಗ್ರಾಮದ ಮಹದೇವಮ್ಮ ಎಂಬುವವರ ಜಮೀನಿನಲ್ಲಿ ಒಂದೂವರೆ ಎಕರೆಯಲ್ಲಿ ಬೆಳೆದು ಕೊಯ್ದು ಪೇರಿಸಿಟ್ಟಿದ್ದ 60ಕ್ಕೂ ಅಧಿಕ ಬಾಕ್ಸ್ ಟೊಮೆಟೊವನ್ನು ತಿಂದು , ತುಳಿದು ನಾಶ ಪಡಿಸಿವೆ. ಮಾಲೀಕರಿಗೆ ಲಕ್ಷಾಂತರ ರೂಪಾಯಿ ಮೊತ್ತದ ನಷ್ಟ ಉಂಟಾಗಿದೆ. ಶೆಡ್ ಧ್ವಂಸ ವಾಗಿರುವ ಜೊತೆಗೆ ಕೃಷಿ ಪರಿಕರಗಳು ಕೂಡ ಹಾನಿಯಾಗಿದೆ.</p>.<p>ನೂರಾರು ಕೆ.ಜಿ. ಟೊಮೆಟೊ, ಶೆಡ್, ಕೃಷಿ ಸಲಕರಣೆಗಳನ್ನು ಕಾಡಾನೆ ನಾಶ ಪಡಿಸಿರುವುದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಬಂಡೀಪುರ ಅರಣ್ಯಾಧಿಕಾರಿಗಳು ಶೀಘ್ರ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-37-1383362160</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>