<p class="title">ಚಾಮರಾಜನಗರ: ಯಳಂದೂರು ತಾಲ್ಲೂಕಿನ ಆದರ್ಶ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ, ಇತರ ಶಾಲೆಗಳಲ್ಲೂ ಮಕ್ಕಳನ್ನು ರ್ಯಾಂಡಮ್ ಆಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಯೋಜಿಸಿದೆ.</p>.<p class="bodytext">‘ಈ ಬಗ್ಗೆ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜೆ.ಎಂ.ವಿಶ್ವೇಶ್ವರಯ್ಯ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p class="bodytext">398 ಮಕ್ಕಳಿರುವ ಯಳಂದೂರಿನ ಆದರ್ಶ ಶಾಲೆಯಲ್ಲಿ ಮಕ್ಕಳನ್ನು ರ್ಯಾಂಡಮ್ ಆಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ನಾಲ್ಕು ದಿನಗಳ ಹಿಂದೆ ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪರೀಕ್ಷೆ ನಡೆಸುವಾಗ ಮತ್ತೊಬ್ಬ ವಿದ್ಯಾರ್ಥಿಗೂ ಕೋವಿಡ್ ಇರುವುದು ಖಚಿತವಾಗಿತ್ತು.</p>.<p class="bodytext">ಹೀಗಾಗಿ ಬೇರೆ ಶಾಲೆಗಳಲ್ಲೂ ಇದೇ ಮಾದರಿಯಲ್ಲಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಯೋಚಿಸಿದೆ.</p>.<p class="Subhead">ಈ ಮಧ್ಯೆ, ಸೋಂಕು ದೃಢಪಟ್ಟ ವಿದ್ಯಾರ್ಥಿಗಳು ಆರೋಗ್ಯದಿಂದಿದ್ದು ಸಂತೇಮರಹಳ್ಳಿಯ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="bodytext">‘ಇಬ್ಬರೂ ವಿದ್ಯಾರ್ಥಿಗಳನ್ನು ಖದ್ದಾಗಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಅವರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಇಬ್ಬರೂ ಆಟವಾಡುತ್ತಾ ಚೆನ್ನಾಗಿದ್ದಾರೆ. ಐದು ದಿನಗಳ ಬಳಿಕ ಅವರು ಮನೆಗೆ ತೆರಳಲಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಪಿ.ಮಂಜುನಾಥ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಇನ್ನಿಬ್ಬರು ವಿದ್ಯಾರ್ಥಿಗಳು: ‘ಇದೇ ಕೋವಿಡ್ ಕೇಂದ್ರದಲ್ಲಿ ಸೋಂಕು ದೃಢಪಟ್ಟ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದಾರೆ. ಒಬ್ಬ ಮಂಗಳೂರಿನವ. ಇನ್ನೊಬ್ಬ ಮೈಸೂರಿನವ. ಜಿಲ್ಲೆಯಲ್ಲಿ ಪರೀಕ್ಷೆ ನಡೆಸುವಾಗ ಸೋಂಕು ಇರುವುದು ಗೊತ್ತಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="bodytext">‘ಎಲ್ಲ ಶಾಲೆಗಳಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ರೋಗ ಲಕ್ಷಣ ಇರುವ ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಹೇಳುತ್ತಿದ್ದೇವೆ. ಮಕ್ಕಳಲ್ಲೂ ಪರೀಕ್ಷೆಗೆ ಕೊಂಚ ಹಿಂಜರಿಕೆ ಕಂಡು ಬರುತ್ತಿದೆ’ ಎಂದು ಮಂಜುನಾಥ್ ಅವರು ಹೇಳಿದರು.</p>.<p class="Briefhead">ನಾಲ್ಕು ಹೊಸ ಪ್ರಕರಣ, ನಾಲ್ವರು ಚೇತರಿಕೆ</p>.<p>ಈ ಮಧ್ಯೆ, ಜಿಲ್ಲೆಯಲ್ಲಿ ಭಾನುವಾರ ನಾಲ್ಕು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ನಾಲ್ವರು ಸೋಂಕು ಮುಕ್ತರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸೋಂಕಿತರ ಸಂಖ್ಯೆ 50 ಇದೆ. ಇಬ್ಬರು ಐಸಿಯುನಲ್ಲಿ, 18 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೆ 32,439 ಪ್ರಕರಣಗಳು ದೃಢಪಟ್ಟಿವೆ. 31,851 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,641 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,637 ವರದಿಗಳು ನೆಗೆಟಿವ್ ಬಂದು, ನಾಲ್ವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಮೂವರು ಹನೂರು ತಾಲ್ಲೂಕಿನವರು, ಇನ್ನೊಬ್ಬರು ಚಾಮರಾಜನಗರ ತಾಲ್ಲೂಕಿನವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಚಾಮರಾಜನಗರ: ಯಳಂದೂರು ತಾಲ್ಲೂಕಿನ ಆದರ್ಶ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ, ಇತರ ಶಾಲೆಗಳಲ್ಲೂ ಮಕ್ಕಳನ್ನು ರ್ಯಾಂಡಮ್ ಆಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಯೋಜಿಸಿದೆ.</p>.<p class="bodytext">‘ಈ ಬಗ್ಗೆ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜೆ.ಎಂ.ವಿಶ್ವೇಶ್ವರಯ್ಯ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p class="bodytext">398 ಮಕ್ಕಳಿರುವ ಯಳಂದೂರಿನ ಆದರ್ಶ ಶಾಲೆಯಲ್ಲಿ ಮಕ್ಕಳನ್ನು ರ್ಯಾಂಡಮ್ ಆಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ನಾಲ್ಕು ದಿನಗಳ ಹಿಂದೆ ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪರೀಕ್ಷೆ ನಡೆಸುವಾಗ ಮತ್ತೊಬ್ಬ ವಿದ್ಯಾರ್ಥಿಗೂ ಕೋವಿಡ್ ಇರುವುದು ಖಚಿತವಾಗಿತ್ತು.</p>.<p class="bodytext">ಹೀಗಾಗಿ ಬೇರೆ ಶಾಲೆಗಳಲ್ಲೂ ಇದೇ ಮಾದರಿಯಲ್ಲಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಯೋಚಿಸಿದೆ.</p>.<p class="Subhead">ಈ ಮಧ್ಯೆ, ಸೋಂಕು ದೃಢಪಟ್ಟ ವಿದ್ಯಾರ್ಥಿಗಳು ಆರೋಗ್ಯದಿಂದಿದ್ದು ಸಂತೇಮರಹಳ್ಳಿಯ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="bodytext">‘ಇಬ್ಬರೂ ವಿದ್ಯಾರ್ಥಿಗಳನ್ನು ಖದ್ದಾಗಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದೇನೆ. ಅವರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಇಬ್ಬರೂ ಆಟವಾಡುತ್ತಾ ಚೆನ್ನಾಗಿದ್ದಾರೆ. ಐದು ದಿನಗಳ ಬಳಿಕ ಅವರು ಮನೆಗೆ ತೆರಳಲಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಪಿ.ಮಂಜುನಾಥ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ಇನ್ನಿಬ್ಬರು ವಿದ್ಯಾರ್ಥಿಗಳು: ‘ಇದೇ ಕೋವಿಡ್ ಕೇಂದ್ರದಲ್ಲಿ ಸೋಂಕು ದೃಢಪಟ್ಟ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದಾರೆ. ಒಬ್ಬ ಮಂಗಳೂರಿನವ. ಇನ್ನೊಬ್ಬ ಮೈಸೂರಿನವ. ಜಿಲ್ಲೆಯಲ್ಲಿ ಪರೀಕ್ಷೆ ನಡೆಸುವಾಗ ಸೋಂಕು ಇರುವುದು ಗೊತ್ತಾಗಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="bodytext">‘ಎಲ್ಲ ಶಾಲೆಗಳಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ರೋಗ ಲಕ್ಷಣ ಇರುವ ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಹೇಳುತ್ತಿದ್ದೇವೆ. ಮಕ್ಕಳಲ್ಲೂ ಪರೀಕ್ಷೆಗೆ ಕೊಂಚ ಹಿಂಜರಿಕೆ ಕಂಡು ಬರುತ್ತಿದೆ’ ಎಂದು ಮಂಜುನಾಥ್ ಅವರು ಹೇಳಿದರು.</p>.<p class="Briefhead">ನಾಲ್ಕು ಹೊಸ ಪ್ರಕರಣ, ನಾಲ್ವರು ಚೇತರಿಕೆ</p>.<p>ಈ ಮಧ್ಯೆ, ಜಿಲ್ಲೆಯಲ್ಲಿ ಭಾನುವಾರ ನಾಲ್ಕು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ನಾಲ್ವರು ಸೋಂಕು ಮುಕ್ತರಾಗಿದ್ದಾರೆ. ಸಾವು ಸಂಭವಿಸಿಲ್ಲ.</p>.<p>ಸೋಂಕಿತರ ಸಂಖ್ಯೆ 50 ಇದೆ. ಇಬ್ಬರು ಐಸಿಯುನಲ್ಲಿ, 18 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೆ 32,439 ಪ್ರಕರಣಗಳು ದೃಢಪಟ್ಟಿವೆ. 31,851 ಮಂದಿ ಗುಣಮುಖರಾಗಿದ್ದಾರೆ.</p>.<p>ಭಾನುವಾರ 1,641 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,637 ವರದಿಗಳು ನೆಗೆಟಿವ್ ಬಂದು, ನಾಲ್ವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಮೂವರು ಹನೂರು ತಾಲ್ಲೂಕಿನವರು, ಇನ್ನೊಬ್ಬರು ಚಾಮರಾಜನಗರ ತಾಲ್ಲೂಕಿನವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>