<p><strong>ಹನೂರು</strong>: ತಾಲ್ಲೂಕಿನ ಮಾರ್ಟಳ್ಳಿ ಹಾಗೂ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದ್ದು ಕೆರೆಗಳು ಹಾಗೂ ಶಾಲಾ ಮೈದಾನಗಳು ಮಳೆ ನೀರಿನಿಂದ ಆವೃತವಾಗಿವೆ.</p>.<p>ಮಾರ್ಟಳ್ಳಿಯಲ್ಲಿ 0.18 ಸೆ.ಮೀ, ವಡ್ಡರದೊಡ್ಡಿ 1.86 ಸೆ.ಮೀ ಹಾಗೂ ಸಂದನಪಾಳ್ಯದಲ್ಲಿ 0.13 ಸೆ.ಮೀ ಮಳೆಯಾಗಿದ್ದು, ಗ್ರಾಮಗಳಲ್ಲಿ ರಸ್ತೆ, ಚರಂಡಿಗಳು, ಶಾಲಾ ಮೈದಾನಗಳು ಮಳೆ ನೀರಿನಿಂದ ಆವೃತವಾದವು. ಬುಧವಾರ ಬೆಳಿಗ್ಗೆಯೂ ವರ್ಷಧಾರೆಯಾಗಿದ್ದು, ಜನರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹೋಗಲು ಪರದಾಡುವಂತಾಯಿತು.</p>.<p>ಕೌದಳ್ಳಿ, ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ತುಳಸಿಕೆರೆ, ಇಂಡಿಗನತ್ತ, ನಾಗಮಲೆ, ಪಡಸಲನಾಥ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ವರ್ಷದ ಉತ್ತಮ ಮಳೆಯಾಗಿದೆ. ಮಳೆಯಿಲ್ಲದೇ ಕಂಗಲಾಗಿದ್ದ ಜನಜಾನುವಾರುಗಳಿಗೆ, ಒಣಗಿ ನಿಂತಿದ್ದ ಅರಣ್ಯಕ್ಕೂ ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಜೀವಕಳೆಯನ್ನು ನೀಡಿದೆ.</p>.<p>ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆಯೇ ಮಳೆಯಾಗಿದೆ. ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಬಂದಿದ್ದ ಭಕ್ತರು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ತಮ್ಮ ಹರಕೆ ಕಾಣಿಕೆಗಳನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ತಾಲ್ಲೂಕಿನ ಮಾರ್ಟಳ್ಳಿ ಹಾಗೂ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದ್ದು ಕೆರೆಗಳು ಹಾಗೂ ಶಾಲಾ ಮೈದಾನಗಳು ಮಳೆ ನೀರಿನಿಂದ ಆವೃತವಾಗಿವೆ.</p>.<p>ಮಾರ್ಟಳ್ಳಿಯಲ್ಲಿ 0.18 ಸೆ.ಮೀ, ವಡ್ಡರದೊಡ್ಡಿ 1.86 ಸೆ.ಮೀ ಹಾಗೂ ಸಂದನಪಾಳ್ಯದಲ್ಲಿ 0.13 ಸೆ.ಮೀ ಮಳೆಯಾಗಿದ್ದು, ಗ್ರಾಮಗಳಲ್ಲಿ ರಸ್ತೆ, ಚರಂಡಿಗಳು, ಶಾಲಾ ಮೈದಾನಗಳು ಮಳೆ ನೀರಿನಿಂದ ಆವೃತವಾದವು. ಬುಧವಾರ ಬೆಳಿಗ್ಗೆಯೂ ವರ್ಷಧಾರೆಯಾಗಿದ್ದು, ಜನರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹೋಗಲು ಪರದಾಡುವಂತಾಯಿತು.</p>.<p>ಕೌದಳ್ಳಿ, ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ತುಳಸಿಕೆರೆ, ಇಂಡಿಗನತ್ತ, ನಾಗಮಲೆ, ಪಡಸಲನಾಥ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ವರ್ಷದ ಉತ್ತಮ ಮಳೆಯಾಗಿದೆ. ಮಳೆಯಿಲ್ಲದೇ ಕಂಗಲಾಗಿದ್ದ ಜನಜಾನುವಾರುಗಳಿಗೆ, ಒಣಗಿ ನಿಂತಿದ್ದ ಅರಣ್ಯಕ್ಕೂ ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಜೀವಕಳೆಯನ್ನು ನೀಡಿದೆ.</p>.<p>ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆಯೇ ಮಳೆಯಾಗಿದೆ. ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಬಂದಿದ್ದ ಭಕ್ತರು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ತಮ್ಮ ಹರಕೆ ಕಾಣಿಕೆಗಳನ್ನು ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>