ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಹೆಚ್ಚಿನ ಜನಜಂಗುಳಿ

Last Updated 12 ಮೇ 2021, 7:37 IST
ಅಕ್ಷರ ಗಾತ್ರ

ಚಾಮರಾಜನಗರ: ಗುರುವಾರದಿಂದ 4 ದಿನಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ಬುಧವಾರ ಬೆಳಿಗ್ಗೆ ಚಾಮರಾಜನಗರದಲ್ಲಿ ನೂರಾರು ಮಂದಿ ಒಮ್ಮೆಗೆ ಖರೀದಿಗೆ ಬಂದಿದ್ದರಿಂದ ಹೆಚ್ಚಿನ ಜನದಟ್ಟಣೆ ಹಾಗೂ ವಾಹನದಟ್ಟಣೆ ಕಂಡು ಬಂತು.

ಇಲ್ಲಿನ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಮಾರುಕಟ್ಟೆಯ ಮುಂಭಾಗ, ಜೋಡಿರಸ್ತೆ ಸೇರಿದಂತೆ ಎಲ್ಲ ಪ್ರಮುಖ ರಸ್ತೆಗಳು ಜನರಿಂದ ತುಂಬಿ ಹೋಗಿತ್ತು. ಖರೀದಿ ಭರಾಟೆ ಎಲ್ಲೆಡೆ ಹೆಚ್ಚಿತ್ತು.

ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಗುರುವಾರದಿಂದ ಭಾನುವಾರದವರೆಗೆ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶಿಸಿದೆ. ಈ ವೇಳೆ ದಿನಸಿ ಖರೀದಿಗೂ ಅವಕಾಶ ನೀಡಿಲ್ಲದೇ ಇರುವುದರಿಂದ ಜನಜಂಗುಳಿ ಬುಧವಾರ ಅಧಿಕವಾಗಿತ್ತು.

ಮಂಗಳವಾರ 6 ಗಂಟೆಯಿಂದ ಬುಧವಾರ ಬೆಳಿಗ್ಗೆ 9 ಗಂಟೆಯವರೆಗೆ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT