<p><strong>ಹನೂರು</strong>: ತಾಲ್ಲೂಕಿನ ಹಾಲೇರಿ ಕೆರೆಯ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಭಾನುವಾರ ಚಾಲನೆ ನೀಡಿದರು.</p>.<p> ‘ಹಾಲೇರಿ ಕೆರೆ ಅಭಿವೃದ್ಧಿಪಡಿಸುವುದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ನೀರಾವರಿ ಅನುಕೂಲವಾಗಲಿದೆ. ಮಲೆ ಮಹದೇಶ್ವರ ವನ್ಯಧಾಮದ ರಾಮಾಪುರ ವಲಯಕ್ಕೆ ಸೇರಿರುವ ಅರಣ್ಯ ಪ್ರದೇಶದ ಮಾರ್ಟಳ್ಳಿಯ ಈ ಕೆರೆಗೆ ಅರಣ್ಯ ಇಲಾಖೆಯ ಅನುದಾನದಲ್ಲಿ ₹30 ಲಕ್ಷ ವೆಚ್ಚದಲ್ಲಿ ಹೂಳು ತೆಗೆಯಲು ಜೆಸಿಬಿ ಮೂಲಕ ಚಾಲನೆ ನೀಡಲಾಗುತ್ತಿದೆ ಎಂದರು.</p>.<p> ಮಾರ್ಟಳ್ಳಿ ತಾಂಡಾಮೇಡು, ಕೋಟೆ ಪೊದೆ, ಮೇಟುತ್ತೇರು, ಸುಳ್ಳಾಡಿ, ಸಂದನ ಪಾಳ್ಯ ಹಾಗೂ ಸುತ್ತಲಿನ ಜನ ಜಾನುವಾರುಗಳಿಗೆ ರೈತರಿಗೆ ಹಾಲೇರಿ ಕೆರೆ ನೀರು ಬಳಕೆಯಾಗಲಿದೆ. ಅಂತರ್ಜಾಲ ಮಟ್ಟವು ಹೆಚ್ಚಾಗಲಿದೆ ಎಂದರು.</p>.<p> ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಮಲಿಂಗ, ಸದಸ್ಯರಾದ ಸೆಲ್ವಂ, ಗೋವಿಂದರಾಜು, ಮಾಜಿ ಸದಸ್ಯರಾದ ಹರಿ, ಲೋಕೇಶ್, ಮಾಜಿ ಸೈನಿಕ ಜೋಸೆಫ್, ಸೀನಪ್ಪ, ತಂಗವೇಲು, ಸೆಂಥಿಲ್, ಸಮನ್ಸ್, ಬೋಸ್ಕೊ, ಬಾಲಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ತಾಲ್ಲೂಕಿನ ಹಾಲೇರಿ ಕೆರೆಯ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಭಾನುವಾರ ಚಾಲನೆ ನೀಡಿದರು.</p>.<p> ‘ಹಾಲೇರಿ ಕೆರೆ ಅಭಿವೃದ್ಧಿಪಡಿಸುವುದರಿಂದ ಜನರಿಗೆ ಹಾಗೂ ಜಾನುವಾರುಗಳಿಗೆ ನೀರಾವರಿ ಅನುಕೂಲವಾಗಲಿದೆ. ಮಲೆ ಮಹದೇಶ್ವರ ವನ್ಯಧಾಮದ ರಾಮಾಪುರ ವಲಯಕ್ಕೆ ಸೇರಿರುವ ಅರಣ್ಯ ಪ್ರದೇಶದ ಮಾರ್ಟಳ್ಳಿಯ ಈ ಕೆರೆಗೆ ಅರಣ್ಯ ಇಲಾಖೆಯ ಅನುದಾನದಲ್ಲಿ ₹30 ಲಕ್ಷ ವೆಚ್ಚದಲ್ಲಿ ಹೂಳು ತೆಗೆಯಲು ಜೆಸಿಬಿ ಮೂಲಕ ಚಾಲನೆ ನೀಡಲಾಗುತ್ತಿದೆ ಎಂದರು.</p>.<p> ಮಾರ್ಟಳ್ಳಿ ತಾಂಡಾಮೇಡು, ಕೋಟೆ ಪೊದೆ, ಮೇಟುತ್ತೇರು, ಸುಳ್ಳಾಡಿ, ಸಂದನ ಪಾಳ್ಯ ಹಾಗೂ ಸುತ್ತಲಿನ ಜನ ಜಾನುವಾರುಗಳಿಗೆ ರೈತರಿಗೆ ಹಾಲೇರಿ ಕೆರೆ ನೀರು ಬಳಕೆಯಾಗಲಿದೆ. ಅಂತರ್ಜಾಲ ಮಟ್ಟವು ಹೆಚ್ಚಾಗಲಿದೆ ಎಂದರು.</p>.<p> ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಮಲಿಂಗ, ಸದಸ್ಯರಾದ ಸೆಲ್ವಂ, ಗೋವಿಂದರಾಜು, ಮಾಜಿ ಸದಸ್ಯರಾದ ಹರಿ, ಲೋಕೇಶ್, ಮಾಜಿ ಸೈನಿಕ ಜೋಸೆಫ್, ಸೀನಪ್ಪ, ತಂಗವೇಲು, ಸೆಂಥಿಲ್, ಸಮನ್ಸ್, ಬೋಸ್ಕೊ, ಬಾಲಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>