ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರಿಗೆ ₹25 ಸಾವಿರ ದಂಡ

Published 21 ಫೆಬ್ರುವರಿ 2024, 15:23 IST
Last Updated 21 ಫೆಬ್ರುವರಿ 2024, 15:23 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮ ಮೀರಿ ಕಾರು ನಿಲ್ಲಿಸಿ ಕೆಳಗಿಳಿದು ಆನೆ ದಾಳಿಗೆ ಒಳಗಾಗಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ವಿಚಾರಣೆ ನಡೆಸಿ ₹25 ಸಾವಿರ ದಂಡ ವಿಧಿಸಿದೆ.

ಆಂದ್ರಪ್ರದೇಶದ ವಿಶಾಖಪಟ್ಟಣಂ ನಿವಾಸಿಗಳಿಗೆ ಅರಣ್ಯ ಇಲಾಖೆ ₹25 ಸಾವಿರ ದಂಡ ವಿಧಿಸಿದೆ. ಬಂಡೀಪುರ‌ಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಫೆಬ್ರುವರಿ 1ರಂದು ಇವರು ಸಂಚರಿಸುತ್ತಿದ್ದಾಗ ಮೂತ್ರ ವಿಸರ್ಜನೆಗೆ  ಕಾರು ನಿಲ್ಲಿಸಿದ್ದರು. ಕೆಳಗಿಳಿದಿದ್ದ ಇಬ್ಬರನ್ನು ಏಕಾಏಕಿ ಕಾಡಾನೆ ಅಟ್ಟಾಡಿಸಿತ್ತು. ಇಬ್ಬರನ್ನು ಹೆಣ್ಣಾನೆ ಅಟ್ಟಿಸಿದಾಗ ಒಬ್ಬರು ಕೆಳಗೆ ಬೀಳುತ್ತಾರೆ. ಅವರನ್ನು ಕಾಲಿನಲ್ಲಿ ತುಳಿಯಲು ಆನೆ, ಯತ್ನಿಸುತ್ತದೆ. ಅದೃಷ್ಟವಶಾತ್‌ ಅದರ ಕಾಲು ಅವರ ದೇಹಕ್ಕೆ ತಾಗದೆ ಪಾರಾಗಿದ್ದರು.

ಹೆದ್ದಾರಿಯಲ್ಲಿ ಸಂಚರಿಸುವಾಗ ಆನೆ ಸೇರಿದಂತೆ ಇತರ ಪ್ರಾಣಿಗಳು ರಸ್ತೆ ಬದಿಯಲ್ಲಿ ಇರುತ್ತವೆ. ವಾಹನಗಳನ್ನು ನಿಲ್ಲಿಸಬಾರದು ಎಂಬ ಸೂಚನೆ ಇದ್ದರೂ, ನಿಯಮ ಮೀರಿ ವಾಹನಗಳ ನಿಲ್ಲಿಸಿ ಪ್ರಾಣಿ ಪೋಟೊ ತೆಗೆಯುತ್ತಾರೆ. ಈ ಹಿಂದೆಯೂ ಈ ಹೆದ್ದಾರಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ

ಮಾಧ್ಯಮದಲ್ಲಿ ವರದಿ ಆಧರಿಸಿ ಬಂಡೀಪುರ ಎ.ಸಿ.ಎಫ್. ಹಾಗೂ ಮೂಲೆಹೊಳೆ ಆರ್.ಎಫ್.ಒ. ವಿಚಾರಣೆ ನಡೆಸಿ ಎಂದು ಸಿ.ಎಫ್ ರಮೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT