ಆಂದ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿಗಳಿಗೆ ಅರಣ್ಯ ಇಲಾಖೆ ₹25 ಸಾವಿರ ದಂಡ ವಿಧಿಸಿದೆ. ಬಂಡೀಪುರಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಫೆಬ್ರುವರಿ 1ರಂದು ಇವರು ಸಂಚರಿಸುತ್ತಿದ್ದಾಗ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದ್ದರು. ಕೆಳಗಿಳಿದಿದ್ದ ಇಬ್ಬರನ್ನು ಏಕಾಏಕಿ ಕಾಡಾನೆ ಅಟ್ಟಾಡಿಸಿತ್ತು. ಇಬ್ಬರನ್ನು ಹೆಣ್ಣಾನೆ ಅಟ್ಟಿಸಿದಾಗ ಒಬ್ಬರು ಕೆಳಗೆ ಬೀಳುತ್ತಾರೆ. ಅವರನ್ನು ಕಾಲಿನಲ್ಲಿ ತುಳಿಯಲು ಆನೆ, ಯತ್ನಿಸುತ್ತದೆ. ಅದೃಷ್ಟವಶಾತ್ ಅದರ ಕಾಲು ಅವರ ದೇಹಕ್ಕೆ ತಾಗದೆ ಪಾರಾಗಿದ್ದರು.