ಕೌದಳ್ಳಿ, ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ತುಳಸಿಕೆರೆ, ಇಂಡಿಗನತ್ತ, ನಾಗಮಲೆ, ಪಡಸಲನಾಥ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ವರ್ಷದ ಉತ್ತಮ ಮಳೆಯಾಗಿದೆ. ಮಳೆಯಿಲ್ಲದೇ ಕಂಗಲಾಗಿದ್ದ ಜನಜಾನುವಾರುಗಳಿಗೆ, ಒಣಗಿ ನಿಂತಿದ್ದ ಅರಣ್ಯಕ್ಕೂ ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಜೀವಕಳೆಯನ್ನು ನೀಡಿದೆ.