<p>ಹನೂರು: ‘ಪಟ್ಟಣದ ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ವಹಸಿದ್ದು, ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಣೆ ಕುಂಠಿತಗೊಂಡಿದೆ’ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.</p>.<p>ಶನಿವಾರ ನಡೆದ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಆಡಳಿತ ವ್ಯವಸ್ಥೆ ಅಧೋಗತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾವೇರಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೊಳವೆಬಾವಿಗಳ ಅವಶ್ಯಕತೆ ಬಹುಪಾಲು ಕಡಿಮೆ ಆಗಬಹುದಾದರೂ, ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ. ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವಲ್ಲಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಹೇಳಿದರು.</p>.<p>ಬಾಡಿಗೆ, ಕಂದಾಯ ಸಂಗ್ರಹದಲ್ಲೂ ಲೋಪಗಳಿದ್ದು, ಕಂದಾಯ ಕಟ್ಟಲು ಬಂದವರಿಂದ ಸರಿಯಾಗಿ ವಸೂಲಿ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಮ್ಮದೇ ಆದ ವ್ಯವಸ್ಥೆ ಮಾಡಿಕೊಂಡು ನಿಯಮಾನುಸಾರ ಕೆಲಸ ಮಾಡದೆ ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸಾರ್ವಜನಿಕ ದೂರುಗಳನ್ನೂ ಸಭೆಯಲ್ಲಿ ಉಲ್ಲೇಖಿಸಿದರು.</p>.<p>‘ಇ-ಸ್ವತ್ತು ಕಾರ್ಯಾಚರಣೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಸಾರ್ವಜನಿಕರಿಂದ ಆಧಾರ ಸಹಿತ ದೂರುಗಳು ಬಂದಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ತಕ್ಷಣ ಕ್ರಮ ಕೈಗೊಳ್ಳಲು’ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.</p>.<p>‘ದುಡ್ಡು ಕೊಡುವ ಬೀದಿಗೆ ನೀರು ಹೋಗುತ್ತದೆ’ ಎಂಬ ಸಾರ್ವಜನಿಕ ಆರೋಪಗಳು ಕೇಳಿ ಬರುತ್ತಿದೆ. ಮೂರು ತಿಂಗಳಿಗೊಮ್ಮೆ ಬೋರ್ವೆಲ್ಗಳು ಹಾಳಾಗುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳು ಜನ ಸಾಮಾನ್ಯರೆಲ್ಲರಿಗೂ ಸಮರ್ಪಕ ಕುಡಿಯುವ ನೀರಿನ ಸರಬರಾಜು ಮಾಡಬೇಕು. ಮತ್ತೊಮ್ಮೆ ಈ ರೀತಿಯ ತಾರತಮ್ಯಗಳ ಬಗ್ಗೆ ದೂರುಗಳು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಜಿಲ್ಲಾ ಯೋಜನಾ ನಿರ್ದೇಶಕ ವೆಂಕಟೇಶ್, ತಹಶೀಲ್ದಾರ್ ಚ್ಯೆತ್ರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಆರೋಗ್ಯಾಧಿಕಾರಿ ಪ್ರಕಾಶ್, ಎಂಜಿನಿಯರ್ ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-37-1695546152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನೂರು: ‘ಪಟ್ಟಣದ ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ವಹಸಿದ್ದು, ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಣೆ ಕುಂಠಿತಗೊಂಡಿದೆ’ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.</p>.<p>ಶನಿವಾರ ನಡೆದ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಆಡಳಿತ ವ್ಯವಸ್ಥೆ ಅಧೋಗತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾವೇರಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೊಳವೆಬಾವಿಗಳ ಅವಶ್ಯಕತೆ ಬಹುಪಾಲು ಕಡಿಮೆ ಆಗಬಹುದಾದರೂ, ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ. ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವಲ್ಲಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಹೇಳಿದರು.</p>.<p>ಬಾಡಿಗೆ, ಕಂದಾಯ ಸಂಗ್ರಹದಲ್ಲೂ ಲೋಪಗಳಿದ್ದು, ಕಂದಾಯ ಕಟ್ಟಲು ಬಂದವರಿಂದ ಸರಿಯಾಗಿ ವಸೂಲಿ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ತಮ್ಮದೇ ಆದ ವ್ಯವಸ್ಥೆ ಮಾಡಿಕೊಂಡು ನಿಯಮಾನುಸಾರ ಕೆಲಸ ಮಾಡದೆ ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸಾರ್ವಜನಿಕ ದೂರುಗಳನ್ನೂ ಸಭೆಯಲ್ಲಿ ಉಲ್ಲೇಖಿಸಿದರು.</p>.<p>‘ಇ-ಸ್ವತ್ತು ಕಾರ್ಯಾಚರಣೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಸಾರ್ವಜನಿಕರಿಂದ ಆಧಾರ ಸಹಿತ ದೂರುಗಳು ಬಂದಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ತಕ್ಷಣ ಕ್ರಮ ಕೈಗೊಳ್ಳಲು’ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.</p>.<p>‘ದುಡ್ಡು ಕೊಡುವ ಬೀದಿಗೆ ನೀರು ಹೋಗುತ್ತದೆ’ ಎಂಬ ಸಾರ್ವಜನಿಕ ಆರೋಪಗಳು ಕೇಳಿ ಬರುತ್ತಿದೆ. ಮೂರು ತಿಂಗಳಿಗೊಮ್ಮೆ ಬೋರ್ವೆಲ್ಗಳು ಹಾಳಾಗುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳು ಜನ ಸಾಮಾನ್ಯರೆಲ್ಲರಿಗೂ ಸಮರ್ಪಕ ಕುಡಿಯುವ ನೀರಿನ ಸರಬರಾಜು ಮಾಡಬೇಕು. ಮತ್ತೊಮ್ಮೆ ಈ ರೀತಿಯ ತಾರತಮ್ಯಗಳ ಬಗ್ಗೆ ದೂರುಗಳು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಜಿಲ್ಲಾ ಯೋಜನಾ ನಿರ್ದೇಶಕ ವೆಂಕಟೇಶ್, ತಹಶೀಲ್ದಾರ್ ಚ್ಯೆತ್ರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಆರೋಗ್ಯಾಧಿಕಾರಿ ಪ್ರಕಾಶ್, ಎಂಜಿನಿಯರ್ ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-37-1695546152</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>