ಚಂದಕವಾಡಿ ಹೋಬಳಿಯಲ್ಲಿ ಹೊನ್ನುಹೊಳೆ, ಸುವರ್ಣಾವತಿ ನಾಲೆಗಳು, ಕೆರೆಗಳ ನಾಲೆಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಜ್ಯೋತಿಗೌಡನಪುರ, ಹೆಬ್ಬಸೂರು, ನಲ್ಲೂರು, ಚಂದಕವಾಡಿ ವ್ಯಾಪ್ತಿಯಲ್ಲಿ ಅಡಿಕೆ, ತೆಂಗು, ಬಾಳೆ, ಅರಿಸಿನ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.