<p>ಚಾಮರಾಜನಗರ: ಮಹಿಳೆಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮುನಿಯಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. </p>.<p>ಎರಡು ದಿನಗಳ ಹಿಂದೆ ಸಿಮ್ಸ್ ಆಸ್ಪತ್ರೆಗೆ ಬಂದಿದ್ದ ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ಅವರು ತಮ್ಮ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅವರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದರು ಎಂದು ಆರೋಪಿಸಲಾಗಿದೆ. ಆ ಬಳಿಕ ಅಸ್ವಸ್ಥಗೊಂಡ ಅವರನ್ನು ಸಿಮ್ಸ್ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದರು. ಮಹಿಳೆಗೆ ಚಿಕಿತ್ಸೆ ನೀಡಿದ್ದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. </p>.<p>ಈ ಸಂಬಂಧ ಮಹಿಳೆ ದೂರು ನೀಡಿಲ್ಲ. ಆದರೆ, ಆಸ್ಪತ್ರೆಯಿಂದ ಠಾಣೆಗೆ ಬಂದ ಎಂಎಲ್ಸಿ (ಮೆಡಿಕಲ್ ಲೀಗಲ್ ಕೇಸ್) ಆಧಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು ಮುನಿಯಪ್ಪ ಅವರನ್ನು ಅಮಾನತು ಮಾಡಿ ಶನಿವಾರ ಸಂಜೆ ಆದೇಶ ಹೊರಡಿಸಿದ್ದಾರೆ. </p>.<p>ಪ್ರಕರಣದ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ವಿಚಾರಿಸಿದಾಗ, ‘ಮಹಿಳೆ ಅಸ್ವಸ್ಥಗೊಂಡು ಬಂದಿರುವುದು ನಿಜ. ನಾವು ಚಿಕಿತ್ಸೆಯನ್ನೂ ನೀಡಿದ್ದೇವೆ. ತಾನು ಬಿದ್ದು ಅಸ್ವಸ್ಥಗೊಂಡೆ ಎಂದು ಹೇಳಿಕೆ ನೀಡಿದ್ದಾರೆ’ ಎಂದರು. </p>.<p>‘ಮಹಿಳೆ ನಮಗೆ ದೂರು ಕೊಟ್ಟಿಲ್ಲ. ಆದರೆ ನಮ್ಮ ಸಿಬ್ಬಂದಿಯೊಬ್ಬರು ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ಮಾಹಿತಿ, ಅದಕ್ಕೆ ಪೂರಕ ದಾಖಲೆ ನಮಗೆ ಸಿಕ್ಕಿದೆ. ಹಾಗಾಗಿ, ಸ್ವಯಂ ಪ್ರೇರಿತವಾಗಿ ಈ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ವೈದ್ಯರು ನಗರದ ಪಟ್ಟಣ ಠಾಣೆಗೆ ಮಹಿಳೆ ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಪ್ರಕರಣ ಮಹಿಳಾ ಠಾಣೆ ವ್ಯಾಪ್ತಿಗೆ ಬರುವುದರಿಂದ, ಮಹಿಳಾ ಠಾಣೆಯ ಅಧಿಕಾರಿಗಳ ಗಮನಕ್ಕೆ ಪಟ್ಟಣ ಪೊಲೀಸರು ಈ ವಿಚಾರ ತಂದಿದ್ದರು ಎಂದು ಗೊತ್ತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಮಹಿಳೆಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮುನಿಯಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. </p>.<p>ಎರಡು ದಿನಗಳ ಹಿಂದೆ ಸಿಮ್ಸ್ ಆಸ್ಪತ್ರೆಗೆ ಬಂದಿದ್ದ ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ಅವರು ತಮ್ಮ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅವರೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದರು ಎಂದು ಆರೋಪಿಸಲಾಗಿದೆ. ಆ ಬಳಿಕ ಅಸ್ವಸ್ಥಗೊಂಡ ಅವರನ್ನು ಸಿಮ್ಸ್ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದರು. ಮಹಿಳೆಗೆ ಚಿಕಿತ್ಸೆ ನೀಡಿದ್ದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. </p>.<p>ಈ ಸಂಬಂಧ ಮಹಿಳೆ ದೂರು ನೀಡಿಲ್ಲ. ಆದರೆ, ಆಸ್ಪತ್ರೆಯಿಂದ ಠಾಣೆಗೆ ಬಂದ ಎಂಎಲ್ಸಿ (ಮೆಡಿಕಲ್ ಲೀಗಲ್ ಕೇಸ್) ಆಧಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅವರು ಮುನಿಯಪ್ಪ ಅವರನ್ನು ಅಮಾನತು ಮಾಡಿ ಶನಿವಾರ ಸಂಜೆ ಆದೇಶ ಹೊರಡಿಸಿದ್ದಾರೆ. </p>.<p>ಪ್ರಕರಣದ ಬಗ್ಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ವಿಚಾರಿಸಿದಾಗ, ‘ಮಹಿಳೆ ಅಸ್ವಸ್ಥಗೊಂಡು ಬಂದಿರುವುದು ನಿಜ. ನಾವು ಚಿಕಿತ್ಸೆಯನ್ನೂ ನೀಡಿದ್ದೇವೆ. ತಾನು ಬಿದ್ದು ಅಸ್ವಸ್ಥಗೊಂಡೆ ಎಂದು ಹೇಳಿಕೆ ನೀಡಿದ್ದಾರೆ’ ಎಂದರು. </p>.<p>‘ಮಹಿಳೆ ನಮಗೆ ದೂರು ಕೊಟ್ಟಿಲ್ಲ. ಆದರೆ ನಮ್ಮ ಸಿಬ್ಬಂದಿಯೊಬ್ಬರು ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ಮಾಹಿತಿ, ಅದಕ್ಕೆ ಪೂರಕ ದಾಖಲೆ ನಮಗೆ ಸಿಕ್ಕಿದೆ. ಹಾಗಾಗಿ, ಸ್ವಯಂ ಪ್ರೇರಿತವಾಗಿ ಈ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ವೈದ್ಯರು ನಗರದ ಪಟ್ಟಣ ಠಾಣೆಗೆ ಮಹಿಳೆ ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಪ್ರಕರಣ ಮಹಿಳಾ ಠಾಣೆ ವ್ಯಾಪ್ತಿಗೆ ಬರುವುದರಿಂದ, ಮಹಿಳಾ ಠಾಣೆಯ ಅಧಿಕಾರಿಗಳ ಗಮನಕ್ಕೆ ಪಟ್ಟಣ ಪೊಲೀಸರು ಈ ವಿಚಾರ ತಂದಿದ್ದರು ಎಂದು ಗೊತ್ತಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>