<p> <strong>ಗುಂಡ್ಲುಪೇಟೆ:</strong> ಮನುಷ್ಯನಿಗೆ ಹುಟ್ಟಿನಿಂದ ಸಾಯುವವರೆಗೂ ಮಾನವ ಹಕ್ಕುಗಳು ಇರುತ್ತದೆ ಎಂದು ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಆರ್.ಬಿ.ಗಿರೀಶ್ ಹೇಳಿದರು.</p>.<p>ಪಟ್ಟಣದ ಜೆ.ಎಸ್.ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಜೆ.ಎಸ್.ಎಸ್ ಕಾಲೇಜು ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹುಟ್ಟಿನಿಂದಲೇ ಆರೋಗ್ಯ ಮತ್ತು ಶಿಕ್ಷಣ ಮುಂತಾದಹಲವಾರು ಹಕ್ಕುಗಳು ಇರುತ್ತವೆ. ಹಾಗೆಯೇ ಮರಣಾನಂತರ ಗೌರವಯುತ ಶವಸಂಸ್ಕಾರವೂ ಮಾನವ ಹಕ್ಕುಗಳ ವ್ಯಾಪ್ತಿಗೆ ಬರುತ್ತದೆ. ಹಕ್ಕುಗಳ ಉಲ್ಲಂಘನೆ ಯಾಗದಂತೆ ಆಯೋಗ ಕಾರ್ಯನಿರ್ವಹಿಸುತ್ತದೆ ಎಂದರು.</p>.<p>‘ಹಿಂದೆಲ್ಲ ದೂರಿನಲ್ಲಿ ಪೊಲೀಸರು ಆರೋಪಿತನನ್ನು ಬಂಧಿಸುತ್ತಿದ್ದರು. ಆದರೆ ಈಗ ಆತನಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿ ತನಿಖೆಗೆ ಸಹಕರಿಸದೆ ಇದ್ದರೆ ಬಂಧಿಸಬಹುದು. ಹಕ್ಕುಗಳ ಉಲ್ಲಂಘನೆಯಾದರೆ ಆಯೋಗ ರಕ್ಷಣೆ ನೀಡುತ್ತದೆ ಎಂದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ರೇವಣ್ಣ ಮಾತನಾಡಿದರು. ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಜವರಾಜು, ವಕೀಲ ಅರವಿಂದ್ ಕುಮಾರ್, ಪ್ರಾಂಶುಪಾಲೆ ಮಹದೇವಮ್ಮ, ಪ್ರಾಂಶುಪಾಲ ಮಲ್ಲಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಗುಂಡ್ಲುಪೇಟೆ:</strong> ಮನುಷ್ಯನಿಗೆ ಹುಟ್ಟಿನಿಂದ ಸಾಯುವವರೆಗೂ ಮಾನವ ಹಕ್ಕುಗಳು ಇರುತ್ತದೆ ಎಂದು ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಆರ್.ಬಿ.ಗಿರೀಶ್ ಹೇಳಿದರು.</p>.<p>ಪಟ್ಟಣದ ಜೆ.ಎಸ್.ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಜೆ.ಎಸ್.ಎಸ್ ಕಾಲೇಜು ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹುಟ್ಟಿನಿಂದಲೇ ಆರೋಗ್ಯ ಮತ್ತು ಶಿಕ್ಷಣ ಮುಂತಾದಹಲವಾರು ಹಕ್ಕುಗಳು ಇರುತ್ತವೆ. ಹಾಗೆಯೇ ಮರಣಾನಂತರ ಗೌರವಯುತ ಶವಸಂಸ್ಕಾರವೂ ಮಾನವ ಹಕ್ಕುಗಳ ವ್ಯಾಪ್ತಿಗೆ ಬರುತ್ತದೆ. ಹಕ್ಕುಗಳ ಉಲ್ಲಂಘನೆ ಯಾಗದಂತೆ ಆಯೋಗ ಕಾರ್ಯನಿರ್ವಹಿಸುತ್ತದೆ ಎಂದರು.</p>.<p>‘ಹಿಂದೆಲ್ಲ ದೂರಿನಲ್ಲಿ ಪೊಲೀಸರು ಆರೋಪಿತನನ್ನು ಬಂಧಿಸುತ್ತಿದ್ದರು. ಆದರೆ ಈಗ ಆತನಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿ ತನಿಖೆಗೆ ಸಹಕರಿಸದೆ ಇದ್ದರೆ ಬಂಧಿಸಬಹುದು. ಹಕ್ಕುಗಳ ಉಲ್ಲಂಘನೆಯಾದರೆ ಆಯೋಗ ರಕ್ಷಣೆ ನೀಡುತ್ತದೆ ಎಂದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ರೇವಣ್ಣ ಮಾತನಾಡಿದರು. ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಜವರಾಜು, ವಕೀಲ ಅರವಿಂದ್ ಕುಮಾರ್, ಪ್ರಾಂಶುಪಾಲೆ ಮಹದೇವಮ್ಮ, ಪ್ರಾಂಶುಪಾಲ ಮಲ್ಲಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>