<p><strong>ಚಾಮರಾಜನಗರ</strong>: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯವಾದ ರಾಜ್ಯಮಟ್ಟದ ನೆಟ್ಬಾಲ್ ಟೂರ್ನಿಯಲ್ಲಿ ಹಾಸನ ತಂಡ 14 ಹಾಗೂ 17 ವರ್ಷದೊಳಗಿನವರ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಯಿತು. </p>.<p>17 ವರ್ಷದೊಳಗಿನ ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ ತಂಡ 25–21ರಿಂದ ಬೆಂಗಳೂರು ಉತ್ತರ ತಂಡದ ವಿರುದ್ಧ; ಬಾಲಕರ ಫೈನಲ್ನಲ್ಲಿ ಹಾಸನ 38–31ರಿಂದ ಮೈಸೂರು ತಂಡದ ವಿರುದ್ಧ, 14 ವರ್ಷದೊಳಗಿನವರ ಬಾಲಕರ ಫೈನಲ್ನಲ್ಲಿ ಹಾಸನ 17–11ರಿಂದ ಮೈಸೂರು ಎದುರು, ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ 23–12ರಿಂದ ಮೈಸೂರು ತಂಡವನ್ನು ಮಣಿಸಿತು.</p>.<p>ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಾಸನ ತಂಡ ಎಲ್ಲ ವಿಭಾಗಗಳಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಂಡು ಸಂಭ್ರಮಿಸಿತು. ಮೈಸೂರು ತಂಡ ಮೂರು ವಿಭಾಗಗಳಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.</p>.<p>ಜ.8ರಂದು ರಾಜಸ್ತಾನದ ಬರ್ಮರ್ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಯಲಿದ್ದು ವಿಜೇತ ತಂಡಗಳು ಭಾಗವಹಿಸಲು ಅರ್ಹತೆ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯವಾದ ರಾಜ್ಯಮಟ್ಟದ ನೆಟ್ಬಾಲ್ ಟೂರ್ನಿಯಲ್ಲಿ ಹಾಸನ ತಂಡ 14 ಹಾಗೂ 17 ವರ್ಷದೊಳಗಿನವರ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಯಿತು. </p>.<p>17 ವರ್ಷದೊಳಗಿನ ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ ತಂಡ 25–21ರಿಂದ ಬೆಂಗಳೂರು ಉತ್ತರ ತಂಡದ ವಿರುದ್ಧ; ಬಾಲಕರ ಫೈನಲ್ನಲ್ಲಿ ಹಾಸನ 38–31ರಿಂದ ಮೈಸೂರು ತಂಡದ ವಿರುದ್ಧ, 14 ವರ್ಷದೊಳಗಿನವರ ಬಾಲಕರ ಫೈನಲ್ನಲ್ಲಿ ಹಾಸನ 17–11ರಿಂದ ಮೈಸೂರು ಎದುರು, ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ 23–12ರಿಂದ ಮೈಸೂರು ತಂಡವನ್ನು ಮಣಿಸಿತು.</p>.<p>ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಾಸನ ತಂಡ ಎಲ್ಲ ವಿಭಾಗಗಳಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಂಡು ಸಂಭ್ರಮಿಸಿತು. ಮೈಸೂರು ತಂಡ ಮೂರು ವಿಭಾಗಗಳಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.</p>.<p>ಜ.8ರಂದು ರಾಜಸ್ತಾನದ ಬರ್ಮರ್ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಯಲಿದ್ದು ವಿಜೇತ ತಂಡಗಳು ಭಾಗವಹಿಸಲು ಅರ್ಹತೆ ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>