<p>ಮಹದೇಶ್ವರ ಬೆಟ್ಟ: ಇಲ್ಲಿನ ಪವಾಡ ಪುರುಷ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ದೀಪಾವಳಿಯ ಅಮಾವಾಸ್ಯೆ ದಿನವಾದ ಗುರುವಾರ ಹಾಲರವಿ ಉತ್ಸವವು ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.</p>.<p>ಬೆಟ್ಟದಿಂದ ಏಳೆಂಟು ಕಿ.ಮೀ ದೂರದಲ್ಲಿರುವ ಹಾಲಹಳ್ಳದಿಂದ ಬೇಡಗಂಪಣ ಸಮುದಾಯದ 101 ಹೆಣ್ಣು ಮಕ್ಕಳು ಕಲಶಗಳಲ್ಲಿ ಹೊತ್ತು ತಂದ ನೀರನ್ನು ಮಲೆ ಮಹದೇಶ್ವರಸ್ವಾಮಿಗೆ ಅಭಿಷೇಕ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಸಾಲೂರು ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ಸವ ನೆರವೇರಿತು.</p>.<p>ದೀಪಾವಳಿ ಜಾತ್ರೆ ಸಮಯದಲ್ಲಿ ನಡೆಯುವ ಈ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಾರೆ. ಕೋವಿಡ್ ಕಾರಣದಿಂದ ಭಕ್ತರ ಪ್ರವೇಶ ನಿರ್ಬಂಧಿಸಿರುವುದರಿಂದ ಸ್ಥಳೀಯರು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ, ಅಧಿಕಾರಿಗಳು ಹಾಗೂ ಆಹ್ವಾನಿತ ಭಕ್ತರು ಇದ್ದರು.</p>.<p class="Subhead">ಆಚರಣೆ ವಿಶೇಷ:ಸ್ಥಳೀಯಬೇಡಗಂಪಣಸಮುದಾಯದವರು ಮಹದೇಶ್ವರನಿಗೆ ನಡೆಸುವ ಉತ್ಸವ ಇದು. ಸಮುದಾಯದ 10ರಿಂದ 12 ವರ್ಷದ 101 ಹೆಣ್ಣು ಮಕ್ಕಳು ಇದರಲ್ಲಿ ಭಾಗಿಯಾಗುವುದು ವಿಶೇಷ.</p>.<p>ಉತ್ಸವದಲ್ಲಿ ಪಾಲ್ಗೊಳ್ಳುವ ಹೆಣ್ಣು ಮಕ್ಕಳು, ಉಪವಾಸವಿದ್ದು, ಮುಂಜಾವು ನಾಲ್ಕು ಗಂಟೆಗೇ ಬೆಟ್ಟದಿಂದ ಏಳೆಂಟು ಕಿ.ಮೀ ದೂರದಲ್ಲಿರುವ ಹಾಲಹಳ್ಳಕ್ಕೆ ಪೋಷಕರ ಜೊತೆಗೆ ಹೋಗುತ್ತಾರೆ. ಅಲ್ಲಿ ಶುಚೀರ್ಭೂತಗೊಂಡು, ಹಿತ್ತಾಳೆಯ ಕಳಶದಲ್ಲಿ ನೀರನ್ನು ತುಂಬಿಕೊಳ್ಳುತ್ತಾರೆ. ನಂತರ ಕಲಶಗಳಿಗೆ ಪೂಜೆ ಮಾಡಲಾಗುತ್ತದೆ. ಆ ಕಳಶಗಳನ್ನು ಹೊತ್ತುಕೊಳ್ಳುವ ಬಾಲೆಯರು, ಕಾಲ್ನಡಿಗೆಯಲ್ಲೇ ಸಾಗಿ ಬಂದು ಬೆಟ್ಟದ ಪ್ರವೇಶ ದ್ವಾರ ತಲುಪುತ್ತಾರೆ.</p>.<p>ತಂಬಡಿಗೇರಿಯ ಮುಖ್ಯದ್ವಾರದಲ್ಲಿ ಕತ್ತಿಪವಾಡವನ್ನು ನೆರವೇರಿಸಿ ನಂತರ ಮಂಗಳವಾಧ್ಯಗಳ ಸಮೇತವಾಗಿ ಮೆರವಣಿಗೆಯ ಮೂಲಕ ಕಲಶಗಳನ್ನು ದೇವಾಲಯಕ್ಕೆ ತಂದು ಒಂದು ಪ್ರದಕ್ಷೀನೆ ಮಾಡಿದ ನಂತರ ಒಳ ಆವರಣದಲ್ಲಿ ಕಳಶಗಳನ್ನು ಇರಿಸಲಾಗುತ್ತದೆ. ಅಲ್ಲಿ ಅವುಗಳಿಗೆ ಪೂಜೆ ಸಲ್ಲಿಸಿದ ನಂತರ, ಆ ಜಲದಿಂದ ಮಹದೇಶ್ವರ ಸ್ವಾಮಿಗೆ ಅಭಿಷೇಕ ನಡೆಸಲಾಗುತ್ತದೆ.</p>.<p>ಹಾಲರವಿಉತ್ಸವಜರಗುವುದಕ್ಕೂ ನಡೆಯುವ ಕತ್ತಿ ಪವಾಡ ಆಚರಣೆಯ ಹಿಂದೆ ಒಂದು ಉದ್ದೇಶ ಇದೆ. ಹರಕೆ ಹೊತ್ತ ಭಕ್ತರೊಬ್ಬರು ಕತ್ತಿಯ ಅಲಗಿನ ಮೇಲೆ ಮಲಗುತ್ತಾರೆ. ಅವರ ಮೇಲೆಬೇಡಗಂಪಣಅರ್ಚಕರು ನಡೆದುಕೊಂಡು ಹೋಗುತ್ತಾರೆ.</p>.<p>‘ಕಳಶಗಳಲ್ಲಿ ನೀರು ತರುವ ಮಾರ್ಗ ಮಧ್ಯದಲ್ಲಿ ಹೆಣ್ಣುಮಕ್ಕಳು ಅಥವಾ ನೀರಿನ ಮೇಲೆ ಯಾವುದಾದರೂ ನಕಾರಾತ್ಮಕ ಶಕ್ತಿಗಳ ಕಣ್ಣುಬಿದ್ದಿದ್ದರೂ ಕತ್ತಿಪವಾಡಮಾಡುವ ಸ್ಥಳದಲ್ಲಿಇವುನಿಲ್ಲುವುದಿಲ್ಲ. ಪವಾಡಮಾಡಿದಸ್ಥಳದಿಂದ ಹಾಲರವೆ ಗಂಗೆ ಶುದ್ಧಳಾಗುತ್ತಾಳೆ’ ಎಂಬ ನಂಬಿಕೆ ಸ್ಥಳೀಯರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹದೇಶ್ವರ ಬೆಟ್ಟ: ಇಲ್ಲಿನ ಪವಾಡ ಪುರುಷ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ದೀಪಾವಳಿಯ ಅಮಾವಾಸ್ಯೆ ದಿನವಾದ ಗುರುವಾರ ಹಾಲರವಿ ಉತ್ಸವವು ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.</p>.<p>ಬೆಟ್ಟದಿಂದ ಏಳೆಂಟು ಕಿ.ಮೀ ದೂರದಲ್ಲಿರುವ ಹಾಲಹಳ್ಳದಿಂದ ಬೇಡಗಂಪಣ ಸಮುದಾಯದ 101 ಹೆಣ್ಣು ಮಕ್ಕಳು ಕಲಶಗಳಲ್ಲಿ ಹೊತ್ತು ತಂದ ನೀರನ್ನು ಮಲೆ ಮಹದೇಶ್ವರಸ್ವಾಮಿಗೆ ಅಭಿಷೇಕ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಸಾಲೂರು ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ಸವ ನೆರವೇರಿತು.</p>.<p>ದೀಪಾವಳಿ ಜಾತ್ರೆ ಸಮಯದಲ್ಲಿ ನಡೆಯುವ ಈ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಾರೆ. ಕೋವಿಡ್ ಕಾರಣದಿಂದ ಭಕ್ತರ ಪ್ರವೇಶ ನಿರ್ಬಂಧಿಸಿರುವುದರಿಂದ ಸ್ಥಳೀಯರು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ, ಅಧಿಕಾರಿಗಳು ಹಾಗೂ ಆಹ್ವಾನಿತ ಭಕ್ತರು ಇದ್ದರು.</p>.<p class="Subhead">ಆಚರಣೆ ವಿಶೇಷ:ಸ್ಥಳೀಯಬೇಡಗಂಪಣಸಮುದಾಯದವರು ಮಹದೇಶ್ವರನಿಗೆ ನಡೆಸುವ ಉತ್ಸವ ಇದು. ಸಮುದಾಯದ 10ರಿಂದ 12 ವರ್ಷದ 101 ಹೆಣ್ಣು ಮಕ್ಕಳು ಇದರಲ್ಲಿ ಭಾಗಿಯಾಗುವುದು ವಿಶೇಷ.</p>.<p>ಉತ್ಸವದಲ್ಲಿ ಪಾಲ್ಗೊಳ್ಳುವ ಹೆಣ್ಣು ಮಕ್ಕಳು, ಉಪವಾಸವಿದ್ದು, ಮುಂಜಾವು ನಾಲ್ಕು ಗಂಟೆಗೇ ಬೆಟ್ಟದಿಂದ ಏಳೆಂಟು ಕಿ.ಮೀ ದೂರದಲ್ಲಿರುವ ಹಾಲಹಳ್ಳಕ್ಕೆ ಪೋಷಕರ ಜೊತೆಗೆ ಹೋಗುತ್ತಾರೆ. ಅಲ್ಲಿ ಶುಚೀರ್ಭೂತಗೊಂಡು, ಹಿತ್ತಾಳೆಯ ಕಳಶದಲ್ಲಿ ನೀರನ್ನು ತುಂಬಿಕೊಳ್ಳುತ್ತಾರೆ. ನಂತರ ಕಲಶಗಳಿಗೆ ಪೂಜೆ ಮಾಡಲಾಗುತ್ತದೆ. ಆ ಕಳಶಗಳನ್ನು ಹೊತ್ತುಕೊಳ್ಳುವ ಬಾಲೆಯರು, ಕಾಲ್ನಡಿಗೆಯಲ್ಲೇ ಸಾಗಿ ಬಂದು ಬೆಟ್ಟದ ಪ್ರವೇಶ ದ್ವಾರ ತಲುಪುತ್ತಾರೆ.</p>.<p>ತಂಬಡಿಗೇರಿಯ ಮುಖ್ಯದ್ವಾರದಲ್ಲಿ ಕತ್ತಿಪವಾಡವನ್ನು ನೆರವೇರಿಸಿ ನಂತರ ಮಂಗಳವಾಧ್ಯಗಳ ಸಮೇತವಾಗಿ ಮೆರವಣಿಗೆಯ ಮೂಲಕ ಕಲಶಗಳನ್ನು ದೇವಾಲಯಕ್ಕೆ ತಂದು ಒಂದು ಪ್ರದಕ್ಷೀನೆ ಮಾಡಿದ ನಂತರ ಒಳ ಆವರಣದಲ್ಲಿ ಕಳಶಗಳನ್ನು ಇರಿಸಲಾಗುತ್ತದೆ. ಅಲ್ಲಿ ಅವುಗಳಿಗೆ ಪೂಜೆ ಸಲ್ಲಿಸಿದ ನಂತರ, ಆ ಜಲದಿಂದ ಮಹದೇಶ್ವರ ಸ್ವಾಮಿಗೆ ಅಭಿಷೇಕ ನಡೆಸಲಾಗುತ್ತದೆ.</p>.<p>ಹಾಲರವಿಉತ್ಸವಜರಗುವುದಕ್ಕೂ ನಡೆಯುವ ಕತ್ತಿ ಪವಾಡ ಆಚರಣೆಯ ಹಿಂದೆ ಒಂದು ಉದ್ದೇಶ ಇದೆ. ಹರಕೆ ಹೊತ್ತ ಭಕ್ತರೊಬ್ಬರು ಕತ್ತಿಯ ಅಲಗಿನ ಮೇಲೆ ಮಲಗುತ್ತಾರೆ. ಅವರ ಮೇಲೆಬೇಡಗಂಪಣಅರ್ಚಕರು ನಡೆದುಕೊಂಡು ಹೋಗುತ್ತಾರೆ.</p>.<p>‘ಕಳಶಗಳಲ್ಲಿ ನೀರು ತರುವ ಮಾರ್ಗ ಮಧ್ಯದಲ್ಲಿ ಹೆಣ್ಣುಮಕ್ಕಳು ಅಥವಾ ನೀರಿನ ಮೇಲೆ ಯಾವುದಾದರೂ ನಕಾರಾತ್ಮಕ ಶಕ್ತಿಗಳ ಕಣ್ಣುಬಿದ್ದಿದ್ದರೂ ಕತ್ತಿಪವಾಡಮಾಡುವ ಸ್ಥಳದಲ್ಲಿಇವುನಿಲ್ಲುವುದಿಲ್ಲ. ಪವಾಡಮಾಡಿದಸ್ಥಳದಿಂದ ಹಾಲರವೆ ಗಂಗೆ ಶುದ್ಧಳಾಗುತ್ತಾಳೆ’ ಎಂಬ ನಂಬಿಕೆ ಸ್ಥಳೀಯರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>