<p><strong>ಹನೂರು:</strong> ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ರಸ್ತೆಯನ್ನು ಶನಿವಾರ ಮಣ್ಣು ಹಾಕಿ ತಾತ್ಕಾಲಿಕವಾಗಿ ಸರಿಪಡಿಸಲಾಯಿತು.</p>.<p>ಮೂರು ದಿನಗಳ ಹಿಂದೆ ಬಿದ್ದ ಜೋರು ಮಳೆಗೆ ಸೇಂಟ್ ಮೇರಿಸ್ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಕೊಚ್ಚಿ ಹೋದ ರಸ್’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿ ಗಮನ ಸೆಳೆಯಲಾಗಿತ್ತು. ಇದಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೊಚ್ಚಿ ಹೋಗಿರುವ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ.</p>.<p>ಶಾಶ್ವತ ರಸ್ತೆಗೆ ಆಗ್ರಹ: ಮಳೆ ಬಂದಾಗಲೆಲ್ಲಾ ಮಣ್ಣು ಹಾಕಿ ಸರಿಮಾಡುತ್ತಾರೆ. ಆದರೆ ಮತ್ತೊಮ್ಮೆ ಮಳೆಯಾದರೆ ಹಾಕಿದ್ದ ಮಣ್ಣೆಲ್ಲಾ ಮಳೆ ನೀರಿಗೆ ಕೊಚ್ಚಿ ಹೋಗಿ ರಸ್ತೆ ಮೊದಲಿನಂತೆ ಆಗುತ್ತದೆ. ಆದ್ದರಿಂದ ಈ ಭಾಗಕ್ಕೆ ಡಾಂಬರು ಅಥವಾ ಸಿಸಿ ರಸ್ತೆ ಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-37-1328362864</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ರಸ್ತೆಯನ್ನು ಶನಿವಾರ ಮಣ್ಣು ಹಾಕಿ ತಾತ್ಕಾಲಿಕವಾಗಿ ಸರಿಪಡಿಸಲಾಯಿತು.</p>.<p>ಮೂರು ದಿನಗಳ ಹಿಂದೆ ಬಿದ್ದ ಜೋರು ಮಳೆಗೆ ಸೇಂಟ್ ಮೇರಿಸ್ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಕೊಚ್ಚಿ ಹೋದ ರಸ್’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿ ಗಮನ ಸೆಳೆಯಲಾಗಿತ್ತು. ಇದಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೊಚ್ಚಿ ಹೋಗಿರುವ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ.</p>.<p>ಶಾಶ್ವತ ರಸ್ತೆಗೆ ಆಗ್ರಹ: ಮಳೆ ಬಂದಾಗಲೆಲ್ಲಾ ಮಣ್ಣು ಹಾಕಿ ಸರಿಮಾಡುತ್ತಾರೆ. ಆದರೆ ಮತ್ತೊಮ್ಮೆ ಮಳೆಯಾದರೆ ಹಾಕಿದ್ದ ಮಣ್ಣೆಲ್ಲಾ ಮಳೆ ನೀರಿಗೆ ಕೊಚ್ಚಿ ಹೋಗಿ ರಸ್ತೆ ಮೊದಲಿನಂತೆ ಆಗುತ್ತದೆ. ಆದ್ದರಿಂದ ಈ ಭಾಗಕ್ಕೆ ಡಾಂಬರು ಅಥವಾ ಸಿಸಿ ರಸ್ತೆ ಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-37-1328362864</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>