<p>ಹನೂರು: ‘ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು, ಜನರ ಕಷ್ಟಗಳ ನಿವಾರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ’ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಬಂಡಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಆವರಣದಲ್ಲಿ ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಫಲಾನುಭವಿಗಳನ್ನು ಗುರುತಿಸಿ ಮನೆ ಒದಗಿಸಬೇಕು. ವಲಸೆ ಹೋಗಿರುವ ಕುಟುಂಬಗಳಿಗೆ ಆದಾಯದ ಮೂಲ ತೋರಿಸುವ ಮೂಲಕ ಸ್ವ ಗ್ರಾಮದಲ್ಲಿ ನೆಲೆಯೂರುವಂತೆ ಮಾಡಬೇಕಿದೆ’ ಎಂದರು.</p>.<p>‘ಜನರಿಗೆ ಉದ್ಯೋಗ ದೊರಕಿಸುವ ಹೈನುಗಾರಿಕೆ, ಕೃಷಿ ವ್ಯವಸಾಯಗಳಿಗೆ ಅನುಕೂಲವಾಗುವಂಥ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ನೀರು, ವಿದ್ಯುತ್, ರಸ್ತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಸರ್ಕಾರದ ಸಾಲ ಸೌಲಭ್ಯಗಳು ಸುಲಲಿತವಾಗಿ ದೊರೆತಾಗ ಜನರು ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗಯ್ಯ ಮಾತನಾಡಿ, ‘ಶಾಸಕ ಎಂ.ಆರ್.ಮಂಜುನಾಥ್ ಅವರ ಜನಪರ ಸೇವಾ ಕಾರ್ಯಗಳನ್ನು ಗಮನಿಸಿದ್ದು, ಬಿಜೆಪಿ ತೆರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ’ ತಿಳಿಸಿದರು.</p>.<p>ಬಂಡಳ್ಳಿ ಗ್ರಾಮದ ನಾಗಯ್ಯ, ಮಹದೇವು, ಪುಟ್ಟಸ್ವಾಮಿ, ಕುಳ್ಳ ವೀರಯ್ಯ, ಅಣಗಳ್ಳಿದೊಡ್ಡಿ ನಾಗರಾಜು, ಭರತ್, ಹರೀಶ, ಮಂಗಳಮ್ಮ, ಮಹೇಂದ್ರ ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಬಿಜೆಪಿ, ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಶಂಕರಪ್ಪ, ತಿರುಪತಿ, ಸಮೀವುಲ್ಲಾ, ಮಂಜೇಶ್, ಶುವಣಪ್ಪ, ಉದ್ದನೂರು ಗಿರೀಶ್, ಅಣಗಳ್ಳಿ ಚಂದ್ರು, ಮಾದೇಶ್, ಶಿವರಾಜು, ಹುಚ್ಚಯ್ಯ, ಎಸ್.ಆರ್.ಮಹದೇವ್, ನಟರಾಜು, ಜೇಸಿಮ್ ಪಾಷ, ಜವಾದ್, ಗೋಪಾಲ್ ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-37-427130216</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನೂರು: ‘ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು, ಜನರ ಕಷ್ಟಗಳ ನಿವಾರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ’ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಬಂಡಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಆವರಣದಲ್ಲಿ ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಫಲಾನುಭವಿಗಳನ್ನು ಗುರುತಿಸಿ ಮನೆ ಒದಗಿಸಬೇಕು. ವಲಸೆ ಹೋಗಿರುವ ಕುಟುಂಬಗಳಿಗೆ ಆದಾಯದ ಮೂಲ ತೋರಿಸುವ ಮೂಲಕ ಸ್ವ ಗ್ರಾಮದಲ್ಲಿ ನೆಲೆಯೂರುವಂತೆ ಮಾಡಬೇಕಿದೆ’ ಎಂದರು.</p>.<p>‘ಜನರಿಗೆ ಉದ್ಯೋಗ ದೊರಕಿಸುವ ಹೈನುಗಾರಿಕೆ, ಕೃಷಿ ವ್ಯವಸಾಯಗಳಿಗೆ ಅನುಕೂಲವಾಗುವಂಥ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ನೀರು, ವಿದ್ಯುತ್, ರಸ್ತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಸರ್ಕಾರದ ಸಾಲ ಸೌಲಭ್ಯಗಳು ಸುಲಲಿತವಾಗಿ ದೊರೆತಾಗ ಜನರು ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ’ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗಯ್ಯ ಮಾತನಾಡಿ, ‘ಶಾಸಕ ಎಂ.ಆರ್.ಮಂಜುನಾಥ್ ಅವರ ಜನಪರ ಸೇವಾ ಕಾರ್ಯಗಳನ್ನು ಗಮನಿಸಿದ್ದು, ಬಿಜೆಪಿ ತೆರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ’ ತಿಳಿಸಿದರು.</p>.<p>ಬಂಡಳ್ಳಿ ಗ್ರಾಮದ ನಾಗಯ್ಯ, ಮಹದೇವು, ಪುಟ್ಟಸ್ವಾಮಿ, ಕುಳ್ಳ ವೀರಯ್ಯ, ಅಣಗಳ್ಳಿದೊಡ್ಡಿ ನಾಗರಾಜು, ಭರತ್, ಹರೀಶ, ಮಂಗಳಮ್ಮ, ಮಹೇಂದ್ರ ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಬಿಜೆಪಿ, ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಶಂಕರಪ್ಪ, ತಿರುಪತಿ, ಸಮೀವುಲ್ಲಾ, ಮಂಜೇಶ್, ಶುವಣಪ್ಪ, ಉದ್ದನೂರು ಗಿರೀಶ್, ಅಣಗಳ್ಳಿ ಚಂದ್ರು, ಮಾದೇಶ್, ಶಿವರಾಜು, ಹುಚ್ಚಯ್ಯ, ಎಸ್.ಆರ್.ಮಹದೇವ್, ನಟರಾಜು, ಜೇಸಿಮ್ ಪಾಷ, ಜವಾದ್, ಗೋಪಾಲ್ ನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-37-427130216</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>