ಪಕ್ಷದ ಮುಖಂಡರು ಹಾಗೂ ರೈತ ಸಂಘದ ಪ್ರತಿನಿಧಿಗಳೊಂದಿಗೆ ಮಂಗಳವಾರ ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ರೈತ ಸಂಘ ಮತ್ತು ಎಎಪಿಯ ತತ್ವ, ಸಿದ್ಧಾಂತ, ಉದ್ದೇಶಗಳು ಒಂದೇ ಆಗಿದೆ. ಅರವಿಂದ ಕೇಜ್ರಿವಾಲ್ ಅವರ ದೆಹಲಿ ಸರ್ಕಾರದ ಮಾದರಿಯನ್ನು ಗಮನಿಸಿ, ರೈತರು, ಬಡವರ ಪರವಾಗಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಎಎಪಿ ಸೇರಿದ್ದೇನೆ. ಮುಖಂಡರು ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ' ಎಂದರು.